ಚುರುಕಾದ ಪೊಲೀಸರು: ಮಿಂಚಿನ ಕಾರ್ಯಾಚರಣೆಗೆ ಸಿಕ್ಕು ಕಂಗಾಲಾದ ದಂದೆಕೋರರು

ಸಿದ್ಧಾಪುರ ತಾಲೂಕು,ಶಿರಸಿಕ್ಷೇತ್ರ ಉತ್ತರಕನ್ನಡ ಜಿಲ್ಲೆಯಾದ್ಯಂತ ಚುರುಕಾದ ಪೊಲೀಸರು ಅಕ್ರಮ ವ್ಯವಹಾರಿಗಳಿಗೆ ಸಿಂಹಸ್ವಪ್ನರಾದರೆ, ಶಿರಸಿ ಉಪವಿಭಾಗದಲ್ಲಿ ಪೊಲೀಸರ ಕಾರ್ಯಾಚರಣೆಯಿಂದ ಅಕ್ರಮ ವ್ಯವಹಾರಿಗಳು ನಡುಗುವಂತಾಗಿದೆ.
ಜಿಲ್ಲೆಯಲ್ಲಿ ಗಾಂಜಾ-ಅಫೀಮು ಮಾರಾಟಗಾರರ ಜಾಲದ ಬಗ್ಗೆ ಮೇಲಿಂದ ಮೇಲೆ ಸುದ್ದಿಯಾಗುತ್ತಿರುವಂತೆ ಶಿರಸಿಯಲ್ಲಿ ಉಪಪೊಲೀಸ್ ವರಿಷ್ಠ ಗೋಪಾಲಕೃಷ್ಣ ನಾಯಕ ಅಕ್ರಮವ್ಯವಹಾರಿಗಳನ್ನು ಮಟ್ಟಹಾಕುವಕಾರ್ಯಾಚರಣೆ ಕೈಗೊಂಡಿದ್ದಾರೆ.
ಶಿರಸಿಯಲ್ಲಿರುವ ಗಾಂಜಾ-ಅಫೀಮು ಮಾರಾಟಗಾರರು,ಶಂಕಿತರ ಪರೇಡ್ ನಡೆಸಿರುವ ಅವರು ಶಿರಸಿ ಉಪವಿಭಾಗದಲ್ಲಿ ಈ ವ್ಯವಹಾರ ಮತ್ತೆ ತಲೆ ಎತ್ತದಂತೆ ಕಡಕ್ ಎಚ್ಚರಿಕೆ ನೀಡಿದ್ದಾರೆ.
ಶಿರಸಿ ಸಿದ್ಧಾಪುರದಲ್ಲಿ ಸಕಲ ವ್ಯವಹಾರ,ಉದ್ದಿಮೆಗಳ ಮುಖವಾಡದ ಕೆಲವು ಕುಖ್ಯಾತ ಓ.ಸಿ. ಬುಕ್ಕಿಗಳು, ಇಸ್ಪೀಟ್ ಆಡಿಸುವ ಉದ್ಯಮಿಗಳು ಅಮಾಯಕರು, ಅಸಹಾಯಕರನ್ನು ಬಳಸಿ ಕಾನೂನು ಬಾಹೀರ ವ್ಯವಹಾರ ನಡೆಸುತಿದ್ದಾರೆ. ಇಂಥವರ ಕೈ ಕೆಳಗೆ ಕೆಲಸಮಾಡುವ ಅನೇಕರನ್ನು ತಿಂಗಳಿನಿಂದೀಚೆಗೆ ಬಂಧಿಸಿ, ಶಿಸ್ತುಕ್ರಮ ಜರುಗಿಸಿರುವ ಪೊಲೀಸರು ಅವರಿಂದ ನಗದು ವಶಪಡಿಸಿಕೊಂಡಿದ್ದಾರೆ.
ಅಕ್ರಮ ಮದ್ಯದ ಅನೇಕ ಪ್ರಕರಣಗಳೂ ಶಿರಸಿ-ಸಿದ್ಧಾಪುರಗಳಲ್ಲಿ ಪತ್ತೆಯಾಗಿವೆ. ಡಿಸೆಂಬರ್, ಜನೇವರಿ ತಿಂಗಳಲ್ಲಿ ಶಿರಸಿ ಉಪವಿಭಾಗದಲ್ಲಿ ಅಕ್ರಮಮದ್ಯ, ಓ.ಸಿ., ಇಸ್ಪೀಟ್ ಗಳ ನೂರಾರು ಪ್ರಕರಣಗಳಲ್ಲಿ ಸಿದ್ಧಾಪುರದ್ದೇ ಸಿಂಹಪಾಲಾಗಿರುವುದು ವಿಶೇಶ.
ಇಲ್ಲಿಯ ಶಾಸಕರು, ಸಂಸದರ ಆಪ್ತ ಮುಖಂಡರು, ಉದ್ಯಮಿಗಳೇ ಇಂಥ ಕಾನೂನುಬಾಹೀರ ಚಟುವಟಿಕೆಗಳಲ್ಲಿರುವ ಬಗ್ಗೆ ಆರೋಪ ವ್ಯಕ್ತವಾಗಿತ್ತು. ಸ್ಥಳಿಯರ ಆಕ್ಷೇಪ, ಪಕ್ಷಗಳು, ಮುಖಂಡರ ವಿರೋಧದಿಂದ ಚುರುಕಾದ ಪೊಲೀಸರು ಶಿರಸಿ ಉಪವಿಭಾಗದಲ್ಲಿ ನೂರಾರು ಪ್ರಕರಣಗಳಲ್ಲಿ ಹಲವರನ್ನು ಬಂಧಿಸಿದ್ದಾರೆ.
ಬಂಧಿತ ಅನೇಕರು ಅಮಾಯಕರಾಗಿದ್ದರೂ ಅವರು ಉದ್ಯಮಿಗಳ ಮುಖವಾಡದ ಕೆಲವು ಅಕ್ರಮ ವ್ಯವಹಾರಿಗಳ ಕೈಕೆಳಗೆ ಕೆಲಸಮಾಡುವ ಜನರು ಎಂಬುದು ಸಾಬೀತಾಗಿದೆ. ಅಕ್ರಮವ್ಯಹಾರಗಳನ್ನು ಪೋಶಿಸಿ,ಉದ್ಯಮಿಗಳ ಮುಖವಾಡದಲ್ಲಿ ಮೆರೆಯುವ ಕೆಲವರನ್ನು ದಾಖಲೆಗಳೊಂದಿಗೆ ಬಂಧಿಸಿದರೆ ಸಿದ್ಧಾಪುರ, ಶಿರಸಿಕ್ಷೇತ್ರದ ಶಾಂತಿ-ಸುವ್ಯವಸ್ಥೆ, ಸ್ವಚ್ಛಂದ ಜನಜೀವನಕ್ಕೆ ಅನುಕೂಲವಾಗಲಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.ಉತ್ತರ ಕನ್ನಡದ ಪೊಲೀಸ್ ವರಿಷ್ಠ ಶಿವಪ್ರಸಾದ್‍ದೇವರಾಜ್ ಈ ಸವಾಲನ್ನು ಎದುರಿಸುವ ಬಗ್ಗೆ ಯಾವ ಅನುಮಾನಗಳೂ ಇಲ್ಲ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *