ರಕ್ತದಾನದಿಂದ ಗಮನ ಸೆಳೆದ ಕರವೇ ಗಜಸೇನೆ

ರಕ್ತದಾನದಿಂದ ಗಮನ ಸೆಳೆಯುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಶಿರಸಿಯಲ್ಲಿ ಉತ್ತಮ ಕೆಲಸಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ.
ಶಿರಸಿಯಲ್ಲಿ ಕರವೇ ಗಜಸೇನೆ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಶಿರಸಿ ಮಾರಿಕಾಂಬಾ ದೇವಾಲಯದ ಉಪಾಧ್ಯಕ್ಷ ಮನೋಹರ್ ಮಲ್ಮನೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕರವೇ ಗಜಸೇನೆ ತನ್ನ ಸಾಂಪ್ರದಾಯಿಕ ಕೆಲಸಗಳ ಜೊತೆಗೆ ರಕ್ತದಾನ ಮಾಡುವ ಮೂಲಕ ತನ್ನ ಸಾಮಾಜಿಕ ಜವಾಬ್ಧಾರಿ ನಿರ್ವಹಿಸಿದೆ ಎಂದರು.
ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದ ಕರವೇ ಗಜಸೇನೆ ರಾಜ್ಯಾಧ್ಯಕ್ಷ ರಾಘವೇಂದ್ರ ಮಾತನಾಡಿ ಗಜಸೇನೆ ಕನ್ನಡದ ಕೆಲಸದ ಜೊತೆಗೆ ಸಾಮಾಜಿಕ,ವೈಯಕ್ತಿಕ ಆರೋಗ್ಯದ ಬಗ್ಗೆ ಕೂಡಾ ಗಮನ ಹರಿಸುತ್ತಿದೆ. ಪಕ್ಷಾತೀತ, ಜಾತ್ಯಾತೀತವಾಗಿ ಕೆಲಸಮಾಡುತ್ತಿರುವ ಗಜಸೇನೆ ರಾಜ್ಯದಲ್ಲಿ ಕನ್ನಡಿಗರ ಹಿತಾಸಕ್ತಿಯ ಕೆಲಸದ ಮೂಲಕ ವಿಸ್ತರಿಸುತ್ತಿದೆ ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಪತ್ರಕರ್ತ ಕನ್ನೇಶ್ ಕೋಲಶಿರ್ಸಿ ಮಾತನಾಡಿ ಕರವೇ ಗಜಸೇನೆಯ ಯುವಶಕ್ತಿ ಸಮಾಜಮುಖಿ ಕೆಲಸದ ಮೂಲಕ ಹೆಸರುಮಾಡುತ್ತಿದೆ. ಪ್ರತಿಭಟನೆ,ಸಂಘರ್ಷ, ಹೋರಾಟದ ಜೊತೆಗೆ ರಕ್ತದಾನದಂಥ ಶಿಬಿರಗಳು ಗಜಸೇನೆಯ ಆದ್ಯತೆಗೆ ಸಾಕ್ಷಿ ಎಂದರು.
ಡಾ ಸುಮನಾ ಹೆಗಡೆ ಕನ್ನಡದ ಕೆಲಸವೆಂದರೆ ಕನ್ನಡಿಗರ ಆರೋಗ್ಯ ರಕ್ಷಣೆ ಕೂಡಾ ಎಂದು ಮಾರ್ಮಿಕವಾಗಿ ನುಡಿದರು. ಕರವೇ ಗಜಸೇನೆಯ ಜಿಲ್ಲಾಧ್ಯಕ್ಷ ಉಮೇಶ್ ಹರಿಕಂತ್ರ, ಕಾನೂನು ವಿಭಾಗ ಪ್ರಮುಖ ದಿವಾಕರ ನಾಯ್ಕ, ಸ.ಕಾರ್ಯದರ್ಶಿ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲೆ, ರಾಜ್ಯದ ಅನೇಕ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಶಿರಸಿ ಪಂಡಿತ ಸಾರ್ವಜನಿಕ ಆಸ್ಫತ್ರೆ ಮತ್ತು ಕರವೇ ಗಜಸೇನೆ ಜಂಟಿಯಾಗಿ ಸಂಘಟಿಸಿದ್ದ ಈ ಕಾರ್ಯಕ್ರಮದಲ್ಲಿ ಕರವೇ ಗಜಸೇನೆಯ ನೂರಾರು ಕಾರ್ಯಕರ್ತರು ರಕ್ತದಾನ ಮಾಡಿದರು.
ಸಾರ್ವಜನಿಕರ ತುರ್ತು ಅವಶ್ಯಕತೆಯಾದ ರಕ್ತದಾನದ ಮೂಲಕ ಗಜಸೇನೆ ಉತ್ತಮ ಕೆಲಸ ಮಾಡಿದ ಪ್ರಶಂಸೆಗೆ ಪಾತ್ರವಾಯಿತು. ಸಂಘಟನೆಯ ಧಾರ್ಮಿಕ ಮುಖಂಡ ರಂಗನಾಥ್ ಶರ್ಮಾ ಮತ್ತು ರಸ್ತೆ ದುರಸ್ಥಿಮಾಡಿ ಹೆಸರು ಮಾಡಿದ ಕುಮಟಾ ಕರವೇ ಗಜಸೇನೆಯ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಳಪೆ ಕಾಮಗಾರಿ ಪ್ರಕರಣ
ರಸ್ತೆ ಕಾಮಗಾರಿ ನಿಲ್ಲಿಸಲು ಕೋರಿದ ಇಲಿಯಾಸ್‍ರಿಗೆ ಅಧಿಕಾರಿಗಳ ದೀಡ್ ಸಲಾಂ
ಶಿರಸಿ ಉಪವಿಭಾಗದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆ ನಿರ್ವಹಿಸುತ್ತಿರುವ ಹೊಂಡ ತುಂಬುವ ಕಾಮಗಾರಿ ಕಳಪೆಯಾಗಿರುವ ಬಗ್ಗೆ ಲೋಕಾಯುಕ್ತರಿಗೆ ದೂರಿರುವ ಇಲಿಯಾಸ ಶೇಖ್ ಪ್ರಯತ್ನದ ಬಗ್ಗೆ ಸಾರ್ವಜನಿಕ ಪ್ರಶಂಸೆ ವ್ಯಕ್ತವಾಗಿದೆ.
ಶಿರಸಿ ವಿಭಾಗದ ಲೋಕೋಪಯೋಗಿ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿರುವ ಬಗ್ಗೆ ಅನೇಕ ತಕರಾರುಗಳಿದ್ದರೂ ಇಲಾಖೆ ಕಳೆದ ಒಂದು ವರ್ಷದಿಂದ ದುರಸ್ಥಿ ಮಾಡಿರಲಿಲ್ಲ. ಇತ್ತೀಚೆಗೆ ದುರಸ್ಥಿ ಕಾರ್ಯ ಕೈಗೊಂಡಿರುವ ಇಲಾಖೆ ನಾಮಕಾವಸ್ಥೆ ಹೊಂಡ ತುಂಬುತ್ತಾ ಕಳಪೆ ಕಾಮಗಾರಿ ಮಾಡುತ್ತಿದೆ ಎಂದು ಜೆ.ಡಿ.ಎಸ್. ಅಲ್ಫಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಇಲಿಯಾಸ್ ಶೇಖ್ ದೂರಿದ್ದರು.
ಈ ಕಳಪೆ ಕಾಮಗಾರಿ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿರುವ ಇಲಿಯಾಸ್ ಶೇಖ್ ವಿರೋಧದ ಬಗ್ಗೆ ಸಾರ್ವಜನಿಕರ ಪ್ರಶಂಸೆ ವ್ಯಕ್ತವಾದರೆ, ಜನರಿಗೆ ಸ್ಫಂದಿಸದ ಲೋಕೋಪಯೋಗಿ ಇಲಾಖೆ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡುವ ಬದಲು ನಮಗೆ ತಿಳಿಸಿದ್ದರೆ ನಾವು ಸರಿಮಾಡುತಿದ್ದೆವು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಅಲವತ್ತುಕೊಂಡಿದ್ದಾರಂತೆ.
ಹೀಗೆ ಲೋಕೋಪಯೋಗಿ ಇಲಾಖೆಯ ಕೆಲಸದ ಬಗ್ಗೆ ಲೋಕಾಯುಕ್ತಕ್ಕೆ ದೂರಿದ ಮೇಲೆ ನಮಗೆ ಹೇಳಿದ್ದರೆ ನಾವು ಸರಿಮಾಡುತಿದ್ದೆವು ಎಂದು ಹೇಳುವ ಅಧಿಕಾರಿಗಳು ತಮ್ಮ ಕಳಪೆ ಕೆಲಸವನ್ನು ಮೇಲ್ನೊಟಕ್ಕೆ ಒಪ್ಪಿಕೊಂಡಂತಾಗಿದೆ.
ಹೀಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಾನಾ ಇಲಾಖೆಗಳು ನಾಮಕಾವಸ್ಥೆ ಕೆಲಸಮಾಡುವುದು, ಕಳಪೆ ಕಾಮಗಾರಿ ಮಾಡುವ ಹಿಂದೆ ಇಲ್ಲಿಯ ಸಂಸದರು, ಶಾಸಕರ ವ್ಯವಹಾರ ಕಾರಣ ಎನ್ನಲಾಗಿದೆ.
ಈಗ ಹೊಸ ಸರ್ಕಾರದ ಅವಧಿಯಲ್ಲಿ ಕಳಪೆ ಕಾಮಗಾರಿ ಮಿತಿಮೀರಲು ಹೊಸ ಸರ್ಕಾರದ ಮುಖ್ಯಸ್ಥರ ಆಪರೇಶನ್ ಕಮಲ, ಬೃಹತ್ ಬಂಡವಾಳ ಹೂಡಿಕೆ ಕಾರಣ ಎನ್ನಲಾಗುತ್ತಿದೆ. ಸರ್ಕಾರ, ಸಂಸದರ, ಶಾಸಕರ ನಿರ್ಧೇಶನದಂತೇ ಕಳಪೆ ಕಾಮಗಾರಿಗಳು ನಡೆಯುತ್ತಿರುವುದರಿಂದ ಅಧಿಕಾರಿಗಳು, ಇಂಜಿನಿಯರ್ ಗಳು ತಲೆಮರೆಸಿಕೊಂಡು ಸುತ್ತಾಡುವ ಸ್ಥಿತಿ ಇರುವ ಬಗ್ಗೆ ಸಾರ್ವಜನಿಕ ವಲಯದಲ್ಲೂ ಚರ್ಚೆಗಳಾಗುತ್ತಿವೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *