

ಆರೋಗ್ಯಕರ ಮಕ್ಕಳು, ಆರೋಗ್ಯಕರ ಮನಸು ನಿರ್ಮಾಣಗಳಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ
-ತಮ್ಮಣ್ಣ ಬೀಗಾರ್
ಕಣ್ಣಿನ ದೋಷದಿಂದ ಎಳೆಯರ ಬೆಳವಣಿಗೆ ಮತ್ತು ಶಿಕ್ಷಣಕ್ಕೆ ಅಡ್ಡಿಯಾಗಿದ್ದು ಈ ತೊಂದರೆ ನಿವಾರಿಸುವ ಮೂಲಕ ಮಕ್ಕಳ ಬೆಳವಣಿಗೆ ಮತ್ತು ಶಿಕ್ಷಣದ ಪ್ರಗತಿಗೆ ಲಯನ್ಸ್ ಸಂಸ್ಥೆ ಅಪಾರ ಕೊಡುಗೆ ನೀಡಿದೆ ಎಂದು ಲಯನ್ಸ್ ಡಿಸ್ಟಿಕ್ಟ್ ಮಾಜಿ ಗೌರ್ನರ್ ರವಿ ಹೆಗಡೆ ಹೂವಿನ ಮನೆ ಹೇಳಿದ್ದಾರೆ.
ಇಲ್ಲಿಯ ಹೊಸೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಲಯನ್ಸ್ ಪ್ರಾಯೋಜಿತ ಕಣ್ಣಿನ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಎಳೆವಯಸ್ಸಿನಲ್ಲಿ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸೆ ಮಾಡಿಸುವ ಮೂಲಕ ಸಂಭಾವ್ಯತೊಂದರೆ ತಪ್ಪಿಸಬಹುದು ಎಂದು ಸಲಹೆ ನೀಡಿದ ಮುಖ್ಯ ಅತಿಥಿ ಜಿ.ಎ.ಹೆಗಡೆ, ಲಯನ್ಸ್ ಈ ಕೆಲಸಮಾಡುವ ಮೂಲಕ ಅನೇಕರಿಗೆ ದಾರಿದೀಪವಾಗಿದೆ ಎಂದರು.
ಪ್ರಾಸ್ಥಾವಿಕವಾಗಿ ಮಾತನಾಡಿದ ಲಯನ್ಸ್ ಅಧ್ಯಕ್ಷ ಸಿ.ಎಸ್.ಗೌಡರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮೊದಲು ಈ ಶಿಬಿರಗಳನ್ನು ಮಾಡುವುದಾಗಿ ತಿಳಿಸಿದರು. ಮುಖ್ಯಾಧ್ಯಾಪಕ ಜಿ.ಎಂ.ಗೊಂಡ ವಂದಿಸಿದರು.



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
