ಬೇಡ್ಕಣಿ ಸೇ.ಸ.ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ನಿರ್ಧೇಶಕ ಮಂಡಳಿ!

ಸಿದ್ಧಾಪುರ ತಾಲೂಕಿನ ಬೇಡ್ಕಣಿ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ಧೇಶಕ ಸ್ಥಾನಗಳಿಗೆ ಎಲ್ಲಾ 12 ಸದಸ್ಯರೂ ಅವಿರೋಧವಾಗಿ ಆಯ್ಕೆಯಾಗಿ ದಾಖಲೆ ಮಾಡಿದ್ದಾರೆ.
ಸಹಕಾರಿ ನಿಯಮದಂತೆ ಈ ಸಂಘದ ನಿರ್ಧೇಶಕ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿವಸವಾದ ಶನಿವಾರ ಅನೇಕ ನಾಮಪತ್ರಗಳಿದ್ದವು. ಎರಡು ಕ್ಷೇತ್ರಗಳಿಗೆ ಒಬ್ಬೊಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ 2 ಸ್ಥಾನಗಳು ಮಾತ್ರ ಅವಿರೋಧವಾಗಿ ಆಯ್ಕೆಯಾಗಿದ್ದವು.
ನಿನ್ನೆ ಸಂಘದಲ್ಲಿ ಸೇರಿದ ಪ್ರಮುಖ ರಾಜಕೀಯ ನಾಯಕರು,ಆಕಾಂಕ್ಷಿಗಳು ಮಾತುಕತೆ ನಡೆಸಿ ಚೀಟಿ ಎತ್ತುವ ಮೂಲಕ ಉಳಿದ ಹತ್ತು ಸ್ಥಾನಗಳಿಗೆ ಚುನಾವಣೆಯಿಲ್ಲದೆ ನಿರ್ಧೇಶಕರನ್ನು ಆಯ್ಕೆಮಾಡಿದರು.
ಸ್ಥಳಿಯ ಮುಖಂಡರಾದ ವಿ.ಎನ್. ನಾಯ್ಕ, ನಾಗರಾಜ್ ನಾಯ್ಕ, ಉಮೇಶ್ ನಾಯ್ಕ ಮತ್ತು ಎ.ಬಿ.ನಾಯ್ಕಕಡಕೇರಿ ಸೇರಿದ ಅನೇಕ ನಾನಾ ಪಕ್ಷಗಳ ಮುಖಂಡರು ಮಾತುಕತೆ ನಡೆಸಿ ಅವಿರೋಧ ಆಯ್ಕೆ ಮಾಡುವಲ್ಲಿ ಯಶಸ್ವಿಯಾದರು.
ಉಮೇಶ್ ನಾಯ್ಕ ವಿಶೇಶ- ಬೇಡ್ಕಣಿ ಗ್ರಾ.ಪಂ. ಉಪಾಧ್ಯಕ್ಷ ಉಮೇಶ್ ನಾಯ್ಕ ಅವಿರೋಧ ಆಯ್ಕೆಯಲ್ಲಿ ಪ್ರಮುಖ ಪಾತ್ರವಹಿಸಿ, ಆಯ್ಕೆಯಾದರೂ ನಿರ್ಧೇಶಕ ಸ್ಥಾನವನ್ನು ಬೇರೆಯವರಿಗೆ ಬಿಟ್ಟುಕೊಡುವ ಮೂಲಕ ಗಮನ ಸೆಳೆದಿದ್ದಾರೆ. ಪ್ರಮುಖರ ನಿರ್ಣಯದಂತೆ ಚೀಟಿ ಎತ್ತಿ ಆಯ್ಕೆಮಾಡುವ ಪ್ರಕ್ರಿಯೆಯಲ್ಲಿ ಉಮೇಶ್ ನಾಯ್ಕ ಆಯ್ಕೆ ಆದರು. ನಂತರ ಆ ಆಯ್ಕೆಯನ್ನು ತ್ಯಜಿಸುವ ಮೂಲಕ ಚೀಟಿ ಎತ್ತುವ ಮೂಲಕವೇ ಇನ್ನೊಬ್ಬರನ್ನೂ ಆಯ್ಕೆ ಮಾಡಲು ಸಹಕರಿಸಿದರು.ಉಮೇಶ್ ನಾಯ್ಕರ ಈ ನಡೆ ಕುತೂಹಲ ಕೆರಳಿಸುವ ಜೊತೆಗೆ ಮೆಚ್ಚುಗೆಗೂ ಪಾತ್ರವಾಯಿತು.

ಆಲಳ್ಳಿ ಅಂಗನವಾಡಿ ಬಳಿ ಬಂದ ಕಾಳಿಂಗಸರ್ಪ
ಸಿದ್ಧಾಪುರ ತಾಲೂಕಿನ ಇಟಗಿ ಆಲಳ್ಳಿಯ ಅಂಗನವಾಡಿ ಕಟ್ಟಡದ ಬಳಿ ಮುಸ್ಸಂಜೆವೇಳೆ ಬಂದಿದ್ದ 10 ಅಡಿ ಕಾಳಿಂಗ ಸರ್ಪವೊಂದನ್ನು ಹಿಡಿದು ಕಾಡಿಗೆ ಬಿಡಲಾಗಿದೆ. ಅರಣ್ಯ ಇಲಾಖೆಯ ಸಹಕಾರದೊಂದಿಗೆ ಮನೋಹರ್ ಶಿರಸಿ ಈ ಕಾಳಿಂಗವನ್ನು ಕತ್ತಲೆಕಾನಿಗೆ ಬಿಟ್ಟಿದ್ದಾರೆ. ಈ ಕಾಳಿಂಗ ಕೆರೆಹಾವೊಂದನ್ನು ನುಂಗುತಿದ್ದಾಗ ಸೆರೆಯಾಗಿತ್ತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *