ಆಸ್ಫತ್ರೆಗೆ ಬಂದ ಹನುಮಂತ, ಬಂಧನಕ್ಕೊಳಗಾದ ಆಕಳು!

ಎರಡು ವಿಶೇಶ ಘಟನೆಗಳು ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುದ್ದಿಯಾಗಿವೆ.
ಕುಮಟಾ ತಾಲೂಕಿನ ತಾರಮಕ್ಕಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಂತೆ ಶಾಲೆಗೆ ಬಂದಿದ್ದ ಹಸು ಒಂದನ್ನು ಕೂಡಿಹಾಕಿ ಒಂದು ದಿವಸದ ನಂತರ ಬಂಧಮುಕ್ತಗೊಳಿಸಿದ ಅಮಾನವೀಯ ಘಟನೆ ಒಂದಾದರೆ, ಮಂಗವೊಂದು ಇಂದು ಹಳಿಯಾಳ ಆಸ್ಫತ್ರೆಗೆ ಬಂದು ಅಲ್ಲಿ ದಾಖಲಾತಿ ಮಾಡುವವರು, ವೈದ್ಯರನ್ನು ಭೇಟಿಯಾಗುವವರಂತೆ ಅವರ ಜೊತೆ ನಿಂತು ಮನರಂಜನೆ ನೀಡಿದೆ.
ಕುಮಟಾ ತಾರಮಕ್ಕಿಯಲ್ಲಿ ಶನಿವಾರ ಶಾಲೆ ಪ್ರವೇಶಿಸಿದ್ದ ಆಕಳನ್ನು ಆ ಶಾಲೆಯ ಶಿಕ್ಷಕರು, ಅಡುಗೆ ಸಿಬ್ಬಂದಿ ಗಮನಿಸದೆ ಹೊರಗಿನಿಂದ ಕೀಲಿ ಹಾಕಿ ತೆರಳಿದ್ದಾರೆ. ನಂತರ ಒಂದು ದಿವಸದ ವರೆಗೆ ಹಗಲು ರಾತ್ರಿ ಎನ್ನದೆ ಕೂಗಿದ ಆಕಳ ಆಕ್ರಂದನ ಕೇಳಿ ಗ್ರಾಮಸ್ಥರು ಶಿಕ್ಷಕರನ್ನು ಕರೆಸಿ ಆಕಳನ್ನು ಬಂಧಮುಕ್ತಗೊಳಿಸಿದ್ದಾರೆ.
ಹಳಿಯಾಳದಲ್ಲಿ ರೋಗಿಗಳಂತೆ ಸರತಿ ಸಾಲಲ್ಲಿ ನಿಂತು, ನಂತರ
ವೈದ್ಯರ ಭೇಟಿಗೆ ಪ್ರಯತ್ನಿಸುವಂತೆ ವರ್ತಿಸಿ ನಂತರ ಅಲ್ಲಿಂದ ಕಾಲ್ಕಿತ್ತ ಮಂಗ ಆಸ್ಫತ್ರೆ ಸಿಬ್ಬಂದಿ ಮತ್ತು ರೋಗಿಗಳಿಗೆ ಉಚಿತ ಮನರಂಜನೆ ನೀಡಿದೆ. ಈ ಘಟನೆಗಳಲ್ಲಿ ಆಕಳನ್ನು ಮನುಷ್ಯರ ಆಸ್ಫತ್ರೆಗೆ ಮಂಗವನ್ನು ಜಾನುವಾರು ಆಸ್ಫತ್ರೆಗೆ ಸೂಕ್ತ ಚಿಕಿತ್ಸೆಗಾಗಿ ದಾಖಲಿಸಿರುವುದು ಖಚಿತವಾಗಿಲ್ಲ!

ಕೆ.ಡಿ.ಪಿ. ಸಭೆಯಲ್ಲಿ ಜನಪ್ರತಿನಿಧಿಗಳ ವಾಗ್ವಾದ
ಕೆಲವು ಇಲಾಖೆಗಳು ತಮ್ಮ ಕಾರ್ಯಕ್ರಮಗಳಿಗೆ ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನಿಸದ ಪ್ರಮಾದದಿಂದಾಗಿ ಇದೇ ವಿಷಯ ಜನಪ್ರತಿನಿಧಿಗಳ ನಡುವಿನ ಚರ್ಚೆ,ವಾಗ್ವಾದಕ್ಕೆ ಕಾರಣವಾದ ಪ್ರಸಂಗಕ್ಕೆ ಇಂದಿನ ಮಾಸಿಕ ಕೆ.ಡಿ.ಪಿ. ಸಭೆ ಸಾಕ್ಷಿಯಾಯಿತು.
ತಾ.ಪಂ. ಸಭಾಭವನದಲ್ಲಿ ನಡೆದ ಮಾಸಿಕ ಕೆ.ಡಿ.ಪಿ.ಸಭೆಯಲ್ಲಿ ತೋಟಗಾರಿಕೆ, ಕೃಷಿ ಇಲಾಖೆಗಳು ಸೇರಿದಂತೆ ಕೆಲವು ಇಲಾಖೆಗಳು ಜನಪ್ರತಿನಿಧಿಗಳಿಗೆ ಆಹ್ವಾನಿಸುವುದಿಲ್ಲ ಎಂದು ತಾ.ಪಂ. ಸದಸ್ಯ ನಾಶಿರ್‍ಖಾನ್ ಆಕ್ಷೇಪ ಎತ್ತಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *