ಮೂರು ಬಾರಿ ಗೆದ್ದವರ ಎದುರು ಮೂರನೇ ಬಾರಿ ಸೋತ ಭೀಮಣ್ಣ

ತೀವೃ ಕುತೂಹಲ ಕೆರಳಿಸಿದ್ದ ಯಲ್ಲಾಪುರ ಮತಕ್ಷೇತ್ರದ ಉಪಚುನಾವಣೆಯಲ್ಲಿ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ 31 ಸಾವಿರ ಮತಗಳ ಅಂತರದಿಂದ ಆಯ್ಕೆಯಾಗುವ ಮೂಲಕ ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕರನ್ನು ಸೋಲಿಸಿ ಮತ್ತೆ ವಿಧಾನಸೌಧ ಪ್ರವೇಶಿಸಿದ್ದಾರೆ.
ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಒಮ್ಮೆ ಲೋಕಸಭೆ, ಈ ಬಾರಿಯೂ ಸೇರಿ ಮೂರನೇ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸೋತಂತಾಗಿದೆ.
ಭೀಮಣ್ಣ ನಾಯ್ಕ ಬಂಗಾರಪ್ಪನವರ ಗರಡಿಯಲ್ಲಿ ಬೆಳೆದು ಅವರದೇ ಪಕ್ಷದಿಂದ ಮೊದಲು ಕೆನರಾ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಸೋತಿದ್ದರು. ಆ ನಂತರ ಬಂಗಾರಪ್ಪ ಸಮಾಜವಾದಿ ಪಕ್ಷ ಸೇರಿದ ನಂತರ ಶಿರಸಿ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ವಿಧಾನಸಭಾ ಅಭ್ಯರ್ಥಿಯಾಗಿ ಸೋಲು ಕಂಡಿದ್ದರು. ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿ.ಜೆ.ಪಿ. ಅಭ್ಯರ್ಥಿ ವಿಶ್ವೇಶ್ವರ ಹೆಗಡೆಯವರ ಎದುರು 17 ಸಾವಿರ ಮತಗಳಿಂದ ಸೋಲು ಕಂಡಿದ್ದ ಅವರು ಈಗ ಕಾಂಗ್ರೆಸ್ ಅನಿವಾರ್ಯತೆಯಲ್ಲಿ ಯಲ್ಲಾಪುರದ ಅಭ್ಯರ್ಥಿಯಾಗಿದ್ದರು.
ಹಿಂದೆ ಶಿರಸಿ ಕ್ಷೇತ್ರದಲ್ಲಿ ಜೆ.ಡಿ.ಎಸ್. ಅಭ್ಯರ್ಥಿಯ ಹೀನಾಯ ಸೋಲು ಮತ್ತು ಈಬಾರಿ ಜಾದಳದ ಅಭ್ಯರ್ಥಿಯ ನಾಮಕಾವಾಸ್ಥೆ ಸ್ಫರ್ಧೆಗಳಿಂದ ಭೀಮಣ್ಣ ಸೋತರು ಎನ್ನಲಾಗುತಿದ್ದರೂ ಮಾಜಿ ಸಚಿವ ಆರ್.ವಿ.ದೇಶಪಾಂಡೆಯವರ ಪುರಾತನ ಸಮರತಂತ್ರ ಗಳಿಂದಲೇ ಭೀಮಣ್ಣ ಸೋಲುತ್ತಾರೆ ಎನ್ನುವ ಆರೋಪಗಳಿವೆ.
ಶಿವರಾಮ ಹೆಬ್ಬಾರ್ ಮೂಲತ: ಬಿ.ಜೆ.ಪಿ.ಯವರಾಗಿದ್ದು ಎರಡು ಬಾರಿ ಕಾಂಗ್ರೆಸ್ ನಿಂದ ಈ ಬಾರಿ ಬಿ.ಜೆ.ಪಿ.ಯಿಂದ ವಿಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಶಾಸಕತ್ವಕ್ಕೆ ರಾಜೀನಾಮೆ ನೀಡಿ ಬಿ.ಜೆ.ಪಿ. ಸೇರ್ಫಡೆಯಾದ ಅನೇಕರಲ್ಲಿ ಶಿವರಾಮ ಹೆಬ್ಬಾರ್ ಕೂಡಾ ಒಬ್ಬರಾಗಿದ್ದು ಹಣ, ಅಧಿಕಾರ, ಧಾರ್ಮಿಕ ಭಾವನೆಗಳ ಆಧಾರದಲ್ಲಿ ಹೆಬ್ಬಾರ್ ಗೆದ್ದಿದ್ದಾರೆ ಎನ್ನಲಾಗುತಿದ್ದರೂ ಶಿವರಾಮ ಹೆಬ್ಬಾರ್ ಜನಸಂಪರ್ಕ, ಸಂಬಂಧ, ಸಂಪರ್ಕ ನಿರ್ವಹಣೆಗಳಲ್ಲಿ ಎತ್ತಿದ ಕೈ ಎನ್ನಲಾಗುತ್ತಿದೆ.
ದೇಶಪಾಂಡೆಯವರಿಗೆ ಬಹಿರಂಗ ಪಂಥಾಹ್ವಾನ ನೀಡಿದ್ದ ಹೆಬ್ಬಾರ್ ಕಾಂಗ್ರೆಸ್ ನಲ್ಲಿದ್ದಾಗ ಮತ್ತು ಕಾಂಗ್ರೆಸ್ ನಿಂದ ಹೊರಗಿದ್ದಾಗ ಕೂಡಾ ದೇಶಪಾಂಡೆಯವರೊಂದಿಗೆ ದಾಯಾದಿ ಕಲಹ ಇಟ್ಟುಕೊಂಡವರು.
ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಮತ್ತು ಮಾಜಿ ಸಚಿವ ಆರ್.ವಿ.ದೇಶಪಾಂಡೆಯವರ ತಂತ್ರ-ಸಂಘಟನೆ, ಬಹಿರಂಗ ಪ್ರಚಾರಗಳೆದುರು ಶಿವರಾಮ ಹೆಬ್ಬಾರರಿಗೆ ನೆರವಾದದ್ದು ಅವರ ಬ್ರಾಹ್ಮಣ ಕುಲ ಮತ್ತು ಯಡಿಯೂರಪ್ಪನವರ ಲಿಂಗಾಯತ ಜಾತಿ ಎನ್ನಲಾಗುತ್ತಿದೆ. ಆದರೆ ಬಹುತೇಕ ಎಲ್ಲಾ ಹೋಬಳಿ, ವಿಭಿನ್ನ ಪ್ರದೇಶಗಳಲ್ಲಿ ಹೆಚ್ಚು ಮತಗಳಿಸಿರುವ ಹೆಬ್ಬಾರ್ ರಿಗೆ ಅನೇಕ ಪೂರಕ ಅಂಶಗಳು ನೆರವಿಗೆ ಬಂದಿವೆ.
ಹಿಂದೆ ಶಿರಸಿ ಕ್ಷೇತ್ರದಲ್ಲಿ 17 ಸಾವಿರ ಮತಗಳ ಅಂತರದಿಂದ ಪರಾಜಿತರಾಗಿದ್ದ ಭೀಮಣ್ಣ ಈ ಬಾರಿ 31 ಸಾವಿರ ಮತಗಳ ಅಂತರದಿಂದ ಯಲ್ಲಾಪುರದಲ್ಲಿ ಸೋತಿದ್ದಾರೆ. ಕಾಂಗ್ರೆಸ್ ಶಕ್ತಿ, ವೈಯಕ್ತಿಕ ಬಲಾಬಲಗಳ ಹಿನ್ನೆಲೆಯಲ್ಲಿ ಇತ್ತೀಚಿನ ಎರಡು ವರ್ಷಗಳ ಪ್ರತ್ಯೇಕ 2 ಚುನಾವಣೆಗಳಲ್ಲಿ ಭೀಮಣ್ಣ ನಾಯ್ಕ ಗಳಿಸಿರುವ ಮತಪ್ರಮಾಣ ನಗಣ್ಯವಲ್ಲ. ಕಾಂಗ್ರೆಸ್ ಗಾಳಿ-ಪ್ರಾಬಲ್ಯ, ಪಾರಮ್ಯಗಳ ಅವಧಿಯಲ್ಲಿ ಟಿಕೇಟ್ ವಂಚಿತರಾಗಿದ್ದರು ಭೀಮಣ್ಣ. ಬಿ.ಜೆ.ಪಿ. ಪ್ರಭಾವ, ಪಾರಮ್ಯಗಳ ಕಾಲದಲ್ಲಿ 50 ಸಾವಿರಗಳ ಮತ ಬಾಚಿರುವ ಭೀಮಣ್ಣ ಕಾಂಗ್ರೆಸ್ ಮರ್ಯಾದೆ ಉಳಿಸಿದ್ದಾರೆ ಎನ್ನುವ ಅಭಿಪ್ರಾಯಗಳೂ ಇವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *