ರಾಷ್ಟ್ರಮಟ್ಟದ ಯೋಗಸ್ಫರ್ಧೆಯಲ್ಲಿ ಮಂಜುನಾಥ ದ್ವಿತೀಯ

ಯೋಗ ಫೆಡರೇಶನ್ ಆಫ್ ಇಂಡಿಯಾ ರಾಜಸ್ಥಾನದ ಜೈಪುರದಲ್ಲಿ ನ.9ರಿಂದ 12ವರೆಗೆ ನಡೆಸಿದ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಸಿದ್ದಾಪುರದ ಮಂಜುನಾಥ ಎಂ.ನಾಯ್ಕ ದ್ವಿತೀಯ ಸ್ಥಾನಪಡೆ ದುಕೊಂಡಿದ್ದಾರೆ.
ಯೋಗಸ್ಪರ್ಧೆಯಲ್ಲಿ ಸುಮಾರು 800ಕ್ಕೂ ಹೆಚ್ಚು ಸ್ಪರ್ಧಾಳುಗಳು ಪಾಲ್ಗೊಂಡಿದ್ದರು. ಉತ್ತರ ಕನ್ನಡ ಜಿಲ್ಲೆಯಿಂದ 8ಜನಪಾಲ್ಗೊಂಡಿದ್ದು ಅದರಲ್ಲಿ ನಾಲ್ಕು ಜನ ಸಿದ್ದಾಪುರದವರಾಗಿದ್ದಾರೆ.
ಶಿರಸಿಯ ಮಂಗಳಗೌರಿ ಭಟ್ಟ 5ನೇ ಸ್ಥಾನಪಡೆದುಕೊಂಡಿದ್ದಾರೆ.
ಸಿದ್ದಾಪುರದ ಮಂಜುನಾಥ ಎಂ.ನಾಯ್ಕ, ಅವರ ಪತ್ನಿ ಶಿಲ್ಪಾ ಎಂ.ನಾಯ್ಕ, ಪುಟ್ಟರಾಜು ಗೌಡ ಹಾಗೂ ಅವರ ಪತ್ನಿ ಸಾವಿತ್ರಿ ಪಿ.ಗೌಡ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಈ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನಪಡೆದು ಸಿದ್ದಾಪುರಕ್ಕೆ ಆಗಮಿಸಿದ ಮಂಜುನಾಥ ಎಂ.ನಾಯ್ಕ ಹಾಗೂ ಎಲ್ಲ ಸ್ಪರ್ಧಾಳುಗಳನ್ನು ಪಟ್ಟಣದ ಹೊಸೂರು ವೃತ್ತದಲ್ಲಿ ಸ್ಥಳೀಯ ಫತಂಜಲಿ ಯೋಗ ಸಮಿತಿಯ ವಿ.ಎಂ.ಹೆಗಡೆ, ಎ.ಆರ್.ನಾಯ್ಕ, ಸುದರ್ಶನ ಪಿಳ್ಳೆ, ವೀಣಾ ಆನಂದ ಶೇಟ್, ಸಾವಿತ್ರಿ ಅವದಾನಿ, ಲಕ್ಷ್ಮಣ ಐ. ನಾಯ್ಕ, ವಾಸುದೇವ ಶೇಟ್, ಪ್ರಶಾಂತ ರೋಖಡೆ ಹಾಗೂ ಸಾರ್ವಜನಿಕರು ಮಾಲಾರ್ಪಣೆ ಮಾಡಿ ಸ್ವಾಗತಕೋರಿದರು.

2019 ನೇ ಸಾಲಿನ ‘ಮೋಹನ ಕುರುಡಗಿ ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ

ಕನ್ನಡದ ಕವಿ ಮೋಹನ ಕುರುಡಗಿಯವರ ನೆನಪಿನಲ್ಲಿ ಕೊಡಲಾಗುವ ‘ಮೋಹನ ಕುರುಡಗಿ ಕಾವ್ಯ ಪ್ರಶಸ್ತಿ-2019’ ಕ್ಕಾಗಿ ಕನ್ನಡದ ಕವಿಗಳಿಂದ 2019 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವನ ಸಂಕಲನಗಳು ಬೇಡ. ಈ ಪ್ರಶಸ್ತಿಯು ರೂ. 10,000 ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನಗಳನ್ನೊಳಗೊಂಡಿದೆ.
ಆಸಕ್ತರು ತಮ್ಮ ಕವನ ಸಂಕಲನದ ಎರಡು ಪ್ರತಿಗಳನ್ನು ಕಳಿಸಲು ಕೋರಲಾಗಿದೆ.
ವಿ.ಸೂ: ಯಾವುದೇ ಕಾರಣಕ್ಕೂ ಕವನ ಸಂಕಲನದ ಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ ಮತ್ತು ನಿರ್ಣಾಯಕರ ನಿರ್ಣಯವೇ ಅಂತಿಮವಾಗಿರುತ್ತದೆ. ಕವನ ಸಂಕಲನ ಕಳಿಸಲು ಕೊನೆಯ ದಿನಾಂಕ: 10 ಜನವರಿ 2020ಕವನ ಸಂಕಲನ ಕಳಿಸಬೇಕಾದ ವಿಳಾಸ: ಶ್ರೀ ಮಂಜುನಾಥ ಟಿ. ಪಟಗಾರ, ಅಧ್ಯಕ್ಷರು, ನವಚೇತನ ಸಾಂಸ್ಕøತಿಕ ಕಲಾ ಸಾಹಿತ್ಯ ವೇದಿಕೆ, ಬಾಳಗಿಮನೆ, ಯಲ್ಲಾಪುರ-581359, ಉತ್ತರ ಕನ್ನಡ ಜಿಲ್ಲೆ; ಮೊ: 9449148467

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *