ಬೇಡ್ಕಣಿ ಸೇ.ಸ.ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ನಿರ್ಧೇಶಕ ಮಂಡಳಿ!

ಸಿದ್ಧಾಪುರ ತಾಲೂಕಿನ ಬೇಡ್ಕಣಿ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ಧೇಶಕ ಸ್ಥಾನಗಳಿಗೆ ಎಲ್ಲಾ 12 ಸದಸ್ಯರೂ ಅವಿರೋಧವಾಗಿ ಆಯ್ಕೆಯಾಗಿ ದಾಖಲೆ ಮಾಡಿದ್ದಾರೆ.
ಸಹಕಾರಿ ನಿಯಮದಂತೆ ಈ ಸಂಘದ ನಿರ್ಧೇಶಕ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿವಸವಾದ ಶನಿವಾರ ಅನೇಕ ನಾಮಪತ್ರಗಳಿದ್ದವು. ಎರಡು ಕ್ಷೇತ್ರಗಳಿಗೆ ಒಬ್ಬೊಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ 2 ಸ್ಥಾನಗಳು ಮಾತ್ರ ಅವಿರೋಧವಾಗಿ ಆಯ್ಕೆಯಾಗಿದ್ದವು.
ನಿನ್ನೆ ಸಂಘದಲ್ಲಿ ಸೇರಿದ ಪ್ರಮುಖ ರಾಜಕೀಯ ನಾಯಕರು,ಆಕಾಂಕ್ಷಿಗಳು ಮಾತುಕತೆ ನಡೆಸಿ ಚೀಟಿ ಎತ್ತುವ ಮೂಲಕ ಉಳಿದ ಹತ್ತು ಸ್ಥಾನಗಳಿಗೆ ಚುನಾವಣೆಯಿಲ್ಲದೆ ನಿರ್ಧೇಶಕರನ್ನು ಆಯ್ಕೆಮಾಡಿದರು.
ಸ್ಥಳಿಯ ಮುಖಂಡರಾದ ವಿ.ಎನ್. ನಾಯ್ಕ, ನಾಗರಾಜ್ ನಾಯ್ಕ, ಉಮೇಶ್ ನಾಯ್ಕ ಮತ್ತು ಎ.ಬಿ.ನಾಯ್ಕಕಡಕೇರಿ ಸೇರಿದ ಅನೇಕ ನಾನಾ ಪಕ್ಷಗಳ ಮುಖಂಡರು ಮಾತುಕತೆ ನಡೆಸಿ ಅವಿರೋಧ ಆಯ್ಕೆ ಮಾಡುವಲ್ಲಿ ಯಶಸ್ವಿಯಾದರು.
ಉಮೇಶ್ ನಾಯ್ಕ ವಿಶೇಶ- ಬೇಡ್ಕಣಿ ಗ್ರಾ.ಪಂ. ಉಪಾಧ್ಯಕ್ಷ ಉಮೇಶ್ ನಾಯ್ಕ ಅವಿರೋಧ ಆಯ್ಕೆಯಲ್ಲಿ ಪ್ರಮುಖ ಪಾತ್ರವಹಿಸಿ, ಆಯ್ಕೆಯಾದರೂ ನಿರ್ಧೇಶಕ ಸ್ಥಾನವನ್ನು ಬೇರೆಯವರಿಗೆ ಬಿಟ್ಟುಕೊಡುವ ಮೂಲಕ ಗಮನ ಸೆಳೆದಿದ್ದಾರೆ. ಪ್ರಮುಖರ ನಿರ್ಣಯದಂತೆ ಚೀಟಿ ಎತ್ತಿ ಆಯ್ಕೆಮಾಡುವ ಪ್ರಕ್ರಿಯೆಯಲ್ಲಿ ಉಮೇಶ್ ನಾಯ್ಕ ಆಯ್ಕೆ ಆದರು. ನಂತರ ಆ ಆಯ್ಕೆಯನ್ನು ತ್ಯಜಿಸುವ ಮೂಲಕ ಚೀಟಿ ಎತ್ತುವ ಮೂಲಕವೇ ಇನ್ನೊಬ್ಬರನ್ನೂ ಆಯ್ಕೆ ಮಾಡಲು ಸಹಕರಿಸಿದರು.ಉಮೇಶ್ ನಾಯ್ಕರ ಈ ನಡೆ ಕುತೂಹಲ ಕೆರಳಿಸುವ ಜೊತೆಗೆ ಮೆಚ್ಚುಗೆಗೂ ಪಾತ್ರವಾಯಿತು.

ಆಲಳ್ಳಿ ಅಂಗನವಾಡಿ ಬಳಿ ಬಂದ ಕಾಳಿಂಗಸರ್ಪ
ಸಿದ್ಧಾಪುರ ತಾಲೂಕಿನ ಇಟಗಿ ಆಲಳ್ಳಿಯ ಅಂಗನವಾಡಿ ಕಟ್ಟಡದ ಬಳಿ ಮುಸ್ಸಂಜೆವೇಳೆ ಬಂದಿದ್ದ 10 ಅಡಿ ಕಾಳಿಂಗ ಸರ್ಪವೊಂದನ್ನು ಹಿಡಿದು ಕಾಡಿಗೆ ಬಿಡಲಾಗಿದೆ. ಅರಣ್ಯ ಇಲಾಖೆಯ ಸಹಕಾರದೊಂದಿಗೆ ಮನೋಹರ್ ಶಿರಸಿ ಈ ಕಾಳಿಂಗವನ್ನು ಕತ್ತಲೆಕಾನಿಗೆ ಬಿಟ್ಟಿದ್ದಾರೆ. ಈ ಕಾಳಿಂಗ ಕೆರೆಹಾವೊಂದನ್ನು ನುಂಗುತಿದ್ದಾಗ ಸೆರೆಯಾಗಿತ್ತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *