2019 ನೇ ಸಾಲಿನ ‘ಮೋಹನ ಕುರುಡಗಿ ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ

ಕನ್ನಡದ ಕವಿ ಮೋಹನ ಕುರುಡಗಿಯವರ ನೆನಪಿನಲ್ಲಿ ಕೊಡಲಾಗುವ ‘ಮೋಹನ ಕುರುಡಗಿ ಕಾವ್ಯ ಪ್ರಶಸ್ತಿ-2019’ ಕ್ಕಾಗಿ ಕನ್ನಡದ ಕವಿಗಳಿಂದ 2019 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವನ ಸಂಕಲನಗಳು ಬೇಡ. ಈ ಪ್ರಶಸ್ತಿಯು ರೂ. 10,000 ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನಗಳನ್ನೊಳಗೊಂಡಿದೆ.
ಆಸಕ್ತರು ತಮ್ಮ ಕವನ ಸಂಕಲನದ ಎರಡು ಪ್ರತಿಗಳನ್ನು ಕಳಿಸಲು ಕೋರಲಾಗಿದೆ.
ವಿ.ಸೂ: ಯಾವುದೇ ಕಾರಣಕ್ಕೂ ಕವನ ಸಂಕಲನದ ಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ ಮತ್ತು ನಿರ್ಣಾಯಕರ ನಿರ್ಣಯವೇ ಅಂತಿಮವಾಗಿರುತ್ತದೆ. ಕವನ ಸಂಕಲನ ಕಳಿಸಲು ಕೊನೆಯ ದಿನಾಂಕ: 10 ಜನವರಿ 2020ಕವನ ಸಂಕಲನ ಕಳಿಸಬೇಕಾದ ವಿಳಾಸ: ಶ್ರೀ ಮಂಜುನಾಥ ಟಿ. ಪಟಗಾರ, ಅಧ್ಯಕ್ಷರು, ನವಚೇತನ ಸಾಂಸ್ಕøತಿಕ ಕಲಾ ಸಾಹಿತ್ಯ ವೇದಿಕೆ, ಬಾಳಗಿಮನೆ, ಯಲ್ಲಾಪುರ-581359, ಉತ್ತರ ಕನ್ನಡ ಜಿಲ್ಲೆ; ಮೊ: 9449148467

ರಾಜ್ಯೋತ್ಸವ ಕವಿಗೋಷ್ಠಿ- ಮನುಷ್ಯತ್ವದ ಅನ್ವೇಷಣೆಯೆ ಕಾವ್ಯದ ಕೆಲಸ
ಸಿದ್ದಾಪುರ.
ಕಾವ್ಯ ಎಂದರೆ ಮನುಷ್ಯತ್ವದ ಅನ್ವೇಷಣೆ.ಸಮಾಜವನ್ನು ಬದಲಾಯಿಸುವುದಕ್ಕಿಂತ ನಮ್ಮೊಳಗಿನ ತಪ್ಪಿನ ಅರಿವು, ವಿಮರ್ಶೆ ಕವಿತೆಯಿಂದ ಸಾಧ್ಯ ಎಂದು ಸಾಹಿತಿ ಸುಬ್ರಾಯ ಮತ್ತೀಹಳ್ಳಿ ಹೇಳಿದರು.
ಅವರು ಸಿರಿಗನ್ನಡ ವೇದಿಕೆ, ಪ್ರಯೋಗ ಸ್ವಯಂಸೇವಾ ಸಂಸ್ಥೆ ಆಯೋಜಿಸಿದ ರಾಜ್ಯೋತ್ಸವ ಕವಿಗೋಷ್ಠಿಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಕವಿತೆಗಳ ಅವಲೋಕನ ನಡೆಸಿ ಮಾತನಾಡಿದ ಅವರು ಬದುಕಿನ ಸತ್ಯಶೋಧನೆಯ ಆರಂಭ ಕಾವ್ಯ ರಚನೆಯ ಮೂಲಕ ಆಗುತ್ತದೆ. ಮನುಷ್ಯತ್ವದ ಕಡೆಗೆ ಸಾಗುವ ಕ್ರಿಯೆ ಇದರಿಂದ ಸಾಧ್ಯವಾಗುತ್ತದೆ. ಕವಿತೆ ಎನ್ನುವದು ಸಹಜ ಓಡಾಟದಂತೆ. ಅದು ಸೂಕ್ಷ್ಮವಾಗುತ್ತ ಹೋದಂತೆ ಸ್ಪೋಟಕ ಶಕ್ತಿಯನ್ನೂ ಪಡೆದುಕೊಳ್ಳಬೇಕು. ಕಾವ್ಯದ ಮೂಲಕ ನಡೆಯುವ ಸತ್ಯಶೋಧನೆಯ ಹಾದಿಯಲ್ಲಿ ಅನುಕರಣೆ ಮಾಡದೇ ನಮ್ಮದೇ ಆದ ಲಯ, ಪ್ರತಿಮೆ ರೂಪಿಸಿಕೊಳ್ಳುವದು ಅಗತ್ಯ ಎಂದರು.
ಇನ್ನೋರ್ವ ಅತಿಥಿ ಹಿರಿಯ ಪತ್ರಕರ್ತ ಕಾಶ್ಯಪ ಪರ್ಣಕುಟಿ ಮಾತನಾಡಿ ಕಾವ್ಯ ದೃಶ್ಯಮಾಧ್ಯಮದ ಗುಂಗಿನಿಂದ ತಪ್ಪಿಸಿಕೊಳ್ಳಬೇಕು.ಕಾವ್ಯ ಸಾಂಸ್ಕøತಿಕ ಪ್ರಜ್ಞೆಯನ್ನು, ಸ್ವವಿಮರ್ಶೆಯನ್ನು ನೀಡುವದರ ಜೊತೆಗೆ ಮನುಷ್ಯರಾಗುವ ಪ್ರಯತ್ನಕ್ಕೆ ಇದು ಸಹಕಾರಿಯಾಗುತ್ತದೆ. ಕಾವ್ಯ ನಮ್ಮೊಳಗೆ ಅನುರಣಿಸುವಂತಿರಬೇಕು ಎಂದರು.
ಮಕ್ಕಳ ಸಾಹಿತಿ ತಮ್ಮಣ್ಣ ಬೀಗಾರ ಮಾತನಾಡಿ ಕಾವ್ಯ ಅನನ್ಯತೆಯ ರೂಪ.ಕಾವ್ಯ ರಚನೆಗೆ ಅಧ್ಯಯನ, ಸೂಕ್ಷ್ಮ ಗ್ರಹಿಕೆ ಅತ್ಯಗತ್ಯ. ಸಮೂಹಕ್ಕೆ ಒಳ್ಳೆಯದನ್ನು ಬಯಸುವ ಕಾವ್ಯ ನಮ್ಮೊಳಗೆ ಬೀಜ ರೂಪವಾಗಿದ್ದು ವಿಕಾಸ ಹೊಂದುತ್ತ ಸಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬರಹಗಾರ ಗಂಗಾಧರ ಕೊಳಗಿ ನಮ್ಮ ಖಾಸಗಿತನವನ್ನು, ಏಕಾಗ್ರತೆಯನ್ನು ಹಲವು ವಿಧದಲ್ಲಿ ಪಲ್ಲಟಗೊಳಿಸುವ ಈ ಕಾಲಘಟ್ಟದಲ್ಲಿ ಬಹುದೊಡ್ಡ ಸವಾಲು ಬರಹಗಾರರ ಇದಿರಿನಲ್ಲಿದೆ. ಅಂಥ ಸವಾಲನ್ನು ಎದುರಿಸುವ ಶಕ್ತಿಯನ್ನು ಸಾಹಿತ್ಯ ಕೊಡುತ್ತದೆ. ಕನ್ನಡದ ಗದ್ಯದಲ್ಲೂ ಕಾವ್ಯ ಅತ್ಯಂತ ಪ್ರಖರವಾಗಿ ಬಂದದ್ದು ಲಂಕೇಶ್, ಅನಂತಮೂರ್ತಿಯವರಂಥ ಅನೇಕ ಬರಹಗಾರರಲ್ಲಿ ಕಾಣಲು ಸಾಧ್ಯ. ಇಂಥ ಕಾರ್ಯಕ್ರಮಗಳು ಪರಸ್ಪರ ಕಾವ್ಯಾನುಸಂಧಾನಕ್ಕೆ, ಸಹೃದಯರ ಒಡನಾಟಕ್ಕೆ ವೇದಿಕೆ ಒದಗಿಸಿಕೊಡುತ್ತದೆ ಎಂದರು.
ಕವಿಗಳಾದ ಗೋಪಾಲ ನಾಯ್ಕ ಬಾಶಿ, ಮನೋಜಕುಮಾರ ಪಿ.ಎಚ್. ಮಾರುತಿ ಆಚಾರಿ, ನೂತನ ನಾಯ್ಕ, ಮಂಜುನಾಥ ಟಿ., ನಾಗರಾಜಪ್ಪ ಎಚ್., ಸುಧಾರಾಣಿ ನಾಯ್ಕ, ನಾಗಶ್ರೀ ಹೆಗಡೆ, ರಾಘವೇಂದ್ರ ಚಪ್ಪರಮನೆ, ಮಂಜುನಾಥ ಹೆಗಡೆ ಹೊಸ್ಕೊಪ್ಪ ಮುಂತಾದವರು ಕವಿತೆ ವಾಚಿಸಿದರು.
ಸಿರಿಗನ್ನಡ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಎಂ.ಎಸ್.ಹೆಗಡೆ ಸ್ವಾಗತಿಸಿ, ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *