

ಶಿರಸಿ ಉಪವಿಭಾಗದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆ ನಿರ್ವಹಿಸುತ್ತಿರುವ ಹೊಂಡ ತುಂಬುವ ಕಾಮಗಾರಿ ಕಳಪೆಯಾಗಿರುವ ಬಗ್ಗೆ ಲೋಕಾಯುಕ್ತರಿಗೆ ದೂರಿರುವ ಇಲಿಯಾಸ ಶೇಖ್ ಪ್ರಯತ್ನದ ಬಗ್ಗೆ ಸಾರ್ವಜನಿಕ ಪ್ರಶಂಸೆ ವ್ಯಕ್ತವಾಗಿದೆ.
ಶಿರಸಿ ವಿಭಾಗದ ಲೋಕೋಪಯೋಗಿ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿರುವ ಬಗ್ಗೆ ಅನೇಕ ತಕರಾರುಗಳಿದ್ದರೂ ಇಲಾಖೆ ಕಳೆದ ಒಂದು ವರ್ಷದಿಂದ ದುರಸ್ಥಿ ಮಾಡಿರಲಿಲ್ಲ. ಇತ್ತೀಚೆಗೆ ದುರಸ್ಥಿ ಕಾರ್ಯ ಕೈಗೊಂಡಿರುವ ಇಲಾಖೆ ನಾಮಕಾವಸ್ಥೆ ಹೊಂಡ ತುಂಬುತ್ತಾ ಕಳಪೆ ಕಾಮಗಾರಿ ಮಾಡುತ್ತಿದೆ ಎಂದು ಜೆ.ಡಿ.ಎಸ್. ಅಲ್ಫಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಇಲಿಯಾಸ್ ಶೇಖ್ ದೂರಿದ್ದರು.
ಈ ಕಳಪೆ ಕಾಮಗಾರಿ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿರುವ ಇಲಿಯಾಸ್ ಶೇಖ್ ವಿರೋಧದ ಬಗ್ಗೆ ಸಾರ್ವಜನಿಕರ ಪ್ರಶಂಸೆ ವ್ಯಕ್ತವಾದರೆ, ಜನರಿಗೆ ಸ್ಫಂದಿಸದ ಲೋಕೋಪಯೋಗಿ ಇಲಾಖೆ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡುವ ಬದಲು ನಮಗೆ ತಿಳಿಸಿದ್ದರೆ ನಾವು ಸರಿಮಾಡುತಿದ್ದೆವು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಅಲವತ್ತುಕೊಂಡಿದ್ದಾರಂತೆ.
ಹೀಗೆ ಲೋಕೋಪಯೋಗಿ ಇಲಾಖೆಯ ಕೆಲಸದ ಬಗ್ಗೆ ಲೋಕಾಯುಕ್ತಕ್ಕೆ ದೂರಿದ ಮೇಲೆ ನಮಗೆ ಹೇಳಿದ್ದರೆ ನಾವು ಸರಿಮಾಡುತಿದ್ದೆವು ಎಂದು ಹೇಳುವ ಅಧಿಕಾರಿಗಳು ತಮ್ಮ ಕಳಪೆ ಕೆಲಸವನ್ನು ಮೇಲ್ನೊಟಕ್ಕೆ ಒಪ್ಪಿಕೊಂಡಂತಾಗಿದೆ.
ಹೀಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಾನಾ ಇಲಾಖೆಗಳು ನಾಮಕಾವಸ್ಥೆ ಕೆಲಸಮಾಡುವುದು, ಕಳಪೆ ಕಾಮಗಾರಿ ಮಾಡುವ ಹಿಂದೆ ಇಲ್ಲಿಯ ಸಂಸದರು, ಶಾಸಕರ ವ್ಯವಹಾರ ಕಾರಣ ಎನ್ನಲಾಗಿದೆ.
ಈಗ ಹೊಸ ಸರ್ಕಾರದ ಅವಧಿಯಲ್ಲಿ ಕಳಪೆ ಕಾಮಗಾರಿ ಮಿತಿಮೀರಲು ಹೊಸ ಸರ್ಕಾರದ ಮುಖ್ಯಸ್ಥರ ಆಪರೇಶನ್ ಕಮಲ, ಬೃಹತ್ ಬಂಡವಾಳ ಹೂಡಿಕೆ ಕಾರಣ ಎನ್ನಲಾಗುತ್ತಿದೆ. ಸರ್ಕಾರ, ಸಂಸದರ, ಶಾಸಕರ ನಿರ್ಧೇಶನದಂತೇ ಕಳಪೆ ಕಾಮಗಾರಿಗಳು ನಡೆಯುತ್ತಿರುವುದರಿಂದ ಅಧಿಕಾರಿಗಳು, ಇಂಜಿನಿಯರ್ ಗಳು ತಲೆಮರೆಸಿಕೊಂಡು ಸುತ್ತಾಡುವ ಸ್ಥಿತಿ ಇರುವ ಬಗ್ಗೆ ಸಾರ್ವಜನಿಕ ವಲಯದಲ್ಲೂ ಚರ್ಚೆಗಳಾಗುತ್ತಿವೆ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
