ಮಧು ಬಂಗಾರಪ್ಪ,ಶಾರದಾ ನಾಯ್ಕ ಸೇರಿ ಕೆಲವರು ಕಾಂಗ್ರೆಸ್‍ಗೆ

ರಾಷ್ಟ್ರರಾಜಕಾರಣದಲ್ಲಿ ಸುಳ್ಳು,ವೈಭವೀಕರಣ,ಪ್ಯಾಷಿಸ್ಟ್ ಮನೋಭಾವ ವಿಪರೀತವಾಗುತ್ತಿರುವ ಸತ್ತ್ಯೋತ್ತರ ಕಾಲದಲ್ಲಿ ಕರ್ನಾಟಕದಲ್ಲಿ ಕಟೀಲ್ ಬಿ.ಜೆ.ಪಿ.ರಾಜ್ಯಾಧ್ಯಕ್ಷರಾಗಿರುವುದು, ಶಾಸಕರನ್ನು ಖರೀದಿಸಿ ಉಪಚುನಾವಣೆ ಮಾಡುತ್ತಿರುವುದು. ಬಿ.ಜೆ.ಪಿ.ಯಲ್ಲಿ ಆರೆಸ್ಸೆಸ್ ಮತ್ತು ಬಹುಸಂಖ್ಯಾತರ ಕಾಳಗ,ಅಲ್ಲಲ್ಲಿ ವಲಸೆ, ಇಂಥ ಬೆಳವಣಿಗೆಗಳ ನಂತರ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ರಾಜಕೀಯ ಬೆಳವಣಿಗೆಗಳಿಗೆ ತಕ್ಕಂತೆ ಮಾಜಿಶಾಸಕಮಧುಬಂಗಾರಪ್ಪ,ಶಾರದಾ ನಾಯ್ಕ ಸೇರಿದಂತೆ ಕೆಲವರು ಕಾಂಗ್ರೆಸ್ ಕಡೆವಾಲುತ್ತಿರುವ ಸುದ್ದಿ ವೈರಲ್ ಆಗುತ್ತಿದೆ.
ಒಂದುಕಾಲದಲ್ಲಿ ಕಾಂಗ್ರೆಸ್‍ನ ಭದ್ರ ಕೋಟೆಗಳಾಗಿದ್ದ ಶಿವಮೊಗ್ಗ ಮತ್ತು ಉತ್ತರಕನ್ನಡವನ್ನು ಬಿ.ಜೆ.ಪಿ.ಜಿಲ್ಲೆಗಳನ್ನಾಗಿಸುವಲ್ಲಿ ಮಾಜಿಮುಖ್ಯಮಂತ್ರಿಗಳಾದ ಬಂಗಾರಪ್ಪ,ಕುಮಾರಸ್ವಾಮಿ,ರಾಮಕೃಷ್ಣ ಹೆಗಡೆಯವರ ಪಾತ್ರಗಳಿವೆ.
10 ಜನ ಶಾಸಕರ ರಾಜ್ಯ ಬಿ.ಜೆ.ಪಿಯನ್ನು 70 ಶಾಸಕರಿಗೇರಿಸಿದ್ದ ಬಂಗಾರಪ್ಪ ಆ ಪಕ್ಷದ ರಿಮೋಟ್ ಕಂಟ್ರೋಲರ್ ಆರೆಸ್ಸೆಸ್ಸಿನಿಂದ ಹೊಡೆತ ತಿಂದ್ದದ್ದು ಹಳೆ ಕತೆ. ಈ ವಿದ್ಯಮಾನಕ್ಕೂ ಮೊದಲು ಬಳಲಿದ್ದ ಬಿ.ಜೆ.ಪಿ.ಗೆ ಶಕ್ತಿ ತುಂಬಿದವರು ಅಂದಿನ ಜೆ.ಡಿ.ಯು.ಮುಖಂಡ ರಾಮಕೃಷ್ಣ ಹೆಗಡೆ ನಂತರ ಕುಮಾರಸ್ವಾಮಿ ಆಡಳಿತದ ನಂತರ ರಾಜ್ಯದಲ್ಲಿ ಬಿ.ಜೆ.ಪಿ.ಅಧಿಕಾರದ ರುಚಿ ನೋಡಲು ಸಾಧ್ಯವಾಗಿದ್ದು.
ಹೀಗೆ ಅನೇಕ ಬದಲಾವಣೆ, ಅವಸ್ಥಾಂತರಗಳ ನಂತರ ಕೂಡ ಅನೈತಿಕಮಾರ್ಗಗಳ ಮೂಲಕ ಅಧಿಕಾರಕ್ಕೇರಿದ ಶಿಸ್ತಿನ ಪಕ್ಷ ಬಿ.ಜೆ.ಪಿ. ರಾಜ್ಯ ಸೇರಿದಂತೆ ಹಲವೆಡೆ ಪ್ರಾದೇಶಿಕ ಪಕ್ಷಗಳನ್ನು ನಿರ್ನಾಮ ಮಾಡಿ ಕಾಂಗ್ರೆಸ್ ವಿರೋಧವೊಂದರಿಂದಲೇ ಶಕ್ತಿಗಳಿಸಿಕೊಂಡಿದ್ದು ರಾಜ್ಯ ಮತ್ತು ದೇಶದ ರಾಜಕೀಯ ಚರಿತ್ರೆಯ ಭಾಗ.
ಈಗ ಮತ್ತೆ ಬಿ.ಜೆ.ಪಿ.ಕಾಂಗ್ರೆಸ್,ಜನತಾದಳಗಳಮುಖಂಡರು,ಶಾಸಕರನ್ನು ಮುಟ್ಟಿನೋಡುವ ಆಟ ಶುರುಮಾಡಿದೆ. ಈ ಆಟಕ್ಕೆ ಒಪ್ಪದ,ಈ ಆಟದ ವಿರೋಧಿಗಳಾದ ರಾಜುಕಾಗೆ ಸೇರಿದಂತೆ ಕೆಲವರು ಆಡಳಿತಾರೂಢ ಬಿ.ಜೆ.ಪಿ.ಧಿಕ್ಕರಿಸಿ ಕಾಂಗ್ರೆಸ್ ಸೇರಿದ್ದು ಹೊಸ ಬೆಳವಣಿಗೆ.
ಇದೇ ಸಮಯದಲ್ಲಿ ಸಿದ್ಧರಾಮಯ್ಯ ವಿರೋಧಿಪಕ್ಷದ ನಾಯಕರಾಗಿರುವುದು,ಕಾಂಗ್ರೆಸ್ ಹಿಡಿತ ಸಾಧಿಸಿರುವುದು ಒಂದೆಡೆಯಾದರೆ ಬಿ.ಜೆ.ಪಿ.ಯಿಂದ ರಾಜಕೀಯ ವೈರಿಯಾಗಿ ಹೊಡೆತ ತಿಂದಿರುವ ಡಿ.ಕೆ.ಶಿವಕುಮಾರ ಕುಟುಂಬ ಬಿ.ಜೆ.ಪಿ.ಅವಸಾನಕ್ಕೆ ಪಣತೊಟ್ಟಿದೆಯಂತೆ.
ಈ ಬೆಳವಣಿಗೆಯ ಭಾಗವಾಗಿ ಬಿ.ಜೆ.ಪಿ.ವಿರೋಧಿಗಳನ್ನು ಕ್ರೋಢೀಕರಿಸುತ್ತಿರುವ ಕಾಂಗ್ರೆಸ್ ನಾಯಕರು ಮೊದಲ ಹಂತದಲ್ಲಿ ಮಾಜಿ ಶಾಸಕರಾದ ಮಧುಬಂಗಾರಪ್ಪ ಮತ್ತು ಶಾರದಾ ನಾಯ್ಕರಿಗೆ ಗಾಳ ಹಾಕಿದ್ದಾರಂತೆ! ಮಧು ಬಂಗಾರಪ್ಪ ಮಲೆನಾಡು,ಕರಾವಳಿ,ಉತ್ತರಕರ್ನಾಟಕ ಭಾಗದಲ್ಲೂ ಹೆಸರಿರುವ ನಾಯಕ,ಈ ಹಿಂದೆ ಜಾ.ದಳದ ಮಲೆನಾಡು,ಕರಾವಳಿ ಜವಾಬ್ಧಾರಿಗಳನ್ನೂ ಮಧು ನಿಭಾಯಿಸಿರುವ ಅನುಭವ ಹೊಂದಿದ್ದಾರೆ. ಶಾರದಾ ನಾಯ್ಕ ಉತ್ತರಕರ್ನಾಟಕ,ಹೈದ್ರಾಬಾದ್ ಕರ್ನಾಟಕದ ಮತದಾರರು,ಮುಖಂಡರ ಮೇಲೆ ಪ್ರಭಾವ ಬೀರಬಹುದಾದ ಮಹಿಳೆ. ಜನತಾದಳದ ಈ ಮುಖಂಡರನ್ನು ಕಾಂಗ್ರೆಸ್ ಗೆ ತರುವ ಮೂಲಕ ಮಲೆನಾಡು,ಕರಾವಳಿ, ಬಯಲುಸೀಮೆಗಳಲ್ಲಿ ಪಕ್ಷಗಟ್ಟಗೊಳಿಸುವ ಉದ್ಧೇಶ ಹೊಂದಿರುವ ಕಾಂಗ್ರೆಸ್ ಗೆ ಬಿ.ಜೆ.ಪಿ.,ಜನತಾದಳಗಳಿಗೆ ಸೆಡ್ಡುಹೊಡೆಯಲೂ ಇದೇ ಅಂಶಗಳು ಅವಶ್ಯ.
ಈ ಹಿನ್ನೆಲೆಯಲ್ಲಿ ಸೊರಬದ ಸಹೋದರರು,ಪಕ್ಷಗಳ ಮೇಲಾಟದ ಸೂತ್ರದಂತೇ ಮಧು ಮತ್ತು ಶಾರದಾರನ್ನು ಕಾಂಗ್ರೆಸ್‍ಗೆ ಕರೆತಂದು ಹೊಸ ಆಟ ಆಡುವ ಸೂತ್ರ ರಚಿಸಿದ್ದಾರೆ. ಈ ತಂತ್ರದ ಭಾಗವಾಗಿ ಮತ್ತಷ್ಟು ಮುಖಂಡರು ಬಿ.ಜೆ.ಪಿ., ಜನತಾದಳಗಳಿಂದ ಕಾಂಗ್ರೆಸ್ ನತ್ತ ಮುಖಮಾಡಿದ್ದಾರೆ ಎನ್ನಲಾಗುತ್ತಿದೆ. ಹಿಂದಿನ ಸಮ್ಮಿಶ್ರ ಮೈತ್ರಿಯ ನಂತರ ಕಾಂಗ್ರೆಸ್ ಜೊತೆ ದೋಸ್ತಿ ಬೆಳೆಸಿಕೊಂಡಿರುವ ಕೆಲವರು ಜನತಾದಳದಿಂದ ಕಾಂಗ್ರೆಸ್ ಗೆ ಹಾರಲಿದ್ದಾರೆ ಎನ್ನಲಾಗುತ್ತಿದೆ.
ಜಾದಳ ಬಿ.ಜೆ.ಪಿ.ಜೊತೆ ಮತ್ತೆ ಸಂಖ್ಯ ಬೆಳೆಸಿದರೆ ಆಗ ಜನತಾದಳ,ಬಿ.ಜೆ.ಪಿ. ದೋಸ್ತಿಯನ್ನು ವಿರೋಧ ಮಾಡುವ ಕೆಲವು ಮುಖಂಡರು ಬಿ.ಜೆ.ಪಿ., ಜಾ.ದಳಗಳಿಂದ ಕಾಂಗ್ರೆಸ್ ಸೇರಲಿದ್ದಾರೆ.ಈ ಬೆಳವಣಿಗೆಗಳ ಲಾಭ ಪಡೆದು ಮತ್ತೆ ಮುಖ್ಯಮಂತ್ರಿಯಾಗಲು ಯೋಜಿಸಿರುವ ಸಿದ್ಧರಾಮಯ್ಯ ನಾಯಕತ್ವಕ್ಕೆ ದಿನೇಶ್ ಗುಂಡೂರಾವ ಮತ್ತು ಡಿ.ಕೆ.ಶಿವಕುಮಾರ ಹೆಗಲುಕೊಟ್ಟಿದ್ದಾರೆ. ಹಾಗಾಗಿ ಜಾದಳದ ಸ್ನೇಹದಿಂದ ಕಳೆದುಕೊಂಡ ಗೌರವ,ಶಕ್ತಿಯನ್ನು ಜಾ.ದಳ, ಬಿ.ಜೆ.ಪಿ.ಗಳವಿರೋಧದಿಂದ ಗಳಿಸುವ ತಂತ್ರದ ಅಂಗವಾಗಿ ಮಧು,ಶಾರದಾ ನಾಯ್ಕ ರೊಂದಿಗೆ ಕೆಲವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *