ಕೊಂಡಲಿಪುರ ಚಿತ್ರದ ಪೋಷ್ಟರ್ ಬಿಡುಗಡೆ


ಸುಮಾರು 60 ವರ್ಷದ ಹಿಂದಿನ ಸ್ಥಳೀಯ ನೈಜ ಘಟನೆಯನ್ನು ಆಧರಿಸಿ ತಾಲೂಕಿನ ಕೊಂಡ್ಲಿ ಗ್ರಾಮದ ಪ್ರತಿಭಾವಂತ ಯುವಕರು ನಿರ್ಮಿಸಿದ ಕೊಂಡಲಿಪುರ 1960 ಎನ್ನುವ ಕಿರುಚಿತ್ರದ ಪೋಷ್ಟರ್ ಬಿಡುಗಡೆ ಸಮಾರಂಭ ಹೊಸ ವರ್ಷದ ಸಂದರ್ಭದಲ್ಲಿ ಕೊಂಡ್ಲಿಯ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.
ಗುತ್ತಿಗೆದಾರರಾದ ಚಂದ್ರಹಾಸ ಜಿ.ನಾಯ್ಕ, ಪಪಂ ಸದಸ್ಯ ಸುಧೀರ್ ನಾಯ್ಕ, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನಾಯಕ ಎಂ.ನಾಯ್ಕ, ಶಾಲಾ ಮುಖ್ಯಾಧ್ಯಾಪಕಿ ಶೋಭಾ ಪಾಲನಕರ್, ಸಹಶಿಕ್ಷಕರು ಹಾಗೂ ಊರ ನಾಗರಿಕರ ಸಮ್ಮುಖದಲ್ಲಿ ಪೋಷ್ಟರನ್ನು ಬಿಡುಗಡೆಗೊಳಿಸಲಾಯಿತು. ಸಮಾರಂಭದಲ್ಲಿ ಪಾಲ್ಗೊಂಡ ಅತಿಥಿಗಳು ಈ ಯುವಕರ ಪ್ರಯತ್ನಕ್ಕೆ ಶುಭ ಹಾರೈಸಿದರು.
ಕನ್ನಡಿಗರ ಶೌರ್ಯ ಮತ್ತು ಕನ್ನಡ ಭಾಷೆಯ ಹಿರಿಮೆಯನ್ನು ಬಿಂಬಿಸುವ ನೈಜ ಘಟನೆಯನ್ನಾಧರಿಸಿದ ಈ ಕಿರುಚಿತ್ರದ ಚಿತ್ರಕಥೆ ಮತ್ತು ನಿರ್ದೇಶನ ಮನು ನಾಯ್ಕ ಕೊಂಡ್ಲಿಯವರದ್ದಾಗಿದ್ದು ನಾಣಿ ಜಿ.ಬಿ. ಸಹನಿರ್ದೇಶಕರಾಗಿದ್ದಾರೆ.
ಶಶಾಂಕ್ ನಾಯ್ಕ ಹಾಗೂ ಮಂಜು ನಾಯ್ಕ ನಿರ್ಮಾಣದ ಜವಾಬ್ದಾರಿ ನಿರ್ವಹಿಸಿದ್ದು ಅಮರ ನಾಯ್ಕ, ನವೀನ ನಾಯ್ಕ, ಪ್ರಸಾದ ಭಟ್ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದ್ದಾರೆ. ತಾಲೂಕಿನ ಹೆಗ್ಗೇರಿಯಲ್ಲಿ ಕಿರುಚಿತ್ರದ ಹಲವು ಭಾಗಗಳ ಚಿತ್ರೀಕರಣ ಮಾಡಲಾಗಿದ್ದು ಆ ಊರಿನ ಮಹಾಂತೇಶ್ ಹಾಗೂ ಅಲ್ಲಿನ ಹಲವು ಯುವಕರು ಸಹಕಾರ ನೀಡಿದ್ದಾರೆ. ಮಹೇಶ್ ಎಂ. ನಿರ್ದೇಶನಕ್ಕೆ ಉತ್ತಮ ಸಹಕಾರ ನೀಡಿದ್ದಾರೆ.

ಗೃಹ ಉದ್ಯಮದಲ್ಲಿ ಯಶಸ್ಸು ಕಾಣುತ್ತಿರುವ ಶಿವಕುಮಾರ
ಹೆಸರು-ಶಿವಕುಮಾರ ಗೋವಿಂದ
ವಯಸ್ಸು-25
ವೃತ್ತಿ-ಅಗರಬತ್ತಿ ತಯಾರಿಕೆ.
ಹೀಗೆ ಪರಿಚಯಿಸಬಹುದಾದ ಯುವಕ ಶಿವಕುಮಾರ ಗೋವಿಂದ ನಾಯ್ಕ ಕಡಕೇರಿಯವರು.
ಈಗಿನ ಟ್ರೆಂಡ್‍ನಂತೆ ಮೂರು ವರ್ಷ ಡಿಪ್ಲೊಮಾ ಓದಿದ ಶಿವಕುಮಾರ ಮಹಾನಗರಕ್ಕೆ ಓಡಲು ಮುಂದಾಗಲಿಲ್ಲ. ಕೆಲವು ವರ್ಷ ಆಯ್.ಟಿ.ಆಯ್. ವಿದ್ಯಾರ್ಥಿಗಳಿಗೆ ಪಾಠ ಮಾಡಿದ. ನಂತರ ಸ್ವಂತ ಉದ್ದಿಮೆ ಶ್ರೇಷ್ಠ ಎಂದು ಬಗೆದು, ಅಗರಬತ್ತಿ ತಯಾರಿಸಲು ಪ್ರಾರಂಭಿಸಿದ. ಈಗ ತಿಂಗಳೊಂದಕ್ಕೆ ಕನಿಷ್ಠ ಮೂರು ಟನ್ ಊದುಬತ್ತಿ ತಯಾರಿಸುವ ಶಿವಕುಮಾರ ಮೂರ್ನಾಲ್ಕು ಜನ ಕೆಲಸಗಾರರಿಗೆ ವೇತನ ಕೊಟ್ಟು ದಿನಕ್ಕೆ ಸಾವಿರ ಮಿಕ್ಕಿ ಉಳಿಸುತ್ತಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *