ಭೀಕರ ಅಪಘಾತ ಇಬ್ಬರು ಯುವಕರ ದುರ್ಮರಣ, ಎಲೆಮಾನವರ ಬಂಧನ

ಸಿದ್ಧಾಪುರ ತಾಲೂಕಿನ ಗಡಿಭಾಗದ ಜೋಗ ಬಳಿ ನಡೆದ ದ್ವಿಚಕ್ರವಾಹನ, ರಾಜ್ಯ ಸಾರಿಗೆ ಸಂಸ್ಥೆ ಬಸ್ ನಡುವಿನ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತರಾದ ಘಟನೆ ನಡೆದಿದೆ. ಮೃತ ಯುವಕರು ಸಿದ್ಧಾಪುರ ತಾಲೂಕಿನ ಹೆಜನಿಯವರು ಎಂದು ಗುರುತಿಸಲಾಗಿದೆ.
ಇಬ್ಬರು ಬೈಕ್ ಸವಾರರು ವೇಗವಾಗಿ ಬರುತಿದ್ದ ರಾಜ್ಯ ರಸ್ತೆ ಸಾರಿಗೆ ಬಸ್ ಬಡಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಅಸು ನೀಗಿದ್ದಾರೆ. ಈ ಘಟನೆ ಮಂಗಳವಾರ ರಾತ್ರಿ 8 ಗಂಟೆಯ ಸುಮಾರಿಗೆ ನಡೆದಿದೆ.
ಬಂಧನ-
ತಾಲೂಕಿನ ಗಡಿ ಸಾಗರ ತಾಲೂಕಿನ ಗಡಿಪ್ರದೇಶಗಳಲ್ಲಿ ಇಸ್ಫೀಟ್ ಆಡಿಸುತಿದ್ದ 4-5 ಜನರನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸಿದ್ಧಾಪುರ ಮತ್ತು ಸಾಗರ ತಾಲೂಕಿನವರಾಗಿದ್ದಾರೆ.

ನಾಯ್ಕ ಜಾತಿ ಹೀಗಳೆದ ಸಾರಿಗೆ ಸಂಸ್ಥೆ ನೌಕರ ಸಹೋದ್ಯೋಗಿಗಳಿಂದ ಪೊಲೀಸ್ ದೂರು
ಸಿದ್ಧಾಪುರ,ಡಿ.10- ಉತ್ತರ ಕನ್ನಡ ಜಿಲ್ಲೆಯ ಬಹುಸಂಖ್ಯಾತ ದೀವರು ಮತ್ತು ನಾಮಧಾರಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಾಯ್ಕ ನನ್ಮಗ ಎಂದು ಹೀಗಳೆದು ಜಾತಿ ನಿಂದನೆ ಮಾಡಿದ ಪರ ಊರು ಮೂಲದ ಶಿರಸಿ ಸಾರಿಗೆ ನೌಕರನ ಮೇಲೆ ಕ್ರಮಕ್ಕೆ ಆಗ್ರಹಿಸಿ ನಾಮಧಾರಿ ಕೆ.ಎಸ್.ಆರ್.ಟಿ.ಸಿ. ನೌಕರರ
ಸಂಘ ಇಂದು ಶಿರಸಿಯಲ್ಲಿ ಪೊಲೀಸ್ ದೂರು ನೀಡಿರುವ ಬಗ್ಗೆ ಸುದ್ದಿಯಾಗಿದೆ.
ಕೆಲವು ದಿವಸಗಳ ಹಿಂದೆ ಶಿರಸಿ ಡಿಪೋ ವಾಹನ ಚಾಲಕರೊಬ್ಬರು ತಮ್ಮ ಇಲಾಖೆಯ ನಾಯ್ಕ ಎನ್ನುವ ಸಿಬ್ಬಂದಿ ಬಗ್ಗೆ ದೂರುತ್ತಾ ನಾಯ್ಕ ನನ್ಮಗ ಎಂದು ನಿಂದಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಚರ್ಚೆಯಾಗಿ ದೀವರು ಮತ್ತು ನಾಮಧಾರಿ ಸಮೂದಾಯದ ಹೆಸರು ಎಳೆದು ತಂದದ್ದಕ್ಕಾಗಿ ಕ್ಷಮೆ ಯಾಚಿಸಬೇಕೆಂದು ನಾಮಧಾರಿ ಸಮಾಜದ ಸಿಬ್ಬಂದಿಗಳು ಆಗ್ರಹಿಸಿದ್ದರು. ಈ ಆಗ್ರಹ, ಅಭಿಪ್ರಾಯಗಳನ್ನು ಗೌರವಿಸದೆ ಉಡಾಫೆ ಮಾಡಿರುವ ನೌಕರನ ವಿರುದ್ಧ ಅವರ ಸಹೋದ್ಯೋಗಿ ನೌಕರರು ಜಾತಿ ನಿಂದನೆ,ಸಮೂದಾಯ ಹೀಗಳೆದ ಉಡಾಫೆ ತನಕ್ಕೆ ಆ ನೌಕರನಿಗೆ ಶಿಕ್ಷಸಬೇಕೆಂದು ಇಂದು ಪೊಲೀಸ್ ದೂರು ಮತ್ತು ನಾಳೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿ ಪ್ರತಿಭಟಸಿರುವುದಾಗಿ ಖಚಿತ ಮೂಲಗಳು ಸಮಾಜಮುಖಿಗೆ ತಿಳಿಸಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *