ಸಾಗರಮಾಲಾ: ರಾಷ್ಟ್ರಸಮೀತಿ ನಾಗರಾಜ ಖಂಡನೆ

ಸಾಗರಮಾಲಾ ಯೋಜನೆಯ ಕಾರವಾರ ಬಂದರು ಅಭಿವೃದ್ಧಿ ಯೋಜನೆಯ ವಿರೋಧಿ ಹೋರಾಟಗಾರರನ್ನು ಬಂಧಿಸಿದ ಸರ್ಕಾರದ ಕ್ರಮವನ್ನು ಖಂಡಿಸಿರುವ ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಬಂಧಿತ ಮೀನುಗಾರರನ್ನು ತಕ್ಷಣ ಬಿಡುಗಡೆ ಮಾಡಿ ಈ ಯೋಜನೆ ಕೈಬಿಡಲು ಆಗ್ರಹಿಸಿದ್ದಾರೆ.
ಪತ್ರಿಕಾ ಪ್ರಕಟಣೆಯ ಮೂಲಕ ಈ ಆಗ್ರಹ ಮಾಡಿರುವ ಅವರು ಮತ್ಸ್ಯ ಕ್ಷಾಮ, ಸರ್ಕಾರದ ಯೋಜನೆಗಳಿಗಾಗಿ ಕಡಲು ಆಕ್ರಮಣಗಳಿಂದ ಮೀನುಗಾರರ ಬದುಕು ದುಸ್ತರವಾಗಿದೆ. ಶ್ರಮಜೀವಿಗಳಾದ ಮೀನುಗಾರರ ನೆರವಿಗೆ ಬರಬೇಕಾದ ಸರ್ಕಾರ ಅವರ ಪ್ರತಿಭಟನೆ ಹತ್ತಿಕ್ಕಿ ಬಲಪ್ರಯೋಗದಿಂದ ಅವರ ಸ್ವಾತಂತ್ರ್ಯ ಹರಣಮಾಡುತ್ತಿರುವುದನ್ನು ಖಂಡಿಸುವುದಾಗಿ ಅವರು ವಿವರಿಸಿದ್ದಾರೆ.

ಪರಿಸರದ ಅಳಿವು ಉಳಿವಿಗೆ ಮನುಷ್ಯನೇ ಕಾರಣ: ಪ್ರಸಾದ್
‘ಪರಿಸರದ ಅಳಿವು ಉಳಿವಿಗೆ ಮನುಷ್ಯನೇ ಕಾರಣ. ಮನುಷ್ಯ ಮನಸ್ಸು ಮಾಡಿದರೆ ಪರಿಸರವನ್ನು ಉಳಿಸಿಕೊಳ್ಳುವುದು ಸಾಧ್ಯವಿದೆ. ಪರಿಸರದ ಕೆಲಸವನ್ನು ನಾವು ಪಕ್ಷಿಗಳಿಂದ ಕಲಿಯಬೇಕು. ಅವು ನಿರಂತರವಾಗಿ ಪ್ರತಿದಿನವೂ ಬೀಜಪ್ರಸಾರ ಮಾಡುವ ಮೂಲಕ ಕಾಡಿನ ಬೆಳವಣಿಗೆಗೆ ಸಹಾಯವಾಗುತ್ತದೆ. ನಾವು ಮನುಷ್ಯರು ವರ್ಷಕ್ಕೊಂದು ಸಲ ಪರಿಸರ ದಿನಾಚರಣೆ ಮಾಡಿ ಕೈತೊಳೆದುಕೊಳ್ಳುತ್ತೇವೆ. ಪಕ್ಷಿಗಳಿಗಿರುವ ಪರಿಸರ ಕಾಳಜಿಯನ್ನು ನಾವು ಮೈಗೂಡಿಸಿಕೊಳ್ಳಬೇಕು’ ಎಂದು ಪಕ್ಷಿವೀಕ್ಷಕ ಪ್ರಸಾದ್ ಹೇಳಿದರು.
ಅವರು ಇಂಡಿಯಾ ಫೌಂಡೇಷನ್ ಫಾರ್ ದಿ ಆಟ್ರ್ಸ ಸಂಸ್ಥೆಯ ಆಶ್ರಯದಲ್ಲಿ ತಾಲೂಕಿನ ಆನಗೋಡ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ‘ಮಕ್ಕಳಿಗಾಗಿ ಎರಡನೇ ಹಂತದ ಪಕ್ಷಿ ವೀಕ್ಷಣೆ ವಿಶೇಷ ತರಬೇತಿ ಕಾರ್ಯಕ್ರಮ’ದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *