ಕೇಂದ್ರದ ತಾರತಮ್ಯ ಅಕ್ಷಮ್ಯ- ಹೆಚ್ಚು ಉತ್ತರದಾಯಿಯಾಗಿರುವ ಸಹಕಾರಿ ಕ್ಷೇತ್ರ ಉಳಿಸುವ ಹೊಣೆ ಹೊರಲು ಎಚ್.ಕೆ.ಪಿ. ಕರೆ

ದೇಶದಲ್ಲಿ ಶ್ರೀಮಂತ ಹಿತಾಸಕ್ತರು ಕಟ್ಟಿಕೊಳ್ಳುವ ಕಾರ್ಪೋರೇಟ್ ಸಂಸ್ಥೆಗಳಿಗೆ ಮತ್ತು ಜನಸಾಮಾನ್ಯರ ಸಹಕಾರಿ ಸಂಘಗಳಿಗೆ ಸಮಾನ ಜಿ.ಎಸ್.ಟಿ. ವಿಧಿಸಿ ನಂತರ ಕಾರ್ಪೋರೇಟ್ ಕ್ಷೇತ್ರಕ್ಕೆ 10% ರಿಯಾಯತಿ ನೀಡಿ ಸಹಕಾರಿ ಕ್ಷೇತ್ರಕ್ಕೆ 30% ಜಿ.ಎಸ್.ಟಿ. ಹೇರಲಾಗಿದೆ.
ಈ ತಾರತಮ್ಯ ಸರ್ಕಾರ ಯಾರ ಪರ ಇದೆ ಎನ್ನುವುದಕ್ಕೆ ಉದಾಹರಣೆ. ಸಹಕಾರಿ ಕ್ಷೇತ್ರದ ಪ್ರಮುಖರು ಕೆಲವು ಜನಪ್ರತಿನಿಧಿಗಳನ್ನು ನಿಲ್ಲಿಸಿ ಕೇಳುವ ಶಕ್ತಿ-ಸಂಪರ್ಕ ಹೊಂದಿದ್ದಾರೆ. ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಪ್ರಯತ್ನ ಮಾಡಬೇಕು. ನಾನಂತೂ ಸಹಕಾರಿ ಕ್ಷೇತ್ರಕ್ಕೆ ಈಗಿರುವ 30% ನಿಂದ ಕನಿಷ್ಟ 50% ರಿಯಾಯತಿ ನೀಡಬೇಕು ಎಂದು ಕೇಂದ್ರವನ್ನು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇನೆ. – ಎಚ್.ಕೆ.ಪಾಟೀಲ್

ಸರ್ಕಾರ, ಖಾಸಗಿಕ್ಷೇತ್ರಗಳಿಗಿಂತ ಹೆಚ್ಚಿನ ಉತ್ತರದಾಯಿತ್ವ ಹೊಂದಿರುವ ಸಹಕಾರಿ ಕ್ಷೇತ್ರದ ಮೇಲೆ ಸರ್ಕಾರದ ಕೆಂಗಣ್ಣಿದ್ದು ಅಸಂಘಟಿತ ಕಾರ್ಮಿಕರಾಗಿರುವ ರೈತರು, ಕಾರ್ಮಿಕರ ಹಿತರಕ್ಷಿಸುವ ಸಹಕಾರಿ ಕ್ಷೇತ್ರವನ್ನು ಉಳಿಸಿ ಬೆಳೆಸುವ ಹೊಣೆ ಜನಸಾಮಾನ್ಯರ ಮೇಲಿದೆ ಎಂದು ಹೇಳಿರುವ ಮಾಜಿ ಸಚಿವ ಎಚ್. ಕೆ ಪಾಟೀಲ್ ರಾಜ್ಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರ ದೇಶಕ್ಕೇ ಮಾದರಿಯಾಗಿದೆ ಎಂದು ಶ್ಲಾಘಿಸಿದ್ದಾರೆ.
ಇಲ್ಲಿಯ ಟಿ.ಎಂ.ಎಸ್. ಅಮೃತಮಹೋತ್ಸವದಲ್ಲಿ ಮಾತನಾಡಿದ ಅವರು ಯಾವುದೇ ವಸ್ತುವಿಗೆ ಉತ್ಫಾದಕ ಬೆಲೆ ನಿಗದಿಪಡಿಸಬೇಕು ಆದರೆ ರೈತರ ಬೆಳೆ, ಮಹಸೂಲಿಗೆ ಗ್ರಾಹಕರು ಬೆಲೆ ಕಟ್ಟುತ್ತಾರೆ. ಈ ಶೋಷಣೆ ತಡೆಯಲು ರೈತರು ಬೆಳೆದ ಬೆಳೆಗೆ ಸಹಕಾರಿ ಕ್ಷೇತ್ರದ ಮೂಲಕ ರೈತರೇ ಬೆಲೆ ನಿರ್ಧರಿಸುವಂತಾದರೆ ಉತ್ತಮ ಎಂದರು.

ಅಯ್ಯಪ್ಪ ಜಾತ್ರೆ ನಾಳೆ ಮುಕ್ತಾಯ,ಆನೆ-ಅಂಬಾರಿ ಮೆರವಣಿಗೆಯೊಂದಿಗೆ ಸಮಾಪ್ತಿ
ಸಿದ್ಧಾಪುರ ತಾಲೂಕಿನ ವಿಶಿಷ್ಟ ಜಾತ್ರೆ ಅಯ್ಯಪ್ಪಸ್ವಾಮಿ ಜಾತ್ರಾಮಹೋತ್ಸವ ಮಂಗಳವಾರ ಮುಕ್ತಾಯವಾಗಲಿದೆ. ಜ.15 ರಂದು ಎಂದಿನಂತೆ ಪೂಜೆ,ಪುನಸ್ಕಾರಗಳಿಗೆ ಅವಕಾಶವಿದೆಯಾದರೂ ಜ.14 ರ ಸಂಜೆಯ ಅಯ್ಯಪ್ಪ ಶೋಭಾಯಾತ್ರೆಯ ಆನೆಯ ಮೇಲೆ ಅಯ್ಯಪ್ಪ,ಅಂಬಾರಿ ಮೆರವಣಿಗೆಯೊಂದಿಗೆ ಜ.10 ರಿಂದ ಪ್ರಾರಂಭವಾದ ಈ ಜಾತ್ರೆ ತಾಂತ್ರಿಕವಾಗಿ ಜ.15 ರಂದು ಮುಕ್ತಾಯವಾದರೂ ವಿದ್ಯುಕ್ತವಾಗಿ ಜ.14 ರಂದೇ ಮುಗಿಯಲಿದೆ.
ಉತ್ತರ ಕನ್ನಡ ಸೇರಿದಂತೆ ರಾಜ್ಯದಲ್ಲೆಲ್ಲೂ ಕಾಣದ ಶಬರಿಮಲೆ ಮಾದರಿಯ ಅಯ್ಯಪ್ಪ ದೇಗುಲ ಇದಾಗಿದ್ದು ಇಲ್ಲಿ ಸ್ಥಳಿಯರು, ಅಯ್ಯಪ್ಪ ಭಕ್ತರಿಗೆ ಸಕಲ ಅನುಕೂಲಗಳನ್ನು ಒದಗಿಸಲಾಗಿದೆ. ಇಂಥ ವೈಶಿಷ್ಟ್ಯದ ಈ ಜಾತ್ರೆ ಸಮಯದಲ್ಲಿ ಅನೇಕ ಶೃದ್ಧಾಳುಗಳು,ಪ್ರಮುಖರು, ರಾಜಕೀಯ ನಾಯಕರು
ಭೇಟಿ ನೀಡಿದ್ದಾರೆ. ಧಾರ್ಮಿಕ ಆಚರಣೆಗಳು ಅಂಗಡಿ ಮುಂಗಟ್ಟುಗಳು, ಮನೋರಂಜನಾ ಸಾಧನಗಳು ರಂಜಿಸಿದ ಈ ಜಾತ್ರೆ 2020 ರ ವರ್ಷಕ್ಕೆ ಜ. 15 ಕ್ಕೆ ಮುಗಿಯಲಿದೆ.ಜಾತ್ರೆಯ ವೇಳೆ ಅನೇಕರು ಬಂದು ಇಲ್ಲಿಯ ವಿಶೇಶ,ಅಲಂಕಾರಗಳನ್ನು ನೋಡಿ ಸಂಬ್ರಮಿಸುವುದು ಕಳೆದ ಕೆಲವು ವರ್ಷಗಳಿಂದ ಸಂಪ್ರದಾಯವಾದಂತಾಗಿದೆ.
ನಾಡಿನ ಸಮಸ್ತರಿಗೆ ಮಕರ ಸಂಕ್ರಾಂತಿ ಶುಭಾಶಯಗಳು,
ಇಂದಿನ ಅಯ್ಯಪ್ಪ ಅಂಬಾರಿ ಮೆರವಣಿಗೆಗೆ ಸರ್ವರಿಗೂ ಸ್ವಾಗತ, ತಾಲೂಕಿನ ಗ್ರಾಮೀಣ ಜನರ ಸಂಬ್ರಮದ ಸಂಕ್ರಾಂತಿ ಮತ್ತು ಬರಗಾಲ ವಾರ್ಷಿಕ ಜಾತ್ರೆಯ ಶುಭಾಶಯಗಳೊಂದಿಗೆ
ಸುದರ್ಶನ ಪಿಳ್ಳೆ & ಕುಟುಂಬ
ಅನೂಪ್‍ಗ್ರೂಪ್ ಸಿದ್ಧಾಪುರ (ಉ.ಕ.)

ನಾಡಿನ ಸಮಸ್ತರಿಗೆ ಮಕರ ಸಂಕ್ರಾಂತಿ ಶುಭಾಶಯಗಳು,
ಇಂದಿನ ಅಯ್ಯಪ್ಪ ಅಂಬಾರಿ ಮೆರವಣಿಗೆಗೆ ಸರ್ವರಿಗೂ ಸ್ವಾಗತ, ತಾಲೂಕಿನ ಗ್ರಾಮೀಣ ಜನರ ಸಂಬ್ರಮದ ಸಂಕ್ರಾಂತಿ ಮತ್ತು ಬರಗಾಲ ವಾರ್ಷಿಕ ಜಾತ್ರೆಯ ಶುಭಾಶಯಗಳೊಂದಿಗೆ ಸುನಿಲ್‍ಕುಮಾರ
ನಾಯ್ಕ,
ಸಂಪಖಂಡ
& ಕುಟುಂಬವರ್ಗ
ಪ್ರಗತಿಪರ ಕೃಷಿಕರು,
ಸಿದ್ಧಾಪುರ (ಉ.ಕ.) 9448576017

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *