ನಿರೀಕ್ಷೆ ಮೀರಿ ಅನುದಾನದ ಹೊಳೆ ಕೋಟಿ-ಕೋಟಿ ಅನುದಾನ ಸದ್ಭಳಕೆಗೆ ಸೂಚನೆ

ಉತ್ತರ ಕನ್ನಡ ಜಿಲ್ಲೆಗೆ ಬೆಳೆವಿಮೆ ಪರಿಹಾರ 14.92 ಕೋಟಿ, ಶಿರಸಿ ಕ್ಷೇತ್ರಕ್ಕೆ ಗ್ರಾಮೀಣ ರಸ್ತೆಗಳಿಗೆ 12 ಕೋಟಿ ಅನುದಾನ, ಅತಿವೃಷ್ಟಿ ಪರಿಹಾರ ಸಿದ್ಧಾಪುರ ತಾಲೂಕಿಗೆ 12.68 ಕೋಟಿ ಹೀಗೆ ಈ ವರ್ಷ ತಾಲೂಕು, ಕ್ಷೇತ್ರ, ಜಿಲ್ಲೆಗೆ ಹೆಚ್ಚಿನ ಅನುದಾನ ಬಂದಿದ್ದು ಆ ಅನುದಾನದ ಸದ್ಭಳಕೆಗೆ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚಿಸಿದರು.
ತಾ,ಪಂ. ಸಭಾಭವನದಲ್ಲಿ ನಡೆದ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಈ ವರ್ಷ ಹೆಚ್ಚು ಅನುದಾನ ಬಂದಿದೆ. ಮುಂದಿನ ಆರ್ಥಿಕ ವರ್ಷದಲ್ಲೂ ಹೆಚ್ಚಿನ ಅನುದಾನ ಬರಲಿದೆ. ಈ ಅವಕಾಶದಲ್ಲಿ ಅನುದಾನ ಸದ್ಭಳಕೆ ಮಾಡುವ ಮೂಲಕ ತಾಲೂಕು ಕ್ಷೇತ್ರದ ಅಭಿವೃದ್ಧಿ ಮಾಡಬೇಕಿದೆ ಎಂದು ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಸೂಚನೆ ನೀಡಿದ ವಿಶ್ವೇಶ್ವರ ಹೆಗಡೆ ಕಾಡು ಪ್ರಾಣಿ ಹಾವಳಿ, ಕಾಡುಪ್ರಾಣಿಗಳಿಂದ ಬೆಳೆನಾಶ ಸೇರಿದ ಕೆಲವು ಅವಶ್ಯ ಕೆಲಸಗಳನ್ನು ಮಾಡಿಸುವುದಾಗಿ ಭರವಸೆ ನೀಡಿದರು.
ಪ್ರಗತಿಪರಿಶೀಲನಾ ಸಭೆಯ ಪ್ರಾರಂಭದಲ್ಲಿ ಮಾತನಾಡಿದ ಹೆಗಡೆ ಈ ಆರ್ಥಿಕ ವರ್ಷ ಕೊನೆಯಾಗುತ್ತಿದೆ.ವಿಳಂಬ, ನಿರ್ಲಕ್ಷದಿಂದ ಅಭಿವೃದ್ಧಿ ಅನುದಾನ ಮರಳಬಾರದು. ಈಗಿನಿಂದಲೇ ತಾಲೂಕಿಗೆ ನಿರೀಕ್ಷೆ ಮೀರಿ ಹಣ ಬರಲಿದೆ ಅದರ ಸದ್ಭಳಕೆ ಆಗಬೇಕು ಎಂದು ಆದೇಶಿಸಿದ ಅವರು ಜನಪ್ರತಿನಿಧಿಗಳು, ಅಧಿಕಾರಿಗಳು ಅವಶ್ಯ ಕೆಲಸಗಳ ಬಗ್ಗೆ ತಿಳಿಸಿ ಸಹಕರಿಸಿದರೆ ಈ ಸರ್ಕಾರದಿಂದ ಗರಿಷ್ಟ ಅನುದಾನದ ಜೊತೆಗೆ ಹೆಚ್ಚಿನ ಅನುಕೂಲ ಆಗಲಿದೆ ಎಂದರು.
ಸಭೆಗೆ ಮಾಹಿತಿ ನೀಡಿದ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಬೆಳೆವಿಮೆ, ಬೆಳೆಹಾನಿ ಅನುದಾನದ ತಾಲೂಕುವಾರು ದಾಖಲೆಗಳು ಲಭ್ಯವಿಲ್ಲದಿದ್ದುದರಿಂದ ಕರಾರುವಕ್ಕಾಗಿ ತಾಲೂಕಿಗೆ ಇಷ್ಟು ಅನುದಾನ ಬಂದಿದೆ. ಇಷ್ಟು ಫಲಾನುಭವಿಗಳಿಗೆ ದೊರೆತಿದೆ ಎನ್ನುವುದು ತಿಳಿಯುವುದಿಲ್ಲ ಎಂದು ತೊಂದರೆಯನ್ನು ವಿಧಾನಸಭಾಅಧ್ಯಕ್ಷರ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರೀಯಿಸಿದ ಅವರು ಸಂಬಂಧಿಸಿದ ಸಚಿವರು, ಅಧಿಕಾರಿಗಳಿಗೆ ತಿಳಿಸಿ ಈ ತೊಂದರೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಆರೋಗ್ಯ ಮತ್ತು ಇತರ ಇಲಾಖೆಗಳ ವರದಿ ಕೇಳಿದ ಸಚಿವರು ಅಗತ್ಯ ಅನುಕೂಲ ಕೇಳಿ ಮುಂಜಾಗ್ರತೆಯಿಂದ ತೊಂದರೆ ಬಗೆಹರಿಸಲು ಸೂಚಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *