ಮಹಿಳಾ ಶಿಕ್ಷಣದ ಮನ್ವಂತರೆ ಸಾವಿತ್ರಿಭಾಯಿ ಫುಲೆ


ನೈಗಾಂವ್ ಮಹಾರಾಷ್ಟ್ರದ ಒಂದು ಪುಟ್ಟ ಹಳ್ಳಿ. ಶಿಕ್ಷಕಿಯೊಬ್ಬರು ಕೈಚೀಲವೊಂದನ್ನು ಹೆಗಲಿಗೇರಿಸಿ ಮುನ್ನಡೆಯುತ್ತಿದ್ದರು. ‘ಇವಳೊಬ್ಬಳು ಗುರುವಂತೆ ಗುರು! ರೊಟ್ಟಿ ತಟ್ಟಕೊಂಡು ಮನೇಲಿ ಬಿದ್ದಿರೋದು ಬಿಟ್ಟು ಊರವರಿಗೆಲ್ಲಾ ಶಾಲೆ ಕಲಿಸ್ತಾಳಂತೆ’ ಎಂದು ಚುಚ್ಚು ನುಡಿಯುತ್ತಿದ್ದರು.
ಯುವಕರಷ್ಟೇ ಅಲ್ಲ, ಕೆಲ ಮಹಿಳೆಯರು ಬಾಯಿಗೆ ಬಂದಂತೆ ನಿಂದಿಸುತ್ತಿದ್ದರು. ಕೆಲವರು ಕೆಸರು, ಸೆಗಣಿ ಎರಚುತ್ತಿದ್ದರು. ಇಷ್ಟಾದರೂ ಮರುಪ್ರತಿಕ್ರಿಯಿಸದೇ ಎರಚುವ ಸಗಣಿ, ತೂರುವ ಕಲ್ಲುಗಳನ್ನು ಹೂಗಳಂತೆ ಸ್ವೀಕರಿಸಿ ಮನೆಯಿಂದ ಬರುವಾಗ ಕೈ ಚೀಲದಲ್ಲಿ ಮತ್ತೊಂದು ಸೀರೆ ತಂದು ಮಕ್ಕಳು ಬರುವುದಕ್ಕಿಂತ ಮುಂಚಿತವಾಗಿ ಉಟ್ಟುಕೊಂಡು ಪಾಠ ಮಾಡುತ್ತಿದ್ದರಂತೆ. ಮರುಮಾತಿಲ್ಲದೆ ಮೌನವೇ ಉತ್ತರದಂತಿದ್ದ ಇವರ ನಡೆಯನ್ನು ಗುರುತಿಸಿ ಸಗಣಿ ಎರಚಿದವರೇ ಸರಿ ದಾರಿಗೆ ಬಂದರು. ದಿನಗಳೆದಂತೆ ಮರುಮಾತಿಲ್ಲದೇ ತಮ್ಮ ವಿರೋಧ ಬಿಟ್ಟು ಇವರ ಶಿಷ್ಯರಾದರು. ಹೀಗೆ 1848 ರಿಂದ 1852 ರವರೆಗೆ ಕೇವಲ 4 ವರ್ಷಗಳಲ್ಲಿ ಸತಾರ ಜಿಲ್ಲೆಯಾದ್ಯಂತ ಸುಮಾರು 18 ಶಾಲೆಗಳನ್ನು, ಒಂದು ಶಿಶುಪಾಲನಾ ಕೇಂದ್ರ, 2 ಅನಾಥಶ್ರಮ, ತೆರೆದು ಮಕ್ಕಳಿಗೆ ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಅಕ್ಷರ ಭಾಗ್ಯ ತಲುಪಿಸಿದ ಶಾರದೆಯಾಗಿ ಕಂಗೊಳಿಸಿದವರೇ ದೇಶದ ಪ್ರಥಮ ಮಹಿಳಾ ಶಿಕ್ಷಕಿ, ಶೈಕ್ಷಣಿಕ ಮನ್ವಂತರೆ ಸಾವಿತ್ರಿಬಾಯಿ ಫುಲೆ.
ಇವರು ಮಹಾರಾಷ್ಟ್ರದ ಸತ್ತಾರ ಜಿಲ್ಲೆಯ ನೈಗಾಂವ ಎಂಬ ಗ್ರಾಮದಲ್ಲಿ ಜನವರಿ 3, 1831 ರಂದು ಹುಟ್ಟಿದರು. ತಂದೆ ನೇವಸೆ ಪಾಟೀಲ. ತಮ್ಮ 8ನೇ ವಯಸ್ಸಿನಲ್ಲಿ ಜ್ಯೋತಿಬಾ ಅವರನ್ನು ಅಂದಿನ ಪದ್ಧತಿಯಂತೆ ಬಾಲ್ಯವಿವಾಹವನ್ನಾಗಿ ಅನೇಕ ವಯೋಸಹಜ ಸಾಮಾಜಿಕ ಸಂಕಷ್ಟವನ್ನೆದುರಿಸಿದ್ದರೂ, ಆದರ್ಶ ಪತಿ ಜ್ಯೋತಿಬಾ ಅವರಿಂದಲೇ ಶಿಕ್ಷಣ ಹಾಗೂ ಸಾಮಾಜಿಕ ಅರಿವನ್ನು ಪಡೆದರು. ಪತಿ ಜ್ಯೋತಿಬಾ ಅವರು ತುಂಬಾ ಜ್ಞಾನವಂತರಾಗಿದ್ದು, ಸಾಮಾಜಿಕ ಹರಿಕಾರರೂ ಆಗಿದ್ದರು.
ಸಾವಿತ್ರಿ ಬಾಯಿ ಶ್ರೀ ಭಿಡೆ ಎಂಬುವವರ ಮನೆಯಲ್ಲಿ ಹೆಣ್ಣುಮಕ್ಕಳಿಗಾಗಿ ಶಾಲೆಯನ್ನು ತೆರೆದು ಪ್ರಧಾನಶಿಕ್ಷಕಿಯಾಗಿ ಹತ್ತಾರು ಹೆಣ್ಣುಮಕ್ಕಳಿಗೆ ಅರಿವಿನ ಮೂಲಕ ಭವಿಷ್ಯವನ್ನು ಕಲ್ಪಿಸಿದ್ದರು. 1860 ರ ದಶಕದಲ್ಲಿ ಸಾಮಾಜಿಕ ಅನಿಷ್ಟಗಳಾದ ಬಾಲ್ಯವಿವಾಹ, ಸತಿ ಸಹಗಮನ, ವಿಧವಾ ಕೇಶಮುಂಡನೆ ವಿರುದ್ಧ ಹೋರಾಡಿ ಸಾಮಾಜಿಕ ಬಹಿಷ್ಕಾರಕ್ಕೂ ಒಳಗಾಗುತ್ತಾರೆ. ಆದರೂ ಯಾವುದಕ್ಕೂ ಧೃತಿಗೆಡದೆ ಅನಾಥರಿಗಾಗಿ ಅಬಲಾಶ್ರಮ ಸ್ಥಾಪನೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ವಿವಾಹ ಬಾಹೀರವಾಗಿ ಹುಟ್ಟಿದ ಅನೇಕ ಮಕ್ಕಳಿಗಾಗಿ ಭಿನ್ನವಾದ ಶಿಶುಕೇಂದ್ರಗಳನ್ನು ಸ್ಥಾಪಿಸಿದ್ದರು. ಈ ಮೂಲಕ ಮಹಿಳೆಯರ ಮತ್ತು ಮಕ್ಕಳ ನೂರಾರು ಪುನರ್ವಸತಿ ನೆಲೆ ಕಲ್ಪಿಸಿಕೊಟ್ಟಿದ್ದರು. ಸಾವಿತ್ರಿಬಾಯಿ ಅವರು ಅಂದಿನ ಸತ್ಯಶೋಧಕ ಸಮಾಜದ ಅಧ್ಯಕ್ಷೆಯಾಗಿದ್ದರು.
19ನೇ ಶತಮಾನದಲ್ಲಿ ಹಿಂದೂ ಧಾರ್ಮಿಕ ಮದುವೆಗಳನ್ನು ಪೂಜಾರಿಗಳಿಲ್ಲದೇ ನೇರವೇರಿಸಿದ್ದುದು ಇವರ ಕ್ರಾಂತಿಕಾರಕ ನಡೆಯಾಗಿತ್ತು.
ಸ್ವತಃ ಸಾಹಿತಿಗಳಾಗಿದ್ದ ಜ್ಯೋತಿಬಾ ‘ಕಾವ್ಯ ಫುಲೆ’, ‘ಭುವನಕಾಶಿ ಸುಬೋಧ ರತ್ನಾಕರ’, ‘ಖರ್ಜೆ’ ಮುಂತಾದ ಕೃತಿಗಳನ್ನು ಬರೆದಿದ್ದಾರೆ. ಜ್ಯೋತಿಬಾ ಅವರಿಗೆ ಆದರ್ಶ ಪತ್ನಿಯಾಗಿ ಹಗಲಿರುಳು ಹೆಗಲಿಗೆ ಹೆಗಲು ಕೊಟ್ಟು ಸಾಮಾಜಿಕ ಶೈಕ್ಷಣಿಕ ಕ್ರಾಂತಿಯಲ್ಲಿ ಮುಂದುವರಿಯುತ್ತಾರೆ. ಪತ್ನಿಯ ಮೇಲೆ ಅಗಾಧ ಪ್ರೀತಿ ಹೊಂದಿದ ಜ್ಯೋತಿಬಾ ಫುಲೆ ಅವರು ಮಕ್ಕಳಾಗದಿದ್ದರೂ ಮರುಮದುವೆಯಾಗದೆ ವಿಧವೆಯೊಬ್ಬಳ ಮಗನಾದ ಯಶವಂತನನ್ನು ದತ್ತು ತೆಗೆದುಕೊಂಡು ಅನಾಥ ಮಕ್ಕಳಿಗಾಗಿ ಅವರ ಹೆಸರಿನಲ್ಲಿ ಶಿಶು ಕೇಂದ್ರವನ್ನು ತೆರೆದರು.
ಇವರ ಈ ಸಾಧನೆಗಳನ್ನು ಗುರುತಿಸಿ ಸರಕಾರವು ಈ ವರ್ಷದಿಂದ ಅವರ ಹುಟ್ಟಿದ ದಿನವಾದ ಜನವರಿ 3 ರಂದು ದೇಶದ ಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಸ್ಮರಣೆಯ ಉದ್ದೇಶದಿಂದ ಶಾಲಾ ಕಾಲೇಜುಗಳಲ್ಲಿ ಅವರ ಜನ್ಮದಿನವನ್ನು ಆಚರಿಸಲು ನಿರ್ಧರಿಸಿರುವುದು ಸ್ವಾಗಾತಾರ್ಹ.
-ಗೋಪಾಲ ನಾಯ್ಕ ಭಾಶಿ
ಶಿಕ್ಷಕರು, ಸಿದ್ದಾಪುರ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *