ತಂಡಾಗುಂಡಿ-ಗಂಡಾಗುಂಡಿ -04 ಸರ್ವಾನುಮತದಿಂದ ಬಿಲ್‍ಪಾಸ್ ಮಾಡಿಲ್ಲ ಎಂದ ಸದಸ್ಯರು 

ಸರ್ವಾನುಮತದಿಂದ ಬಿಲ್‍ಪಾಸ್ ಮಾಡಿಲ್ಲ ಎಂದ ಸದಸ್ಯರು

ಸಿದ್ದಾಪುರ ತಂಡಾಗುಂಡಿ ಗ್ರಾಪಂನಲ್ಲಿ ಕಾಮಗಾರಿಗಳನ್ನು ನಡೆಸುವ ಪೂರ್ವದಲ್ಲಿಯೇ ಬಿಲ್ ಪಾಸ್ ಮಾಡಿರುವ ಕುರಿತು ಗ್ರಾಪಂನ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ಪಡೆದುಕೊಳ್ಳಲಾಗಿದೆ ಎಂದು ಅಂದಿನ ಪಿಡಿಒ ಲತಾ ಶೇಟ್ ಹೇಳಿಕೆ ನೀಡಿರುವುದರಲ್ಲಿ ಸತ್ಯಾಂಶ ಇಲ್ಲ ಎಂದು ಗ್ರಾಪಂನ ಮೂರು ಜನ ಸದಸ್ಯರು ಹೇಳಿಕೆ ನೀಡಿದ್ದಾರೆ.

https://www.youtube.com/watch?v=2-9LXILPatQ&t=331s
ಈ ಕುರಿತು ಗುರುವಾರ ಹೇಳಿಕೆ ನೀಡಿರುವ ಗ್ರಾಪಂ ಸದಸ್ಯರಾದ ಚಂದ್ರಕಾಂತ ಹನುಮಂತ ಗೌಡ,ಶಕುಂತಲಾ ತಿಮ್ಮ ಚನ್ನಯ್ಯ ಹಾಗೂ ತಾರಾ ರಾಮಚಂದ್ರ ಚನ್ನಯ್ಯ ಗ್ರಾಪಂ ಪಿಡಿಒ ಯಾವುದೇ ಕಾಮಗಾರಿಗಳನ್ನು ಮಾಡುವಾಗಲೂ ನಮ್ಮ ಗಮನಕ್ಕೆ ತರದೇ ಕಾರ್ಯನಿರ್ವಹಿಸಿದ್ದರು. ಈ ಕುರಿತು ಗ್ರಾಪಂ ಸದಸ್ಯರಾದ ನಾವು ವಿಚಾರಿಸಿದಾಗ ಹಾಗೂ ಸಾರ್ವಜನಿಕರು ಪ್ರಶ್ನಿಸಿದಾಗಲೂ ಸಮರ್ಪಕ ಉತ್ತರ ಕೊಡಲಿಲ್ಲ. ಆಗ ಸಾರ್ವಜನಿಕರು ಮಾಹಿತಿ ಹಕ್ಕಿನಲ್ಲಿ ಕಾಮಗಾರಿಗಳ ಮಾಹಿತಿ ಪಡೆದುಕೊಂಡ ನಂತರ ಎಚ್ಚೆತ್ತುಕೊಂಡು ಕೆಲವು ಕಾಮಗಾರಿ ನಡೆಸಿದ್ದು ಅದು ಸಹ ಸರಿಯಾಗಿಲ್ಲ. ಗುತ್ತಿಗೆದಾರಿರಗೆ ಕಾಮಗಾರಿ ನಡೆಸದೇ ಬಿಲ್ ಹೇಗೆ ಪಾಸ್ ಮಾಡಿದ್ದೀರಿ ಎಂದು ಸುದ್ದಿಗಾರರು ಕೇಳಿದಾಗ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ಒಪ್ಪಿಗೆ ಪಡೆದು ಹಣ ಪಾವತಿಸಲಾಗಿದೆ ಎಂದು ಪಿಡಿಒ ಹೇಳಿಕೆ ನೀಡಿರುವುದು ತಮ್ಮ ರಕ್ಷಣೆಗಾಗಿಯೇ ಆಗಿದೆ. ಯಾವುದೇ ಸಾಮಾನ್ಯ ಸಭೆಯಲ್ಲಿ ಗುತ್ತಿಗೆದಾರರಿಗೆ ಕಾಮಗಾರಿ ನಡೆಸುವ ಪೂರ್ವದಲ್ಲಿಯೇ ಹಣ ನೀಡುವ ಕುರಿತು ಚರ್ಚೆ ನಡೆದಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ತಾಪಂ ಇಒ ಅವರ ಗಮನಕ್ಕೂ ತಂದಿದ್ದೇವೆ.
ಈಗಾಗಲೇ ತ್ವರಿತ ಗತಿಯಲ್ಲಿ ನಡೆದಿರುವ ಕಾಮಗಾರಿಯನ್ನು ಸಂಬಂಧ ಪಟ್ಟ ಇಂಜಿನಿಯರ್ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಚಿವರ ಎದುರು ಬೆತ್ತಲಾದ ಸಣ್ಣನೀರಾವರಿ ಇಲಾಖೆ ಅಧಿಕಾರಿಗಳು
ಉತ್ತರಕನ್ನಡ ಜಿಲ್ಲೆಗೆ ಪ್ರಗತಿಪರಿಶೀಲನೆಗೆ ಬಂದಿದ್ದ ನೀರಾವರಿ ಸಚಿವ ಕೆ.ಮಾಧುಸ್ವಾಮಿ ಎದುರೇ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಲು ತಡವರಿಸಿ,ಉಗಿಸಿಕೊಂಡ ಘಟನೆ ಇಂದು ಕಾರವಾರದಲ್ಲಿ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಭೇಟಿ,ಪ್ರಗತಿಪರಿಶೀಲನೆಗೆ ಬಂದ ಸಚಿವ ಮಾಧುಸ್ವಾಮಿ ಸಣ್ಣ ನೀರಾವರಿ ಇಲಾಖೆಯ ಮಾಹಿತಿ ಕೇಳುವ ಪ್ರಗತಿಪರಿಶೀಲನೆಯ ಸಂದರ್ಭದಲ್ಲಿ ಮುಂಡಗೋಡಿನ ಒಬ್ಬ ಇಂಜಿನಿಯರ್ ಸೇರಿದಂತೆ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡಲು ವಿಫಲರಾದರು.
ಈ ದುರ್ನಡತೆ,ಬೇಜವಾಬ್ಧಾರಿಗೆ ತರಾಟೆಗೆ ತೆಗೆದುಕೊಂಡ ನೀರಾವರಿ ಸಚಿವ ಮಾಧುಸ್ವಾಮಿ ಬೇಜವಾಬ್ದಾರಿ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇಬ್ಬರು ಅಧಿಕಾರಿಗಳನ್ನು ಮನೆಗೆ ಕಳುಹಿಸಿದ್ದೇನೆ ನಿಮಗೂ ಅದೇ ಗತಿಯಾಗಲಿದೆ ಎಂದು ಎಚ್ಚರಿಸಿದರು.
ಸಚಿವ ಮಾಧುಸ್ವಾಮಿ ಬ್ರಷ್ಟರನ್ನು ಮನೆಗೆ ಕಳುಹಿಸುವರೆ?

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *