ಕೇಂದ್ರದ ತಾರತಮ್ಯ ಅಕ್ಷಮ್ಯ- ಹೆಚ್ಚು ಉತ್ತರದಾಯಿಯಾಗಿರುವ ಸಹಕಾರಿ ಕ್ಷೇತ್ರ ಉಳಿಸುವ ಹೊಣೆ ಹೊರಲು ಎಚ್.ಕೆ.ಪಿ. ಕರೆ

ದೇಶದಲ್ಲಿ ಶ್ರೀಮಂತ ಹಿತಾಸಕ್ತರು ಕಟ್ಟಿಕೊಳ್ಳುವ ಕಾರ್ಪೋರೇಟ್ ಸಂಸ್ಥೆಗಳಿಗೆ ಮತ್ತು ಜನಸಾಮಾನ್ಯರ ಸಹಕಾರಿ ಸಂಘಗಳಿಗೆ ಸಮಾನ ಜಿ.ಎಸ್.ಟಿ. ವಿಧಿಸಿ ನಂತರ ಕಾರ್ಪೋರೇಟ್ ಕ್ಷೇತ್ರಕ್ಕೆ 10% ರಿಯಾಯತಿ ನೀಡಿ ಸಹಕಾರಿ ಕ್ಷೇತ್ರಕ್ಕೆ 30% ಜಿ.ಎಸ್.ಟಿ. ಹೇರಲಾಗಿದೆ.
ಈ ತಾರತಮ್ಯ ಸರ್ಕಾರ ಯಾರ ಪರ ಇದೆ ಎನ್ನುವುದಕ್ಕೆ ಉದಾಹರಣೆ. ಸಹಕಾರಿ ಕ್ಷೇತ್ರದ ಪ್ರಮುಖರು ಕೆಲವು ಜನಪ್ರತಿನಿಧಿಗಳನ್ನು ನಿಲ್ಲಿಸಿ ಕೇಳುವ ಶಕ್ತಿ-ಸಂಪರ್ಕ ಹೊಂದಿದ್ದಾರೆ. ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಪ್ರಯತ್ನ ಮಾಡಬೇಕು. ನಾನಂತೂ ಸಹಕಾರಿ ಕ್ಷೇತ್ರಕ್ಕೆ ಈಗಿರುವ 30% ನಿಂದ ಕನಿಷ್ಟ 50% ರಿಯಾಯತಿ ನೀಡಬೇಕು ಎಂದು ಕೇಂದ್ರವನ್ನು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇನೆ. – ಎಚ್.ಕೆ.ಪಾಟೀಲ್

ಸರ್ಕಾರ, ಖಾಸಗಿಕ್ಷೇತ್ರಗಳಿಗಿಂತ ಹೆಚ್ಚಿನ ಉತ್ತರದಾಯಿತ್ವ ಹೊಂದಿರುವ ಸಹಕಾರಿ ಕ್ಷೇತ್ರದ ಮೇಲೆ ಸರ್ಕಾರದ ಕೆಂಗಣ್ಣಿದ್ದು ಅಸಂಘಟಿತ ಕಾರ್ಮಿಕರಾಗಿರುವ ರೈತರು, ಕಾರ್ಮಿಕರ ಹಿತರಕ್ಷಿಸುವ ಸಹಕಾರಿ ಕ್ಷೇತ್ರವನ್ನು ಉಳಿಸಿ ಬೆಳೆಸುವ ಹೊಣೆ ಜನಸಾಮಾನ್ಯರ ಮೇಲಿದೆ ಎಂದು ಹೇಳಿರುವ ಮಾಜಿ ಸಚಿವ ಎಚ್. ಕೆ ಪಾಟೀಲ್ ರಾಜ್ಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರ ದೇಶಕ್ಕೇ ಮಾದರಿಯಾಗಿದೆ ಎಂದು ಶ್ಲಾಘಿಸಿದ್ದಾರೆ.
ಇಲ್ಲಿಯ ಟಿ.ಎಂ.ಎಸ್. ಅಮೃತಮಹೋತ್ಸವದಲ್ಲಿ ಮಾತನಾಡಿದ ಅವರು ಯಾವುದೇ ವಸ್ತುವಿಗೆ ಉತ್ಫಾದಕ ಬೆಲೆ ನಿಗದಿಪಡಿಸಬೇಕು ಆದರೆ ರೈತರ ಬೆಳೆ, ಮಹಸೂಲಿಗೆ ಗ್ರಾಹಕರು ಬೆಲೆ ಕಟ್ಟುತ್ತಾರೆ. ಈ ಶೋಷಣೆ ತಡೆಯಲು ರೈತರು ಬೆಳೆದ ಬೆಳೆಗೆ ಸಹಕಾರಿ ಕ್ಷೇತ್ರದ ಮೂಲಕ ರೈತರೇ ಬೆಲೆ ನಿರ್ಧರಿಸುವಂತಾದರೆ ಉತ್ತಮ ಎಂದರು.

ಅಯ್ಯಪ್ಪ ಜಾತ್ರೆ ನಾಳೆ ಮುಕ್ತಾಯ,ಆನೆ-ಅಂಬಾರಿ ಮೆರವಣಿಗೆಯೊಂದಿಗೆ ಸಮಾಪ್ತಿ
ಸಿದ್ಧಾಪುರ ತಾಲೂಕಿನ ವಿಶಿಷ್ಟ ಜಾತ್ರೆ ಅಯ್ಯಪ್ಪಸ್ವಾಮಿ ಜಾತ್ರಾಮಹೋತ್ಸವ ಮಂಗಳವಾರ ಮುಕ್ತಾಯವಾಗಲಿದೆ. ಜ.15 ರಂದು ಎಂದಿನಂತೆ ಪೂಜೆ,ಪುನಸ್ಕಾರಗಳಿಗೆ ಅವಕಾಶವಿದೆಯಾದರೂ ಜ.14 ರ ಸಂಜೆಯ ಅಯ್ಯಪ್ಪ ಶೋಭಾಯಾತ್ರೆಯ ಆನೆಯ ಮೇಲೆ ಅಯ್ಯಪ್ಪ,ಅಂಬಾರಿ ಮೆರವಣಿಗೆಯೊಂದಿಗೆ ಜ.10 ರಿಂದ ಪ್ರಾರಂಭವಾದ ಈ ಜಾತ್ರೆ ತಾಂತ್ರಿಕವಾಗಿ ಜ.15 ರಂದು ಮುಕ್ತಾಯವಾದರೂ ವಿದ್ಯುಕ್ತವಾಗಿ ಜ.14 ರಂದೇ ಮುಗಿಯಲಿದೆ.
ಉತ್ತರ ಕನ್ನಡ ಸೇರಿದಂತೆ ರಾಜ್ಯದಲ್ಲೆಲ್ಲೂ ಕಾಣದ ಶಬರಿಮಲೆ ಮಾದರಿಯ ಅಯ್ಯಪ್ಪ ದೇಗುಲ ಇದಾಗಿದ್ದು ಇಲ್ಲಿ ಸ್ಥಳಿಯರು, ಅಯ್ಯಪ್ಪ ಭಕ್ತರಿಗೆ ಸಕಲ ಅನುಕೂಲಗಳನ್ನು ಒದಗಿಸಲಾಗಿದೆ. ಇಂಥ ವೈಶಿಷ್ಟ್ಯದ ಈ ಜಾತ್ರೆ ಸಮಯದಲ್ಲಿ ಅನೇಕ ಶೃದ್ಧಾಳುಗಳು,ಪ್ರಮುಖರು, ರಾಜಕೀಯ ನಾಯಕರು
ಭೇಟಿ ನೀಡಿದ್ದಾರೆ. ಧಾರ್ಮಿಕ ಆಚರಣೆಗಳು ಅಂಗಡಿ ಮುಂಗಟ್ಟುಗಳು, ಮನೋರಂಜನಾ ಸಾಧನಗಳು ರಂಜಿಸಿದ ಈ ಜಾತ್ರೆ 2020 ರ ವರ್ಷಕ್ಕೆ ಜ. 15 ಕ್ಕೆ ಮುಗಿಯಲಿದೆ.ಜಾತ್ರೆಯ ವೇಳೆ ಅನೇಕರು ಬಂದು ಇಲ್ಲಿಯ ವಿಶೇಶ,ಅಲಂಕಾರಗಳನ್ನು ನೋಡಿ ಸಂಬ್ರಮಿಸುವುದು ಕಳೆದ ಕೆಲವು ವರ್ಷಗಳಿಂದ ಸಂಪ್ರದಾಯವಾದಂತಾಗಿದೆ.
ನಾಡಿನ ಸಮಸ್ತರಿಗೆ ಮಕರ ಸಂಕ್ರಾಂತಿ ಶುಭಾಶಯಗಳು,
ಇಂದಿನ ಅಯ್ಯಪ್ಪ ಅಂಬಾರಿ ಮೆರವಣಿಗೆಗೆ ಸರ್ವರಿಗೂ ಸ್ವಾಗತ, ತಾಲೂಕಿನ ಗ್ರಾಮೀಣ ಜನರ ಸಂಬ್ರಮದ ಸಂಕ್ರಾಂತಿ ಮತ್ತು ಬರಗಾಲ ವಾರ್ಷಿಕ ಜಾತ್ರೆಯ ಶುಭಾಶಯಗಳೊಂದಿಗೆ
ಸುದರ್ಶನ ಪಿಳ್ಳೆ & ಕುಟುಂಬ
ಅನೂಪ್‍ಗ್ರೂಪ್ ಸಿದ್ಧಾಪುರ (ಉ.ಕ.)

ನಾಡಿನ ಸಮಸ್ತರಿಗೆ ಮಕರ ಸಂಕ್ರಾಂತಿ ಶುಭಾಶಯಗಳು,
ಇಂದಿನ ಅಯ್ಯಪ್ಪ ಅಂಬಾರಿ ಮೆರವಣಿಗೆಗೆ ಸರ್ವರಿಗೂ ಸ್ವಾಗತ, ತಾಲೂಕಿನ ಗ್ರಾಮೀಣ ಜನರ ಸಂಬ್ರಮದ ಸಂಕ್ರಾಂತಿ ಮತ್ತು ಬರಗಾಲ ವಾರ್ಷಿಕ ಜಾತ್ರೆಯ ಶುಭಾಶಯಗಳೊಂದಿಗೆ ಸುನಿಲ್‍ಕುಮಾರ
ನಾಯ್ಕ,
ಸಂಪಖಂಡ
& ಕುಟುಂಬವರ್ಗ
ಪ್ರಗತಿಪರ ಕೃಷಿಕರು,
ಸಿದ್ಧಾಪುರ (ಉ.ಕ.) 9448576017

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *