ಬಹಿರಂಗವಾಗುತ್ತಿರುವ ಸಿದ್ದಾಪುರದ ಸುಪ್ತ ವ್ಯವಹಾರಗಳು, ಸಮಾಜಮುಖಿಯ ಅನುಮಾನ, ಆತಂಕ ಸತ್ಯ ಮಾಡುತ್ತಿರುವ ಪೊಲೀಸರು

ಈ ತಿಂಗಳ ಪ್ರಾರಂಭದಿಂದ ಸಮಾಜಮುಖಿ ಪತ್ರಿಕೆ ಮತ್ತು ನ್ಯೂಸ್ ಪೋರ್ಟಲ್ ಗಳಲ್ಲಿ ಸಿದ್ಧಾಪುರ ಮತ್ತು ಉತ್ತರಕನ್ನಡ ಜಿಲ್ಲೆಯ ಅಕ್ರಮ ವ್ಯವಹಾರಗಳ ಸರಣಿ ವರದಿಗಳು ಪ್ರಕಟವಾಗುತಿದ್ದಂತೆ ಎಚ್ಚೆತ್ತ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಸಿದ್ಧಾಪುರದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇದೇ ತಿಂಗಳು ಕನಿಷ್ಟ 25-30 ಜನರನ್ನು ಬಂಧಿಸಿದ್ದಾರೆ.
ಹೀಗೆ ಬಂಧಿತರಾದವರಲ್ಲಿ ಹೆಚ್ಚಿನವರು ಇಸ್ಫೀಟ್, ಜುಗಾರಿ, ಓ.ಸಿ. ಆಡುತಿದ್ದವರು, ಆಡಿಸುತಿದ್ದವರು ಎಂಬುದು ಗಮನಾರ್ಹ.
ಒಬ್ಬ ಕಾಲೇಜು ವಿದ್ಯಾರ್ಥಿ ಸರ್ಕಾರಿ ಕೃಪಾ ಪೋಷಿತ ಅಕ್ರಮ ದಂಧೆಗೆ ಬಲಿಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿ ಸಮಾಜಮುಖಿ ವರದಿ ಮಾಡಿದ್ದಾಗ ಹಗಲು ದೇಶಭಕ್ತರು ರಾತ್ರಿ ದರೋಡೆಕೋರರು, ಕಳ್ಳರು ಆಗುವ ರಾಷ್ಟ್ರೀಯವಾದಿಗಳ ದುಷ್ಟ ಪರಿವಾರದ ಮಂಗಗಳ ಭಕ್ತರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಗುಲಾಮಿತನದ ಕೆಸರು ಕಕ್ಕಿಕೊಂಡದ್ದಿದೆ.
ಆದರೆ ಈ ಲಾಭಬಡುಕ ಸೋಗಲಾಡಿ ಮತಾಂಧ ಹುಚ್ಚುಶ್ವಾನಗಳ ಹುಚ್ಚು ಅರಚುವಿಕೆಗೆ ಯಾರೂ ಕ್ಯಾರೆ ಎನ್ನಲಿಲ್ಲ. ಸುದೈವವೆಂದರೆ ಈ ಮತಾಂಧ ದುಷ್ಟ ಪರಿವಾರದ ವ್ಯಭಿಚಾರಿ ಧಾರ್ಮಿಕರ ಸೋಗಲಾಡಿತನದ ರಾಷ್ಟ್ರೀಯ ಸುಳ್ಳುಗಾರ ಶ್ವಾನಗಳ ಕುಂಡೆಗೆ ಒದೆಯುವಂತೆ ಉತ್ತರ ಕನ್ನಡ ಪೊಲೀಸರು ಇಂದು ಸಿದ್ಧಾಪುರದ ಐಗಳಕೊಪ್ಪದಲ್ಲಿ ನಾಗರಾಜ ಗುಡ್ಡೆಮನೆ ಎನ್ನುವ ಅಕ್ರಮ ವ್ಯವಹಾರಿಯೊಂದಿಗೆ 8 ಜನರನ್ನು ಬಂಧಿಸಿದ್ದಾರೆ.
ನಿನ್ನೆ ಹೇಳಿಕೊಳ್ಳದ ಆರೋಪಕ್ಕೆ ತುತ್ತಾದ 3 ವಿದ್ಯಾರ್ಥಿಗಳ ಬಂಧನವಾಗಿದೆ.
ಇಂದು ಬೆಂಗಳೂರಿನಲ್ಲಿ ಕಂಟ್ರಿ ಪಿಸ್ತೂಲ್ ಗಳೊಂದಿಗೆ ಪೊಲೀಸರಿಗೆ ಸೆರೆ ಸಿಕ್ಕ ವ್ಯಕ್ತಿ ಸಿದ್ಧಾಪುರದವನು ಎನ್ನುವುದು ಆತಂಕದ ವಿಚಾರ.
ಹೀಗೆ ಸಿದ್ದಾಪುರದಂಥ ಪುಟ್ಟ ನಗರದ ಜನ ತಾಲೂಕು, ಜಿಲ್ಲೆ ರಾಜ್ಯಮಟ್ಟದ ವರೆಗೆ ಅಪರಾಧ ಚಟುವಟಿಕೆಗಳಲ್ಲಿ ಬಂಧಿತರಾಗುತಿದ್ದಾರೆ ಎಂದರೆ ಇವರ ಹಿಂದೆ ಅನೇಕ ವ್ಯವಸ್ಥಿತ ಜಾಲಗಳು ಕೆಲಸಮಾಡುತ್ತಿವೆ ಎಂದರ್ಥ.
ಇಂಥ ವ್ಯವಸ್ಥೆಯನ್ನು ಪೋಶಿಸುವ ಮುಖವಾಡದ ಉದ್ದಿಮೆದಾರರ ಮನೆಗೆ ಭೇಟಿ ನೀಡುವ ಇಲ್ಲಿಯ ಶಾಸಕ, ಸಂಸದರೇ ಈ ಅಕ್ರಮವ್ಯವಹಾರಗಳ ರಕ್ಷಕರು ಎನ್ನುವ ಮಾತು ಸಿದ್ಧಾಪುರದ ನಿತ್ಯ ಚರ್ಚೆಯ ವಿಷಯವಾಗಿದೆ.
ಸಮಾಜಮುಖಿ ಸೇರಿದಂತೆ ಕೆಲವು ಮಾಧ್ಯಮಗಳು ಮಾತ್ರಎಕ್ಸ್‍ಪೋಸ್ ಮಾಡಿದ ಈ ವ್ಯವಹಾರಗಳ ಹಿಂದೆ ಸಿದ್ಧಾಪುರ ಉತ್ತರ ಕನ್ನಡ ಜಿಲ್ಲೆಯ ಜನರ ಹಿತಾಸಕ್ತಿ, ಶಾಂತಿ ಸುವ್ಯವಸ್ಥೆಯ ಕಾಳಜಿ ಇದೆ.
ನಮ್ಮೆಲ್ಲಾ ಅನುಮಾನ, ಸಂಶಯಗಳನ್ನು ಅಕ್ರಮವ್ಯವಹಾರಿಗಳನ್ನು ಬಂಧಿಸುವ ಮೂಲಕ ದಿಟಮಾಡುತ್ತಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸರಿಗೆ ಸಮಾಜಮುಖಿ ಕೃತಜ್ಞತೆ ಸಲ್ಲಿಸುತ್ತದೆ.
ಈ ಹಿನ್ನೆಲೆಯಲ್ಲಿ ಉತ್ತಮ ಸಿದ್ಧಾಪುರ ಉತ್ತಮ ಸಮಾಜಕ್ಕಾಗಿ ಕೆಲಸ ಮಾಡಿದ ತೃಪ್ತಿ ನಮಗಿದೆ. ಕನಿಷ್ಟ ರಾಜ್ಯದ ಶ್ರೇಷ್ಠ ಮನಸ್ಸುಗಳಾದರೂ ಇದನ್ನು ಗಮನಿಸುತ್ತಾರೆ ಎನ್ನುವ ನಂಬಿಕೆ ನಮಗಿದೆ. ಅಂದಹಾಗೆ ಸಿದ್ಧಾಪುರದ ಅಕ್ರಮ ಮದ್ಯಮಾರಾಟ, ಇಸ್ಪೀಟ್, ಜುಗಾರಿ, ಓ.ಸಿ. ಇನ್ನಿತರ ಅಕ್ರಮಗಳು ಇಷ್ಟಕ್ಕೆ ನಿಲ್ಲುತ್ತವೆ ಎನ್ನುವುದು ಕೇವಲ ನಮ್ಮ ಬೃಮೆಯಾಗಬಾರದಷ್ಟೇ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *