

ಯಲ್ಲಾಪುರ ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿದ್ದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಆರ್.ವಿ.ದೇಶಪಾಂಡೆ ವಿರುದ್ಧ ಬಿ.ಜೆ.ಪಿ. ಕಾರ್ಯಕರ್ತರು ಘೋಷಣೆ ಕೂಗಿ ಗಲಾಟೆಗೆ ಕಾರಣರಾದ ಪ್ರಸಂಗ ಶಿರಸಿ ದಾಸನಕೊಪ್ಪ ಬಳಿಯ ರಾಮಾಪುರದಲ್ಲಿ ಇಂದು ನಡೆದಿದೆ.
ಶಿವರಾಮ ಹೆಬ್ಬಾರ್ ಸೋಲಿಸಿ,ಭೀಮಣ್ಣ ನಾಯ್ಕರನ್ನು ಗೆಲ್ಲಿಸಲು ಪಣ ತೊಟ್ಟಿರುವ ಮಾಜಿ ಸಚಿವ ಆರ್.ವಿ.ದೇಶಪಾಂಡೆ ದಿನನಿತ್ಯ ಯಲ್ಲಾಪುರ, ಮುಂಡಗೋಡು ತಾಲೂಕುಗಳಲ್ಲಿ ಪ್ರಚಾರ ನಡೆಸುತಿದ್ದಾರೆ. ದೇಶಪಾಂಡೆಯವರ ನಿರಂತರ ಪ್ರಚಾರ, ಹೆಬ್ಬಾರ್ ವಿರುದ್ಧ ಜನಾಕ್ರೋಶದ ಹಿನ್ನೆಲೆಯಲ್ಲಿ ಇಂದು ರಾಮಾಪುರದಲ್ಲಿ ಖ್ಯಾತೆ ತೆಗೆದ ಬಿ.ಜೆ.ಪಿ. ಕಾರ್ಯಕರ್ತರು ಮಾಜಿ ಸಚಿವ ಆರ್.ವಿ.ದೇಶಪಾಂಡೆ ವಿರುದ್ಧ ಘೋಷಣೆ ಕೂಗಿ ಗಲಾಟೆಗೆ ಪ್ರಯತ್ನಿಸಿದರು.
ಆಗ ಅಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರಿಗೂ, ಬಿ.ಜೆ.ಪಿ. ಕಾರ್ಯಕರ್ತರಿಗೂ ಘರ್ಷಣೆ ಪ್ರಾರಂಭವಾಯಿತು. ಪೊಲೀಸರ ಸಕಾಲಿಕ ಪ್ರವೇಶದಿಂದ ಗುಂಪು ಘರ್ಷಣೆ ನಿಲ್ಲಿಸಿ, ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
