ನಾ.ಪೌ.ಮಸೂದೆ ಜಾರಿ ಮಾಡದಿರಲು ಮನವಿ ಗೋಲಿಬಾರ್‍ಗೆ ತೀವೃ ಖಂಡನೆ

ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ದೇಶದಾದ್ಯಂತ ತೀವೃ ವಿರೋಧ ವ್ಯಕ್ತವಾದ ಬೆನ್ನಿಗೇ ಸಿದ್ಧಾಪುರದಿಂದಲೂ ಈ ಮಸೂದೆ ಜಾರಿ ಮತ್ತು ಇದರಿಂದಾಗಿ ಉಂಟಾದ ಸಾವು-ನೋವುಗಳಿಗೆ ಖೇದ ವ್ಯಕ್ತಪಡಿಸಿ,ಖಂಡಿಸಲಾಗಿದೆ.
ಕರ್ನಾಟಕ ರಾಷ್ಟ್ರಸಮಿತಿ ಜಿಲ್ಲಾ ಸಂಚಾಲಕ ನಾಗರಾಜ್ ನಾಯ್ಕ ಈ ಘಟನೆಯನ್ನು ಖಂಡಿಸಿ ಪೌರತ್ವ ಮಸೂದೆ ತಿದ್ದುಪಡಿ ಜಾರಿಯಿಂದಾಗಿ ದೇಶದಾದ್ಯಂತ ವಿರೋಧವ್ಯಕ್ತವಾಗಿ ಪ್ರತಿಭಟನೆಗಳು ನಡೆದಿವೆ. ರಾಜ್ಯದಲ್ಲಿ ಸಂವಿಧಾನಾತ್ಮಕ ಪ್ರತಿಭಟನೆಗಳಿಗೆ ನಿಷೇದಾಜ್ಞೆ ಜಾರಿ ಮಾಡುವ ಮೂಲಕ ರಾಜ್ಯ ಸರ್ಕಾರ ತಪ್ಪು ಮಾಡಿದೆ. ಶಾಂತಿಯುತವಾಗಿ ನಡೆಯುತಿದ್ದ ಪ್ರತಿಭಟನೆಗೆ ನಿಶೇದಾಜ್ಞೆ ಜಾರಿ ಮಾಡುವ ಮೂಲಕ ಹಿಂಸೆಗೆ ಉತ್ತೇಜಿಸಲಾಗಿದೆ. ಪೌರತ್ವ, ಪ್ರತಿಭಟನೆ,ಧರಣಿಗಳು ನಾಗರಿಕರ ಹಕ್ಕಾಗಿದ್ದು ಪ್ರಜಾಸತ್ತಾತ್ಮಕ ಸರ್ಕಾರ ಅವುಗಳನ್ನು ರಕ್ಷಿಸಬೇಕು.
ಅಸಮರ್ಪಕ ತಿದ್ದುಪಡಿ,ಪ್ರತಿಭಟನೆಗೆ ವಿರೋಧಮಾಡುವ ವ್ಯವಸ್ಥೆ ಜನದ್ರೋಹಿಯಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ವಿವೇಚನೆಯಿಂದ ವರ್ತಿಸದಿದ್ದರೆ ಜನರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಈ ಘಟನೆಯನ್ನು ಖಂಡಿಸಿರುವ ಅವರು ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಗೆ ಮುಂದಾಗಲು ಕೇಂದ್ರ,ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ನಾಗರಿಕ ಪೌರತ್ವ ತಿದ್ದುಪಡಿ ಮಸೂದೆ ಹಿಂದೆ ಪಡೆಯಬೇಕು ಎಂದು ಒತ್ತಾಯಿಸಿರುವ ಜಾದಳದ ಅಲ್ಫಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಲಿಯಾಸ್ ಶೇಖ್ ರಾಜ್ಯದಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡಿ ಹಿಂಸೆಗೆ ಉತ್ತೇಜಿಸುವ ಕ್ರಮದಿಂದ ಹಿಂದೆ ಸರಿಯಬೇಕು ಎಂದು ರಾಜ್ಯದ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.
ತಹಸಿಲ್ದಾರರ ಮೂಲಕ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಲಿಖಿತ ಮನವಿ ರವಾನಿಸಿರುವ ಅವರು ನಾಗರಿಕ ಪೌರತ್ವ ಮಸೂದೆ ಅನೇಕರ ವಿರೋಧದ ನಡುವೆ ಸಂಸತ್ ನಲ್ಲಿ ಅಂಗೀಕರಿಸಲಾಗಿದೆ.ಜಾತ್ಯಾತೀತತೆ, ಮಾನವೀಯತೆಗೆ ವಿರೋಧವಾಗಿರುವ ನಾಗರಿಕ ತಿದ್ದುಪಡಿ ಮಸೂದೆಯನ್ನು ರಾಜ್ಯದಲ್ಲಿ ಜಾರಿ ಮಾಡದಿರಲು ಅವರು ಮುಖ್ಯಮಂತ್ರಿಗಳನ್ನು ಕೋರಿದ್ದಾರೆ.

ಗುತ್ತಿಗೆದಾರರ ರಕ್ಷಣೆಗೆ ಅಧಿಕಾರಿಗಳು ಕೆಲಸಮಾಡಬೇಕಿಲ್ಲ -ಮಾ.ಹೆಗಡೆ
ಇಂದು ತಾ.ಪಂ.ಸಭಾಭವನದಲ್ಲಿ ನಡೆದ ಮಾಸಿಕ ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪವಿಭಾಗದ ಅಧಿಕಾರಿಗಳು ವಿವರಣೆ ನೀಡುತಿದ್ದಂತೆ ತಂಡಾಗುಂಡಿ ಗಂಡಾಗುಂಡಿ ವ್ಯವಹಾರ ಚರ್ಚೆಗೆ ಬಂದು ತಪ್ಪಿತಸ್ಥರ ಮೇಲೆ ಕ್ರಮಜರುಗಿಸಿರುವ ಬಗ್ಗೆ ತಾ.ಪಂ. ಕಾ.ನಿ.ಅ. ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪ್ರತಿಕ್ರೀಯಿಸಿದ ತಾ.ಪಂ.ಸ್ಥಾಯಿ ಸಮೀತಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ತಂಡಾಗುಂಡಿ ವಿಷಯವಿರಲಿ, ಜಿ.ಪಂ.ಕಾಮಗಾರಿಗಳ ವಿಷಯವಿರಲಿ ಗುತ್ತಿಗೆದಾರರನ್ನು ರಕ್ಷಿಸುವ ಕೆಲಸಕ್ಕೆ ಅಧಿಕಾರಿಗಳು ಕೈಜೋಡಿಸಬಾರದು ಎಂದು ಎಚ್ಚರಿಸಿದರು.

ತಂಡಾಗುಂಡಿ ಗಂಡಾಗುಂಡಿ ಸ್ಟೋರಿ- ಭಾಗ-02
ಕಳಪೆ ಗುತ್ತಿಗೆದಾರರ ರಕ್ಷಣೆ,ಕೆಲಸಮಾಡದೆ ಹಣ ನೀಡಿದ ಆರೋಪ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಅಮಾನತ್‍ಸಿದ್ದಾಪುರ,ಡಿ.20-ತಾಲೂಕಿನ ತಂಡಾಗುಂಡಿ ಗ್ರಾ.ಪಂ. ನಲ್ಲಿ ಸರ್ಕಾರಿ ಕಾಮಗಾರಿ ನಿರ್ವಹಿಸದೆ ಗುತ್ತಿಗೆದಾರರಿಗೆ ಹಣ ಪಾವತಿಸಿರುವುದು,ತರಾತುರಿಯಲ್ಲಿ ಹಳೆ ಕಾಮಗಾರಿಗಳನ್ನು ನಿರ್ವಹಿಸಿರುವುದು ಸೇರಿದಂತೆ ರಾಜಕೀಯ ಮುಖಂಡರ ಸ್ನೇಹ,ಅಧಿಕಾರ,ಸರ್ಕಾರದ ಅಧಿಕಾರ ದುರುಪಯೋಗಪಡಿಸಿಕೊಂಡ ಗುತ್ತಿಗೆದಾರನ ಸ್ವಾರ್ಥಕ್ಕೆ ಸಹಕರಿಸಿದ ಮೇಲ್ನೋಟದ ಆರೋಪದ ಮೇಲೆ ತಂಡಾಗುಂಡಿ ಗ್ರಾ.ಪಂ. ಅಧಿಕಾರಿ ಲತಾ ಶೇಟ್ ಅಮಾನತ್ತಾಗಿದ್ದಾರೆ.
ಈ ಅಮಾನತ್ ಆದೇಶದ ಹಿಂದೆ ಕೆಲಸ ಮಾಡಿದ್ದು ಮಾಹಿತಿಹಕ್ಕು ಅರ್ಜಿ ಎನ್ನುವುದು ಕುತೂಹಲದ ವಿಷಯ.
ನೂತನ ಗ್ರಾ.ಪಂ.ಆದ ತಂಡಾಗುಂಡಿಯಲ್ಲಿ ಈ ಅವಧಿಗೆ 6 ಜನ ಸದಸ್ಯರನ್ನು ಅಲ್ಲಿಯ ಮತದಾರರು ಅವಿರೋಧವಾಗಿ ಆಯ್ಕೆಮಾಡಿದ್ದರು. ಬಹುತೇಕ ಗ್ರಾ.ಪಂ. ಗಳಲ್ಲಿ ನಡೆಯುವಂತೆ ಸದಸ್ಯರು ತಮ್ಮ ಲಾಭದ ಕೆಲಸ, ಅನುಕೂಲಗಳಿಗೆ ಸರ್ಕಾರಿ ವ್ಯವಸ್ಥೆಯನ್ನು ಬಳಸಿಕೊಂಡಿರುವುದು ಮೇಲ್ನೋಟಕ್ಕೆ ಸ್ಫಷ್ಟ. ಆದರೆ ತಂಡಾಗುಂಡಿಯಲ್ಲಿ ಗಂಡಾಗುಂಡಿ ವ್ಯವಹಾರ ಮಾಡಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾ.ಪಂ. ಸದಸ್ಯರು ಈ ವ್ಯವಹಾರಗಳಿಗೆ ಒಂದೆರಡು ಗುತ್ತಿಗೆದಾರರನ್ನು ಬಳಸಿಕೊಂಡಿದ್ದರೂ ತಂಡಾಗುಂಡಿ,ಹೆಗ್ಗರಣಿ ಸೇರಿದಂತೆ ಈ ಭಾಗದ ನಾಲ್ಕೈದು ಗ್ರಾಮ ಪಂಚಾಯತ್ ಗಳಲ್ಲಿ ನಾಮಕಾವಸ್ಥೆಗೆ ನಾಲ್ಕೈದು ಗುತ್ತಿಗೆದಾರರ ಹೆಸರನ್ನು ಬಳಸಿಕೊಂಡು ಪ್ರಮುಖವಾಗಿ ಶಾಸಕರ ಆಪ್ತ ಎಂದು ತಿರುಗಾಡುವ ಒಬ್ಬನೇ ಗುತ್ತಿಗೆದಾರನಿಗೆ ಈ ಭಾಗದಲ್ಲಿ ಗುತ್ತಿಗೆ ನೀಡಿರುವ ಬಗ್ಗೆ ಸಾರ್ವಜನಿಕರು ಆಕ್ಷೇಪಿಸಿದ್ದಾರೆ.
ತಂಡಾಗುಂಡಿಯಲ್ಲಿ ಅನುದಾನದ ಮೊತ್ತದ ಚೆಕ್ ಪಾವತಿಸಿದ ಸರಿಸುಮಾರು ನಾಲ್ಕೈದು ತಿಂಗಳ ನಂತರ ಡಿಸೆಂಬರ್ 15 ರ ಅವಧಿಯಲ್ಲಿ ನಿರ್ಮಿಸಲಾದ ಕಾಲುಸಂಕಕ್ಕೆ ಅಡಿಪಾಯದ ಪಿಲ್ಲರ್ ಆಗಲಿ ಮೇಲಿನ ಸಿಮೆಂಟ್ ಮುಚ್ಚಿಗೆಯನ್ನುಹಿಡಿದಿಡುವ ಅಡಿಪಾಯಕ್ಕೆ ಕಲ್ಲಿನ ತಳಪಾಯ ಹಾಕುವ ಬದಲು ಹಸಿಮಣ್ಣಿನ ಮೇಲೆ ಸಿಮೆಂಟ್ ಒರೆಸಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *