ಅನಂತಕುಮಾರ ಹೆಗಡೆ ಹೇಳಿಕೆ,ವರ್ತನೆಗೆ ಛೀಮಾರಿ

40 ಸಾವಿರ ಕೋಟಿ ರೂಪಾಯಿ ರಕ್ಷಣೆಗಾಗಿ ಮಹಾರಾಷ್ಟ್ರದಲ್ಲಿ ಫಡ್ನವೀಸ್ ಒಂದು ದಿವಸ ಮುಖ್ಯಮಂತ್ರಿಯಾಗಿದ್ದರು ಎಂದು ಯಲ್ಲಾಪುರ ಕ್ಷೇತ್ರದಲ್ಲಿ ಹೇಳಿದ್ದ ಮಾಜಿ ಸಚಿವ ಅನಂತಕುಮಾರ ಹೆಗಡೆಯವರ ಹೇಳಿಕೆ ಮತ್ತು ನಡವಳಿಕೆಗೆ ತೀವೃ ವಿರೋಧ ವ್ಯಕ್ತವಾಗಿದೆ.
ಕಳೆದ ವಾರದ ಕೊನೆಗೆ ಮಾಜಿ ಸಚಿವ, ಸಂಸದ ಅನಂತಕುಮಾರ ಹೆಗಡೆ ಕೇಂದ್ರದ 40 ಸಾವಿರ ಕೋಟಿ ರೂಪಾಯಿ ರಕ್ಷಿಸಲು ಫಡ್ನವೀಸ್ ಏಕ್ ದಿನ್ ಕಾ ಮುಖ್ಯಮಂತ್ರಿ ಆಗಿದ್ದರು ಎಂದು ಅನಂತಕುಮಾರ ಹೆಗಡೆ ಯಲ್ಲಾಪುರ ಚುನಾವಣಾ ಭಾಷಣದಲ್ಲಿ ಹೇಳಿದ್ದರು.
ಈ ಹೇಳಿಕೆ ಸುಳ್ಳು ಹಾಗೇನೂ ಇಲ್ಲ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಫಡ್ನವೀಸ್ ಪ್ರತಿಕ್ರೀಯಿಸಿದ್ದರು.
ಈ ಬೆಳವಣಿಗೆಗಳ ನಂತರ ಟ್ವೀಟರ್, ಫೇಸ್‍ಬುಕ್ ಸೇರಿದ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಸಂಸದ ಅನಂತಕುಮಾರ ಹೆಗಡೆ ಹೇಳಿಕೆ ಮತ್ತು ವರ್ತನೆಗಳ ಬಗ್ಗೆ ತೀವೃ ತರಾಟೆ ಎತ್ತಿದ್ದಾರೆ.
ಅನಂತಕುಮಾರ ಹೆಗಡೆ ಸುಳ್ಳು-ಮೋಸ,ದ್ರೋಹದ ಮೂಲಕವೇ ಮುಗ್ಧರ ದಿಕ್ಕು ತಪ್ಪಿಸುತ್ತಾರೆ. ಮತಾಂಧತೆಯ ಮತ್ತು ರಾಜಕೀಯ ಲಾಭದ ಕಾರಣಕ್ಕೆ ಅನಂತಕುಮಾರ ಹೆಗಡೆ ಸುಳ್ಳು ಹೇಳುತಿದ್ದು ಸಾರ್ವಜನಿಕ ಶಿಸ್ತು, ನಡವಳಿಕೆ ಉಲ್ಲಂಘಿಸುವ ಮೂಲಕ ಅನಂತಕುಮಾರ ತನ್ನ ಮೂರನೇ ದರ್ಜೆಯ ನಡತೆ ಪ್ರದರ್ಶಿಸುತ್ತಾರೆ. ಅನಂತಕುಮಾರ ಹೆಗಡೆ ಮತ್ತವರ ಪಕ್ಷ ಹಾಗೂ ಸಂಘ ಎಲ್ಲರನ್ನೂ ಎಲ್ಲಾ ಕಾಲದಲ್ಲೂ ವಂಚಿಸಲು ಸಾಧ್ಯವಿಲ್ಲ ಎಂದು ಅನೇಕರು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿ.ಜೆ.ಪಿ.ಯ ಬಿ.ಟೀಮ್ ಯಡಿಯೂರಪ್ಪನವರನ್ನು ಬಲಿ ಹಾಕಲು ನಡೆಸಿರುವ ಶಡ್ಯಂತ್ರದ ಭಾಗವಾಗಿ ಈ ಕೀಳು ವರ್ತನೆ, ನಡತೆಗಳು ನಡೆಯುತ್ತಿವೆ. ಈ ಸುಳ್ಳು ಹೇಳುವ ನಾಟಕಕಾರರನ್ನು ಮನೆಗೆ ಕಳುಹಿಸುವ ಮೂಲಕ ಜನತೆ ಪ್ರಬುದ್ಧತೆ ಮೆರೆಯಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಗೆ ಕರೆ ನೀಡಲಾಗಿದೆ. ಈ ಬಗ್ಗೆ ಬಿ.ಜೆ.ಪಿ. ಮುಖಂಡರು ಕೂಡಾ ಅನಂತ ಹೆಗಡೆಯನ್ನು ತೀವೃ ವಿರೋಧಿಸಿದ್ದು, ಅವಿವೇಕದ ಮಾತು, ಮತಾಂಧತೆ,ಅತಿರೇಕಗಳಿಂದ ಚುನಾವಣೆ ಗೆಲ್ಲುವ ಅವರ ಲಾಗಾಯ್ತಿನ ಚಾಳಿ ಈಗ ಪಕ್ಷ, ನಾಯಕರಿಗೆ ಮುಜುಗರ ಉಂಟುಮಾಡುತ್ತಿದೆ. ಅವರಿಂದ ಬಿ.ಜೆ.ಪಿ.,ಮುಖಂಡರನ್ನು ರಕ್ಷಿಸುವ ಹಿನ್ನೆಲೆಯಲ್ಲಿ ಅವರ ಮೇಲೆ ಶಿಸ್ತಿನ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *