ಕಳಪೆ ಕಾಮಗಾರಿ ಪ್ರಕರಣ ರಸ್ತೆ ಕಾಮಗಾರಿ ನಿಲ್ಲಿಸಲು ಕೋರಿದ ಇಲಿಯಾಸ್‍ರಿಗೆ ಅಧಿಕಾರಿಗಳ ದೀಡ್ ಸಲಾಂ

ಶಿರಸಿ ಉಪವಿಭಾಗದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆ ನಿರ್ವಹಿಸುತ್ತಿರುವ ಹೊಂಡ ತುಂಬುವ ಕಾಮಗಾರಿ ಕಳಪೆಯಾಗಿರುವ ಬಗ್ಗೆ ಲೋಕಾಯುಕ್ತರಿಗೆ ದೂರಿರುವ ಇಲಿಯಾಸ ಶೇಖ್ ಪ್ರಯತ್ನದ ಬಗ್ಗೆ ಸಾರ್ವಜನಿಕ ಪ್ರಶಂಸೆ ವ್ಯಕ್ತವಾಗಿದೆ.
ಶಿರಸಿ ವಿಭಾಗದ ಲೋಕೋಪಯೋಗಿ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿರುವ ಬಗ್ಗೆ ಅನೇಕ ತಕರಾರುಗಳಿದ್ದರೂ ಇಲಾಖೆ ಕಳೆದ ಒಂದು ವರ್ಷದಿಂದ ದುರಸ್ಥಿ ಮಾಡಿರಲಿಲ್ಲ. ಇತ್ತೀಚೆಗೆ ದುರಸ್ಥಿ ಕಾರ್ಯ ಕೈಗೊಂಡಿರುವ ಇಲಾಖೆ ನಾಮಕಾವಸ್ಥೆ ಹೊಂಡ ತುಂಬುತ್ತಾ ಕಳಪೆ ಕಾಮಗಾರಿ ಮಾಡುತ್ತಿದೆ ಎಂದು ಜೆ.ಡಿ.ಎಸ್. ಅಲ್ಫಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಇಲಿಯಾಸ್ ಶೇಖ್ ದೂರಿದ್ದರು.
ಈ ಕಳಪೆ ಕಾಮಗಾರಿ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿರುವ ಇಲಿಯಾಸ್ ಶೇಖ್ ವಿರೋಧದ ಬಗ್ಗೆ ಸಾರ್ವಜನಿಕರ ಪ್ರಶಂಸೆ ವ್ಯಕ್ತವಾದರೆ, ಜನರಿಗೆ ಸ್ಫಂದಿಸದ ಲೋಕೋಪಯೋಗಿ ಇಲಾಖೆ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡುವ ಬದಲು ನಮಗೆ ತಿಳಿಸಿದ್ದರೆ ನಾವು ಸರಿಮಾಡುತಿದ್ದೆವು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಅಲವತ್ತುಕೊಂಡಿದ್ದಾರಂತೆ.
ಹೀಗೆ ಲೋಕೋಪಯೋಗಿ ಇಲಾಖೆಯ ಕೆಲಸದ ಬಗ್ಗೆ ಲೋಕಾಯುಕ್ತಕ್ಕೆ ದೂರಿದ ಮೇಲೆ ನಮಗೆ ಹೇಳಿದ್ದರೆ ನಾವು ಸರಿಮಾಡುತಿದ್ದೆವು ಎಂದು ಹೇಳುವ ಅಧಿಕಾರಿಗಳು ತಮ್ಮ ಕಳಪೆ ಕೆಲಸವನ್ನು ಮೇಲ್ನೊಟಕ್ಕೆ ಒಪ್ಪಿಕೊಂಡಂತಾಗಿದೆ.
ಹೀಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಾನಾ ಇಲಾಖೆಗಳು ನಾಮಕಾವಸ್ಥೆ ಕೆಲಸಮಾಡುವುದು, ಕಳಪೆ ಕಾಮಗಾರಿ ಮಾಡುವ ಹಿಂದೆ ಇಲ್ಲಿಯ ಸಂಸದರು, ಶಾಸಕರ ವ್ಯವಹಾರ ಕಾರಣ ಎನ್ನಲಾಗಿದೆ.
ಈಗ ಹೊಸ ಸರ್ಕಾರದ ಅವಧಿಯಲ್ಲಿ ಕಳಪೆ ಕಾಮಗಾರಿ ಮಿತಿಮೀರಲು ಹೊಸ ಸರ್ಕಾರದ ಮುಖ್ಯಸ್ಥರ ಆಪರೇಶನ್ ಕಮಲ, ಬೃಹತ್ ಬಂಡವಾಳ ಹೂಡಿಕೆ ಕಾರಣ ಎನ್ನಲಾಗುತ್ತಿದೆ. ಸರ್ಕಾರ, ಸಂಸದರ, ಶಾಸಕರ ನಿರ್ಧೇಶನದಂತೇ ಕಳಪೆ ಕಾಮಗಾರಿಗಳು ನಡೆಯುತ್ತಿರುವುದರಿಂದ ಅಧಿಕಾರಿಗಳು, ಇಂಜಿನಿಯರ್ ಗಳು ತಲೆಮರೆಸಿಕೊಂಡು ಸುತ್ತಾಡುವ ಸ್ಥಿತಿ ಇರುವ ಬಗ್ಗೆ ಸಾರ್ವಜನಿಕ ವಲಯದಲ್ಲೂ ಚರ್ಚೆಗಳಾಗುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *