ಕಣಹಬ್ಬ ಆಚರಣೆ

ಹೊಸಹೊಸ ತಂತ್ರಜ್ಞಾನ ಆವಿಶ್ಕಾರದಿಂದ ನಮ್ಮ ಸಂಸ್ಕøತಿ ನಶಿಸುತ್ತಿರುವ ಇಂದಿನ ದಿನಗಳಲ್ಲಿ ಕಣಹಬ್ಬದಂತಹ ಆಚರಣೆ ಮಾಡುತ್ತಿರುವುದು ಶ್ಲಾಘನೀಯ. ಕಣಹಬ್ಬದ ಆಚರಣೆಯಲ್ಲಿ ವಿಶೇಷತೆ ಅನ್ನುವುದಕ್ಕಿಂತಲೂ ಎಲೆಮರೆಯ ಕಾಯಿಯಂತಿದ್ದು ತಮಗರಿವಿಲ್ಲದಂತೆ ಪ್ರಾಮಾಣಿಕವಾಗಿ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳನ್ನು ಇಂದು ಸನ್ಮಾನಿಸಿರುವುದರಿಂದ ಹಬ್ಬಕ್ಕೆ ವಿಶೇಷ ಅರ್ಥ ಬಂದಿದೆ ಎಂದು ಕೃಷಿ ಅಧಿಕಾರಿ ಪ್ರಶಾಂತ ಜಿ.ಎಸ್. ಹೇಳಿದರು.
ಅವರು ತಾಲೂಕಿನ ಕಾನಳ್ಳಿಮಠದ ಪರಮೇಶ್ವರಯ್ಯ ಕಾನಳ್ಳಿಮಠರ ಪರಿವಾರದವರು ಆಯೋಜಿಸಿದ್ದ ಕಣಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಮ್ಮಲ್ಲಿ ಈಗ ಸಂಪ್ರದಾಯದಲ್ಲಿ ಆಸಕ್ತಿ ಕಡಿಮೆಯಾಗುತ್ತಿದೆ. ಸಂಘ ಸಂಸ್ಥೆಗಳು ಗುರುತಿಸಿ ಮಾಡಬೇಕಾದ ಕಾರ್ಯಗಳನ್ನು ಪರಮೇಶ್ವರರಯ್ಯ ವೈಯಕ್ತಿಕವಾಗಿ ಮಾಡುತ್ತಿದ್ದಾರೆ. ಗಿಡಮೂಲಿಕೆ ಔಷಧಿ ಕೊಡುತ್ತಿರುವವರ ಸಂಖ್ಯೆ ಕ್ಷೀಣಿಸುತ್ತಿದೆ. ಅವರು ಮುಂದಿನ ಜನಾಂಗಕ್ಕೆ ಗಿಡಮೂಲಿಕೆಯನ್ನು ಪರಿಚಯಿಸಬೇಕು. ಕೃಷಿ ಸಂಸ್ಕøತಿಯ ಅಂಗವಾಗಿ ಈ ಕಾರ್ಯ ವಿಶಿಷ್ಠ ಪೂರ್ಣವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಾಟಿ ವೈದ್ಯ ಅವರಗುಪ್ಪಾದ ಹಾಲಾ ಹಾಲಾ ನಾಯ್ಕ, ಸೂಲಗಿತ್ತಿಯಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ ಕಾಳಮ್ಮ ಜಟ್ಯ ಮಡಿವಾಳ, (ಅವರ ಪರವಾಗಿ ಅವರ ಮಗ ಬಸವರಾಜ ಸನ್ಮಾನ ಸ್ವಿಕರಿಸಿದರು),
ಭತ್ತ ಸೆಳೆಯುವ ಕಾರ್ಯದಲ್ಲಿ ಅವಿರತ ಸೇವೆ ಸಲ್ಲಿಸಿದ ಹೊನ್ನಮ್ಮ ಲಕ್ಷ್ಮಣ ನಾಯಕ, ಪತ್ರಿಕಾ ವಿತರಕ ಸುರೇಶ ಗಣಪತಿ ಹೆಗಡೆ, ಪೋಸ್ಟ್‍ಮೆನ್ ವೀರಪ್ಪಯ್ಯ ಚನ್ನಬಸಪ್ಪ ಗೌಡ ರ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ತೋಟಗಾರಿಕಾ ಸಹಾಯಕ ನಿರ್ದೇಶಕ ಮಹಾಬಲೇಶ್ವರ ಹೆಗಡೆ, ರಾಜಶೇಖರ ತುದಿಕೊಪ್ಪ, ಲಿಂಗರಾಜ ಚಿತ್ರಟ್ಟೆಮಠ, ಪರಮೇಶ್ವರಯ್ಯ ಶಿಕಾರಿಪುರ, ಅನಂತ ಹೆಗಡೆ ಮಘೇಗಾರು ಉಪಸ್ಥಿತರಿದ್ದರು.
ಪರಮೇಶ್ವರಯ್ಯ ಕಾನಳ್ಳಿಮಠ ಪ್ರಾಸ್ತಾವಿಕವಾಗಿ ಕಣಹಬ್ಬದ ವಿಶೇಷತೆಯ ಕುರಿತು ಮಾತನಾಡಿ, ನಿರೂಪಿಸಿದರು. ಶ್ರೀಪಾದ ಹೆಗಡೆ ಸನ್ಮಾನ ಪತ್ರ ವಾಚಿಸಿದರು. ವಿನೋದಾ ಗೌಡರ್ ಪ್ರಾರ್ಥಿಸಿದರು. ಕಲ್ಯಾಣಿಪರಮೇಶ್ವರಯ್ಯ ಸ್ವಾಗತಿಸಿದರು. ಪ್ರೇಮಲತಾಪರಮೇಶ್ವರಯ್ಯ ವಂದಿಸಿದರು. ಕುಮಾರ ಸರ್ವೇಶಪರಮೇಶ್ವರಯ್ಯ ಸಹಕರಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *