ಚುರುಕಾದ ಪೊಲೀಸರು: ಮಿಂಚಿನ ಕಾರ್ಯಾಚರಣೆಗೆ ಸಿಕ್ಕು ಕಂಗಾಲಾದ ದಂದೆಕೋರರು

ಸಿದ್ಧಾಪುರ ತಾಲೂಕು,ಶಿರಸಿಕ್ಷೇತ್ರ ಉತ್ತರಕನ್ನಡ ಜಿಲ್ಲೆಯಾದ್ಯಂತ ಚುರುಕಾದ ಪೊಲೀಸರು ಅಕ್ರಮ ವ್ಯವಹಾರಿಗಳಿಗೆ ಸಿಂಹಸ್ವಪ್ನರಾದರೆ, ಶಿರಸಿ ಉಪವಿಭಾಗದಲ್ಲಿ ಪೊಲೀಸರ ಕಾರ್ಯಾಚರಣೆಯಿಂದ ಅಕ್ರಮ ವ್ಯವಹಾರಿಗಳು ನಡುಗುವಂತಾಗಿದೆ.
ಜಿಲ್ಲೆಯಲ್ಲಿ ಗಾಂಜಾ-ಅಫೀಮು ಮಾರಾಟಗಾರರ ಜಾಲದ ಬಗ್ಗೆ ಮೇಲಿಂದ ಮೇಲೆ ಸುದ್ದಿಯಾಗುತ್ತಿರುವಂತೆ ಶಿರಸಿಯಲ್ಲಿ ಉಪಪೊಲೀಸ್ ವರಿಷ್ಠ ಗೋಪಾಲಕೃಷ್ಣ ನಾಯಕ ಅಕ್ರಮವ್ಯವಹಾರಿಗಳನ್ನು ಮಟ್ಟಹಾಕುವಕಾರ್ಯಾಚರಣೆ ಕೈಗೊಂಡಿದ್ದಾರೆ.
ಶಿರಸಿಯಲ್ಲಿರುವ ಗಾಂಜಾ-ಅಫೀಮು ಮಾರಾಟಗಾರರು,ಶಂಕಿತರ ಪರೇಡ್ ನಡೆಸಿರುವ ಅವರು ಶಿರಸಿ ಉಪವಿಭಾಗದಲ್ಲಿ ಈ ವ್ಯವಹಾರ ಮತ್ತೆ ತಲೆ ಎತ್ತದಂತೆ ಕಡಕ್ ಎಚ್ಚರಿಕೆ ನೀಡಿದ್ದಾರೆ.
ಶಿರಸಿ ಸಿದ್ಧಾಪುರದಲ್ಲಿ ಸಕಲ ವ್ಯವಹಾರ,ಉದ್ದಿಮೆಗಳ ಮುಖವಾಡದ ಕೆಲವು ಕುಖ್ಯಾತ ಓ.ಸಿ. ಬುಕ್ಕಿಗಳು, ಇಸ್ಪೀಟ್ ಆಡಿಸುವ ಉದ್ಯಮಿಗಳು ಅಮಾಯಕರು, ಅಸಹಾಯಕರನ್ನು ಬಳಸಿ ಕಾನೂನು ಬಾಹೀರ ವ್ಯವಹಾರ ನಡೆಸುತಿದ್ದಾರೆ. ಇಂಥವರ ಕೈ ಕೆಳಗೆ ಕೆಲಸಮಾಡುವ ಅನೇಕರನ್ನು ತಿಂಗಳಿನಿಂದೀಚೆಗೆ ಬಂಧಿಸಿ, ಶಿಸ್ತುಕ್ರಮ ಜರುಗಿಸಿರುವ ಪೊಲೀಸರು ಅವರಿಂದ ನಗದು ವಶಪಡಿಸಿಕೊಂಡಿದ್ದಾರೆ.
ಅಕ್ರಮ ಮದ್ಯದ ಅನೇಕ ಪ್ರಕರಣಗಳೂ ಶಿರಸಿ-ಸಿದ್ಧಾಪುರಗಳಲ್ಲಿ ಪತ್ತೆಯಾಗಿವೆ. ಡಿಸೆಂಬರ್, ಜನೇವರಿ ತಿಂಗಳಲ್ಲಿ ಶಿರಸಿ ಉಪವಿಭಾಗದಲ್ಲಿ ಅಕ್ರಮಮದ್ಯ, ಓ.ಸಿ., ಇಸ್ಪೀಟ್ ಗಳ ನೂರಾರು ಪ್ರಕರಣಗಳಲ್ಲಿ ಸಿದ್ಧಾಪುರದ್ದೇ ಸಿಂಹಪಾಲಾಗಿರುವುದು ವಿಶೇಶ.
ಇಲ್ಲಿಯ ಶಾಸಕರು, ಸಂಸದರ ಆಪ್ತ ಮುಖಂಡರು, ಉದ್ಯಮಿಗಳೇ ಇಂಥ ಕಾನೂನುಬಾಹೀರ ಚಟುವಟಿಕೆಗಳಲ್ಲಿರುವ ಬಗ್ಗೆ ಆರೋಪ ವ್ಯಕ್ತವಾಗಿತ್ತು. ಸ್ಥಳಿಯರ ಆಕ್ಷೇಪ, ಪಕ್ಷಗಳು, ಮುಖಂಡರ ವಿರೋಧದಿಂದ ಚುರುಕಾದ ಪೊಲೀಸರು ಶಿರಸಿ ಉಪವಿಭಾಗದಲ್ಲಿ ನೂರಾರು ಪ್ರಕರಣಗಳಲ್ಲಿ ಹಲವರನ್ನು ಬಂಧಿಸಿದ್ದಾರೆ.
ಬಂಧಿತ ಅನೇಕರು ಅಮಾಯಕರಾಗಿದ್ದರೂ ಅವರು ಉದ್ಯಮಿಗಳ ಮುಖವಾಡದ ಕೆಲವು ಅಕ್ರಮ ವ್ಯವಹಾರಿಗಳ ಕೈಕೆಳಗೆ ಕೆಲಸಮಾಡುವ ಜನರು ಎಂಬುದು ಸಾಬೀತಾಗಿದೆ. ಅಕ್ರಮವ್ಯಹಾರಗಳನ್ನು ಪೋಶಿಸಿ,ಉದ್ಯಮಿಗಳ ಮುಖವಾಡದಲ್ಲಿ ಮೆರೆಯುವ ಕೆಲವರನ್ನು ದಾಖಲೆಗಳೊಂದಿಗೆ ಬಂಧಿಸಿದರೆ ಸಿದ್ಧಾಪುರ, ಶಿರಸಿಕ್ಷೇತ್ರದ ಶಾಂತಿ-ಸುವ್ಯವಸ್ಥೆ, ಸ್ವಚ್ಛಂದ ಜನಜೀವನಕ್ಕೆ ಅನುಕೂಲವಾಗಲಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.ಉತ್ತರ ಕನ್ನಡದ ಪೊಲೀಸ್ ವರಿಷ್ಠ ಶಿವಪ್ರಸಾದ್‍ದೇವರಾಜ್ ಈ ಸವಾಲನ್ನು ಎದುರಿಸುವ ಬಗ್ಗೆ ಯಾವ ಅನುಮಾನಗಳೂ ಇಲ್ಲ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *