ಚುರುಕಾದ ಪೊಲೀಸರು: ಮಿಂಚಿನ ಕಾರ್ಯಾಚರಣೆಗೆ ಸಿಕ್ಕು ಕಂಗಾಲಾದ ದಂದೆಕೋರರು

ಸಿದ್ಧಾಪುರ ತಾಲೂಕು,ಶಿರಸಿಕ್ಷೇತ್ರ ಉತ್ತರಕನ್ನಡ ಜಿಲ್ಲೆಯಾದ್ಯಂತ ಚುರುಕಾದ ಪೊಲೀಸರು ಅಕ್ರಮ ವ್ಯವಹಾರಿಗಳಿಗೆ ಸಿಂಹಸ್ವಪ್ನರಾದರೆ, ಶಿರಸಿ ಉಪವಿಭಾಗದಲ್ಲಿ ಪೊಲೀಸರ ಕಾರ್ಯಾಚರಣೆಯಿಂದ ಅಕ್ರಮ ವ್ಯವಹಾರಿಗಳು ನಡುಗುವಂತಾಗಿದೆ.
ಜಿಲ್ಲೆಯಲ್ಲಿ ಗಾಂಜಾ-ಅಫೀಮು ಮಾರಾಟಗಾರರ ಜಾಲದ ಬಗ್ಗೆ ಮೇಲಿಂದ ಮೇಲೆ ಸುದ್ದಿಯಾಗುತ್ತಿರುವಂತೆ ಶಿರಸಿಯಲ್ಲಿ ಉಪಪೊಲೀಸ್ ವರಿಷ್ಠ ಗೋಪಾಲಕೃಷ್ಣ ನಾಯಕ ಅಕ್ರಮವ್ಯವಹಾರಿಗಳನ್ನು ಮಟ್ಟಹಾಕುವಕಾರ್ಯಾಚರಣೆ ಕೈಗೊಂಡಿದ್ದಾರೆ.
ಶಿರಸಿಯಲ್ಲಿರುವ ಗಾಂಜಾ-ಅಫೀಮು ಮಾರಾಟಗಾರರು,ಶಂಕಿತರ ಪರೇಡ್ ನಡೆಸಿರುವ ಅವರು ಶಿರಸಿ ಉಪವಿಭಾಗದಲ್ಲಿ ಈ ವ್ಯವಹಾರ ಮತ್ತೆ ತಲೆ ಎತ್ತದಂತೆ ಕಡಕ್ ಎಚ್ಚರಿಕೆ ನೀಡಿದ್ದಾರೆ.
ಶಿರಸಿ ಸಿದ್ಧಾಪುರದಲ್ಲಿ ಸಕಲ ವ್ಯವಹಾರ,ಉದ್ದಿಮೆಗಳ ಮುಖವಾಡದ ಕೆಲವು ಕುಖ್ಯಾತ ಓ.ಸಿ. ಬುಕ್ಕಿಗಳು, ಇಸ್ಪೀಟ್ ಆಡಿಸುವ ಉದ್ಯಮಿಗಳು ಅಮಾಯಕರು, ಅಸಹಾಯಕರನ್ನು ಬಳಸಿ ಕಾನೂನು ಬಾಹೀರ ವ್ಯವಹಾರ ನಡೆಸುತಿದ್ದಾರೆ. ಇಂಥವರ ಕೈ ಕೆಳಗೆ ಕೆಲಸಮಾಡುವ ಅನೇಕರನ್ನು ತಿಂಗಳಿನಿಂದೀಚೆಗೆ ಬಂಧಿಸಿ, ಶಿಸ್ತುಕ್ರಮ ಜರುಗಿಸಿರುವ ಪೊಲೀಸರು ಅವರಿಂದ ನಗದು ವಶಪಡಿಸಿಕೊಂಡಿದ್ದಾರೆ.
ಅಕ್ರಮ ಮದ್ಯದ ಅನೇಕ ಪ್ರಕರಣಗಳೂ ಶಿರಸಿ-ಸಿದ್ಧಾಪುರಗಳಲ್ಲಿ ಪತ್ತೆಯಾಗಿವೆ. ಡಿಸೆಂಬರ್, ಜನೇವರಿ ತಿಂಗಳಲ್ಲಿ ಶಿರಸಿ ಉಪವಿಭಾಗದಲ್ಲಿ ಅಕ್ರಮಮದ್ಯ, ಓ.ಸಿ., ಇಸ್ಪೀಟ್ ಗಳ ನೂರಾರು ಪ್ರಕರಣಗಳಲ್ಲಿ ಸಿದ್ಧಾಪುರದ್ದೇ ಸಿಂಹಪಾಲಾಗಿರುವುದು ವಿಶೇಶ.
ಇಲ್ಲಿಯ ಶಾಸಕರು, ಸಂಸದರ ಆಪ್ತ ಮುಖಂಡರು, ಉದ್ಯಮಿಗಳೇ ಇಂಥ ಕಾನೂನುಬಾಹೀರ ಚಟುವಟಿಕೆಗಳಲ್ಲಿರುವ ಬಗ್ಗೆ ಆರೋಪ ವ್ಯಕ್ತವಾಗಿತ್ತು. ಸ್ಥಳಿಯರ ಆಕ್ಷೇಪ, ಪಕ್ಷಗಳು, ಮುಖಂಡರ ವಿರೋಧದಿಂದ ಚುರುಕಾದ ಪೊಲೀಸರು ಶಿರಸಿ ಉಪವಿಭಾಗದಲ್ಲಿ ನೂರಾರು ಪ್ರಕರಣಗಳಲ್ಲಿ ಹಲವರನ್ನು ಬಂಧಿಸಿದ್ದಾರೆ.
ಬಂಧಿತ ಅನೇಕರು ಅಮಾಯಕರಾಗಿದ್ದರೂ ಅವರು ಉದ್ಯಮಿಗಳ ಮುಖವಾಡದ ಕೆಲವು ಅಕ್ರಮ ವ್ಯವಹಾರಿಗಳ ಕೈಕೆಳಗೆ ಕೆಲಸಮಾಡುವ ಜನರು ಎಂಬುದು ಸಾಬೀತಾಗಿದೆ. ಅಕ್ರಮವ್ಯಹಾರಗಳನ್ನು ಪೋಶಿಸಿ,ಉದ್ಯಮಿಗಳ ಮುಖವಾಡದಲ್ಲಿ ಮೆರೆಯುವ ಕೆಲವರನ್ನು ದಾಖಲೆಗಳೊಂದಿಗೆ ಬಂಧಿಸಿದರೆ ಸಿದ್ಧಾಪುರ, ಶಿರಸಿಕ್ಷೇತ್ರದ ಶಾಂತಿ-ಸುವ್ಯವಸ್ಥೆ, ಸ್ವಚ್ಛಂದ ಜನಜೀವನಕ್ಕೆ ಅನುಕೂಲವಾಗಲಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.ಉತ್ತರ ಕನ್ನಡದ ಪೊಲೀಸ್ ವರಿಷ್ಠ ಶಿವಪ್ರಸಾದ್‍ದೇವರಾಜ್ ಈ ಸವಾಲನ್ನು ಎದುರಿಸುವ ಬಗ್ಗೆ ಯಾವ ಅನುಮಾನಗಳೂ ಇಲ್ಲ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *