

ದೇಶದಲ್ಲಿ ನಾನಾ ಕಾನೂನು-ಕಾಯಿದೆ ಜಾರಿ ಮಾಡಲು ಹವಣಿಸುತ್ತಿರುವ ಕೇಂದ್ರ ಸರ್ಕಾರ ಜನರ ಅಗತ್ಯ ಆಧಾರ್ಕಾರ್ಡ್ ನೀಡಿಕೆ,ತಿದ್ದುಪಡಿ ಮಾಡುತ್ತಿಲ್ಲ ಎನ್ನುವ ಆರೋಪ ಬಲವಾಗುತ್ತಿದೆ.
ಈ ಬಗ್ಗೆ ರಾಷ್ಟ್ರಪತಿಗಳಿಗೆ ಮನವಿ ಮಾಡಿ, ಪರಿಹಾರ ಕೋರಿರುವ ಜೆ.ಡಿ.ಎಸ್. ಜಿಲ್ಲಾ ಅಲ್ಫಸಂಖ್ಯಾತರ ಘಟಕದ ಅಧ್ಯಕ್ಷ ಇಲಿಯಾಸ್ ಶೇಖ್ ರಾಜ್ಯ ವಿಧಾನಸಭಾ ಅಧ್ಯಕ್ಷರು, ಮಾಜಿ ಕೇಂದ್ರ ಸಚಿವರು ಪ್ರತಿನಿಧಿಸುವ ಶಿರಸಿ ಕ್ಷೇತ್ರದಲ್ಲಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ರಗಳೆಯಾಗುತಿದ್ದು ಇದಕ್ಕೆ ಸೂಕ್ತ ಏರ್ಪಾಡು ಮಾಡುವ ಮೂಲಕ ಜನರ ನೆರವಿಗೆ ಬರಲು ಕೋರಿದ್ದಾರೆ.
ಮುಂಜಾನೆ 4 ಗಂಟೆಗೆ ಬಂದು ಸರತಿ ಸಾಲಿನಲ್ಲಿ ನಿಲ್ಲಿಸಿ ಆಧಾರ್ ಕೆಲಸ ಮಾಡಿಸುವ ಇಲ್ಲಿಯ ಬವಣೆಯಿಂದ ಬೇಸತ್ತ ಜನತೆ ನೆರೆಯ ತಾಲೂಕು,ಜಿಲ್ಲೆಯಲ್ಲಿ ಇದೇ ಕೆಲಸವನ್ನು ಸರಾಗವಾಗಿ ಮಾಡಿಕೊಡುತಿದ್ದಾರೆ.ಜನರ ಅಹವಾಲು ಸಮಸ್ಯೆ ಕೇಳದ ಇಲ್ಲಿಯ ಶಾಸಕರು, ಸಂಸದರ ಬೇಜವಾಬ್ದಾರಿಯಿಂದ ಬೇಸತ್ತು ನೇರ ರಾಷ್ಟ್ರಪತಿಗಳಿಗೇ ಮನವಿ ನೀಡಿರುವುದಾಗಿ ಶೇಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
