ಮಂಗನಖಾಯಿಲೆ ನಿಯಂತ್ರಣಕ್ಕೆ ಸಕಲವೂ ಸಿದ್ಧ ಸರ್ವ ಸನ್ನದ್ಧ

  • ವಿಶೇಶಚೇತನರಿಗೆ ತಾಲೂಕಾ ಆಸ್ಫತ್ರೆಯಲ್ಲಿಯೇ ಪ್ರಮಾಣಪತ್ರ ನೀಡಿಕೆ.
    ಪ್ರತಿಮಂಗಳವಾರ ವಿಶೇಶಚೇತನರ ಪ್ರಮಾಣಪತ್ರ,ಚಿಕಿತ್ಸೆಗೆ ದಿನ ನಿಗದಿ
  • 2019 ರ ಆಗಸ್ಟ್ ನಿಂದಲೇ ಮಂಗನಕಾಯಿಲೆ ನಿರೋಧಕ ಲಸಿಕೆ ನೀಡಿಕೆ ಪ್ರಾರಂಭ,84 ಸಾವಿರ ಡೋಜ್ ಗುರಿ,58706 ಜನರಿಗೆ ಲಸಿಕೆ ನೀಡಲು ಯೋಜನೆ, ಈಗಾಗಲೇ 11 ಸಾವಿರ ಜನರಿಗೆ ನೀಡಿಕೆ.
  • ಜನ,ಜಾನುವಾರುಗಳ ರಕ್ಷಣೆಗೆ ಹೈಪರ್ಮೆಟ್ರಿನ್ ಔಷಧಿ ಬಳಕೆ.
    *ಫೆಬ್ರವರಿ ಅಂತ್ಯದ ಒಳಗೆ ಲಸಿಕೆ ನೀಡಿಕೆ ಸಮಯಮಿತಿ.
  • ಮಂಗನಕಾಯಿಲೆಯ ಸಂಪೂರ್ಣ ಚಿಕಿತ್ಸೆಗೆ ವ್ಯವಸ್ಥೆ, ಮೂರು ತುರ್ತು ವಾಹನ ವ್ಯವಸ್ಥೆ.
    *ಅರಣ್ಯ ಪ್ರವೇಶಕ್ಕೆ ಆರೋಗ್ಯಇಲಾಖೆಯ ಗುರುತಿನ ಚೀಟಿ ಕಡ್ಡಾಯ.
  • ರಕ್ತ ಪರೀಕ್ಷಾ ವರದಿ 48 ಗಂಟೆಗಳೊಳಗೆ ಲಭ್ಯ.
  • ಮಂಗನ ಕಾಯಿಲೆಗೆ ಖಾಸಗಿ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆದರೂ ಸರ್ಕಾರದಿಂದ ವೆಚ್ಚಭರಣ
  • ಜಿಲ್ಲೆಯ266 ಶಾಲೆಗಳಲ್ಲಿ ನೋಡೆಲ್ ಟೀಚರ್ ನೇಮಕ.
  • ಜಿ.ಪಂ.ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಕೆಲಸ.
  • ತಾಲೂಕು ಆಸ್ಫತ್ರೆಯ ಹೊರ ರೋಗಿ ಪ್ರವೇಶ ಚೀಟಿ ಶುಲ್ಕ 15 ರಿಂದ 10 ರೂ ಗಳಿಗೆ ಇಳಿಕೆ.
  • ಕಾಡುಪ್ರವೇಶಿಸುವವರಿಗೆ ಸೈಪರ್‍ಮೆಟ್ರಿನ್ ಜೊತೆ ಸಂಪೂರ್ಣ ಬಟ್ಟೆ ಧರಿಸಲು ಸೂಚನೆ, ಕಾಡಿಗೆ ಹೋಗಿ ಬರುವ ಜಾನುವಾರುಗಳು,ಕೊಟ್ಟಿಗೆಗೆ ಸೈಪರ್ ಮೆಟ್ರಿನ್ ನಿಂದ ನಿತ್ಯ ಸ್ನಾನದ ಸಲಹೆ.
  • ತಾಲೂಕಾ ಆಸ್ಫತ್ರೆ ವೈದ್ಯಾಧಿಕಾರಿ ಡಾ.ಶ್ರೀನಿವಾಸ್ ರಿಂದ ಆಸ್ಫತ್ರೆ ಸುಧಾರಣೆಗೆ ಬೇಡಿಕೆಗಳ ಬೃಹತ್ ಪಟ್ಟಿ ಸಲ್ಲಿಕೆ.
    ಮಂಗನ ಕಾಯಿಲೆ ಮುನ್ನೆಚ್ಚರಿಕೆ ಮತ್ತು ರೋಗಿಗಳ ಉಪಚಾರಕ್ಕೆ ಸರ್ವಸಿದ್ಧತೆಗಳಾಗಿದ್ದು ಸಿದ್ಧಾಪುರ ಮತ್ತು ಉತ್ತರ ಕನ್ನಡದ ಜನತೆ ಈ ಬಗ್ಗೆ ಆತಂಕಕ್ಕೊಳಗಾಗುವ ಅನಿವಾರ್ಯತೆ ಇಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿದ್ದಾರೆ.
    ಇಲ್ಲಿಯ ಸರ್ಕಾರಿ ಆಸ್ಫತೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಕಳೆದ ವರ್ಷ ಅನಿರೀಕ್ಷಿತವಾಗಿ ಬಂದ ಮಂಗನಕಾಯಿಲೆ ಸಾವು-ನೋವುಗಳನ್ನು ಉಂಟುಮಾಡಿ ಜನರು ಭಯಭೀತರಾಗುವಂಥ ಸ್ಥಿತಿ ಉದ್ಭವಿಸಿತ್ತು. ಈ ವóರ್ಷ ಕಳೆದ ವರ್ಷದಂತೆ ಆಗಬಾರದೆಂಬ ಮುನ್ನೆಚ್ಚರಿಕೆಯಿಂದ ಸಕಲ ಸಿದ್ಧತೆ ಮಾಡಿಕೊಂಡಿದ್ದು ಮಂಗನಕಾಯಿಲೆ ನಿರೋಧ ಮತ್ತು ನಿಯಂತ್ರಣಕ್ಕೆ ಅವಶ್ಯವಾದ ಎಲ್ಲಾ ಅನುಕೂಲ, ಸಂಪನ್ಮೂಲಗಳನ್ನು ಕ್ರೋಢೀಕರಿಸಲಾಗಿದೆ ಎಂದರು.
    ಇಲ್ಲಿಯವರೆಗೆ ತಾಲೂಕಿನಲ್ಲಿ 19 ಮಂಗಗಳು ಸಾವನ್ನಪ್ಪಿದ್ದು ಮಂಗನಕಾಯಿಲೆ ನಿರೋಧಕ್ಕಾಗಿ ಹನ್ನೊಂದುಸಾವಿರ ಜನರಿಗೆ ಲಸಿಕೆ ನೀಡಲಾಗಿದೆ ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *