ಪರಿಸರದ ಅಳಿವು ಉಳಿವಿಗೆ ಮನುಷ್ಯನೇ ಕಾರಣ: ಪ್ರಸಾದ್

‘ಪರಿಸರದ ಅಳಿವು ಉಳಿವಿಗೆ ಮನುಷ್ಯನೇ ಕಾರಣ. ಮನುಷ್ಯ ಮನಸ್ಸು ಮಾಡಿದರೆ ಪರಿಸರವನ್ನು ಉಳಿಸಿಕೊಳ್ಳುವುದು ಸಾಧ್ಯವಿದೆ. ಪರಿಸರದ ಕೆಲಸವನ್ನು ನಾವು ಪಕ್ಷಿಗಳಿಂದ ಕಲಿಯಬೇಕು. ಅವು ನಿರಂತರವಾಗಿ ಪ್ರತಿದಿನವೂ ಬೀಜಪ್ರಸಾರ ಮಾಡುವ ಮೂಲಕ ಕಾಡಿನ ಬೆಳವಣಿಗೆಗೆ ಸಹಾಯವಾಗುತ್ತದೆ. ನಾವು ಮನುಷ್ಯರು ವರ್ಷಕ್ಕೊಂದು ಸಲ ಪರಿಸರ ದಿನಾಚರಣೆ ಮಾಡಿ ಕೈತೊಳೆದುಕೊಳ್ಳುತ್ತೇವೆ. ಪಕ್ಷಿಗಳಿಗಿರುವ ಪರಿಸರ ಕಾಳಜಿಯನ್ನು ನಾವು ಮೈಗೂಡಿಸಿಕೊಳ್ಳಬೇಕು’ ಎಂದು ಪಕ್ಷಿವೀಕ್ಷಕ ಪ್ರಸಾದ್ ಹೇಳಿದರು.
ಅವರು ಇಂಡಿಯಾ ಫೌಂಡೇಷನ್ ಫಾರ್ ದಿ ಆಟ್ರ್ಸ ಸಂಸ್ಥೆಯ ಆಶ್ರಯದಲ್ಲಿ ತಾಲೂಕಿನ ಆನಗೋಡ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ‘ಮಕ್ಕಳಿಗಾಗಿ ಎರಡನೇ ಹಂತದ ಪಕ್ಷಿ ವೀಕ್ಷಣೆ ವಿಶೇಷ ತರಬೇತಿ ಕಾರ್ಯಕ್ರಮ’ದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.
‘ಚಿನ್ನದ ಸೂಜಿ ಅಂತ ಕಣ್ಣಿಗೆ ಚುಚ್ಚಿಕೊಂಡರೆ ನೋವಾಗುವುದು ನಮಗೇ. ಹಾಗಾಗಿ ಇದು ಸರಕಾರದ ಕೆಲಸ ಅಂತ ಕಾಯದೆ ಪ್ರತಿಯೊಬ್ಬರೂ ಪರಿಸರ ರಕ್ಷಣೆಯ ಕೆಲಸ ತಮ್ಮ ಕೈಲಾದ ಮಟ್ಟಿಗೆ ಮಾಡಬೇಕು’ ಎಂದು ಅವರು ಹೇಳಿದರು.
ದೈಹಿಕ ಶಿಕ್ಷಣ ತಾಲೂಕ ಅಧಿಕಾರಿ ರವೀಂದ್ರ ಕಾಪಸೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ‘ಮಕ್ಕಳು ಪಕ್ಷಿವೀಕ್ಷಣೆಯ ಜೊತೆಗೆ ಅವುಗಳ ಬಗ್ಗೆ ಹೆಚ್ಚಿನ ಜ್ಞಾನವನ್ನು ಗೂಗಲ್ ಮೂಲಕ ಸಂಗ್ರಹಿಸಬಹುದು’ ಎಂದು ಅವರು ತಿಳಿಸಿದರು.
ವಿದ್ಯಾರ್ಥಿನಿ ಅಶ್ವಿನಿ ಭಟ್ಟ ಹಾಡಿದ ಸ್ವಾಗತಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮುಖ್ಯಾಧ್ಯಾಪಕ ಸುಧಾಕರ ನಾಯಕ ಸ್ವಾಗತಿಸಿದರು. ಐಎಫ್‍ಏ ಗ್ರ್ಯಾಂಟಿ ಗಣೇಶ ಪಿ. ನಾಡೋರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಸುರೇಶ್ ಕುಮಾರ್(ಬರ್ಡ್ ಸುರೇಶ್), ಹರೀಶ್, ರಾಹುಲ್, ಶಿಕ್ಷಕಿಯರಾದ ಸವಿತಾ ಹೆಗಡೆ, ಪ್ರತಿಭಾ ನಾಯ್ಕ ಉಪಸ್ಥಿತರಿದ್ದರು. ಶಿಕ್ಷಕಿ ಕುಸುಮಾ ನಾಯಕ ವಂದಿಸಿದರು.
ಅದಕ್ಕೂ ಮೊದಲು ಸಂಪನ್ನೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಶಾಲೆಯ ಆಯ್ದ 25 ಮಕ್ಕಳನ್ನು ಕಾಡಿಗೆ ಕರೆದೊಯ್ದು ಪಕ್ಷಿವೀಕ್ಷಣೆಯ ಪಟ್ಟುಗಳನ್ನು ಹೇಳಿಕೊಡಲಾಯಿತು. ಸುರೇಶ್ ಕುಮಾರ್ ಸುಮಾರು 175 ಹಕ್ಕಿಗಳ ಮಾಹಿತಿಯಿರುವ ಬೋಷರ್‍ಗಳನ್ನು ಮಕ್ಕಳಿಗೆ ಉಚಿತವಾಗಿ ಹಂಚಿ, ಪಕ್ಷಿವೀಕ್ಷಣೆಯಲ್ಲಿ ದುರ್ಬೀನು ಬಳಕೆಯ ಕುರಿತು ಮಾಹಿತಿ ನೀಡಿದರು. ಕಾಡಿನಲ್ಲಿ ಪಕ್ಷಿಗಳ ಚಲನವಲನ, ಪಕ್ಷಿಗಳಿಗೂ ಮರಗಳಿಗೂ ಇರುವ ಸಂಬಂಧ, ಪ್ಲಾಸ್ಟಿಕ್‍ನಿಂದಾಗುವ ಹಾನಿ, ಪಕ್ಷಿಗಳು ಹಾಗೂ ಮಾನವನ ಕೃಷಿ ಚಟುವಟಿಕೆಗಳಿಗಿರುವ ಸಂಬಂಧ ಮುಂತಾದ ವಿಷಯವಾಗಿ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *