ಬಿಳಗಿ ಸೇ.ಸ.ಸಂಘಕ್ಕೆ ಶಾಸ್ತ್ರೀತಂಡದ ಆಡಳಿತ

ಸಿದ್ಧಾಪುರ ತಾಲೂಕಿನ ಬಿಳಗಿ ಸೇವಾ ಸಹಕಾರಿ ಸಂಘದ ನಿರ್ಧೇಶಕ ಮಂಡಳಿಗೆ ನಡೆದ ಚುನಾವಣೆಯಲ್ಲಿ 2020 ರಿಂದ 2025 ರ ಅವಧಿಗೆ ಭಾರಿ ಬಹುಮತದಿಂದ ಸುಲೋಚನಾ ಶಾಸ್ತ್ರೀ ಬಿಳಗಿ ನೇತೃತ್ವದ ಎಲ್ಲಾ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ಸುಲೋಚನಾ ಶಾಸ್ರ್ತೀ ನಾಲ್ಕನೇ ಬಾರಿ ಆಯ್ಕೆಯಾಗಿದ್ದು ಅವರ ನೇತೃತ್ವದಲ್ಲೇ ಹೆಚ್ಚು ನಿರ್ಧೇಶಕರು ಆಯ್ಕೆ ಆಗಿರುವುದರಿಂದ ಮತ್ತೆ ಅವರೇ ಅಧ್ಯಕ್ಷರಾಗುವ ಸಾಧ್ಯತೆ ನಿಚ್ಚಳವಾಗಿದೆ.
ಆಯ್ಕೆ ಆದ ಸದಸ್ಯರ ವಿವರ ಈ ಕೆಳಗಿನಂತಿದೆ.
ಸಾಲಗಾರ ಸಾಮಾನ್ಯ ಕ್ಷೇತ್ರಗಳಿಂದ

  1. ಸುಲೋಚನಾ ಪಿ ಶಾಸ್ತ್ರೀ, ಬಿಳಗಿ
  2. ಈಶ್ವರ ಕನ್ನಾ ಗೌಡ, ಕಿಲವಳ್ಳಿ
  3. ತಿಮ್ಮಾ ಮಲ್ಲಾ ಗೌಡ, ಕಟ್ಟೆಕೈ
  4. ರಾಜು ಕರಿಯಾ ನಾಯ್ಕ, ಕಬ್ಗಾರ್
  5. ಸಿದ್ದೇಶ್ವರ್ ಬಂಗರಪ್ಪ ನಾಯ್ಕ, ಕಳೂರ್
    ಸಾಲಗಾರ ಅ ವರ್ಗದಿಂದ
  6. ಗಣಪತಿ ನಾರಾಯಣ ಮಡಿವಾಳ, ಬಿಳಗಿ
  7. ಮಂಜುನಾಥ ಕನ್ನಾ ನಾಯ್ಕ, ಹೊಸಮಂಜಿ
    ಸಾಲಗಾರ ಮಹಿಳೆ ಕ್ಷೇತ್ರದಿಂದ
  8. ವಿಜಯಲಕ್ಷ್ಮೀ ಶಾಂತಾರಾಮ್ ಭಟ್, ಬಿಳಗಿ
  9. ಸುಲೋಚನಾ ದಾಮೋದರ ಗೌಡ, ಕುರವಂತೆ
    ಗೋವಿಂದ ರಾಠೋಡ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಮೋಸ-ವಂಚನೆಯ ಆರೋಪಿ ಸೆರೆ
    ಸರ್ಕಾರೇತರ ಸಂಸ್ಥೆಯೊಂದಕ್ಕೆ ಮೋಸಮಾಡಿ 8 ಲಕ್ಷ ವಂಚಿಸಿದ್ದ ಅವರಗುಪ್ಪಾದ ಸಂತೋಷ ಎನ್ನುವ ವ್ಯಕ್ತಿಯೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಿರುವ ಸಿದ್ಧಾಪುರ ಪೊಲೀಸರು ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಿರಸಿಯ ಸರ್ಕಾರೇತರ ಸಂಸ್ಥೆಗೆ ವಂಚಿಸಿದ್ದ ಈತ ಕಳೆದ ಕೆಲವು ವರ್ಷಗಳಿಂದಲೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಮಿಶ್ರ ಕೃಷಿಯಲ್ಲಿ ಲಾಭ ಪಡೆಯುತ್ತಿರುವ ಸುನಿಲ್‍ಕುಮಾರ
ಆಧುನಿಕ ಅನುಕೂಲ, ತಂತ್ರಜ್ಞಾನಕ್ಕಾಗಿ ಮಹಾನಗರಕ್ಕೆ ಹೋಗಬೇಕು, ಕೃಷಿಗೆ ಗ್ರಾಮ ಸೇರಬೇಕು ಎನ್ನುವ ಸಾಮಾನ್ಯ ಗ್ರಹಿಕೆಯೊಂದಿದೆ. ಆದರೆ ಕಾಲ ಈ ಗೃಹಿಕೆ,ಗಾದೆ,ಪರಿಸ್ಥಿತಿಗಳನ್ನು ಬದಲಿಸುತ್ತಿದೆ. ನಗರದಲ್ಲಿ, ನಗರದ ಮನೆಯ ಟಾರಸಿಮೇಲೆ ಕೃಷಿ ಮಾಡಿ ಲಾಭ ಕಂಡವರಿದ್ದಾರೆ. ಗ್ರಾಮೀಣ ಪರಿಸರದಲ್ಲಿದ್ದೂ ಎಲ್ಲಾ ಆಧುನಿಕ ಅನುಕೂಲಗಳೊಂದಿಗೆ ಸುಖವಾಗಿದ್ದವರಿದ್ದಾರೆ. ಇಂಥ ಅಪವಾದಗಳಲ್ಲಿ ಸಂಪಕಂಡದ ಸುನಿಲ್ ನಾಯ್ಕ ಒಬ್ಬರು. ಆಟೋಮೊಬೈಲ್ ಡಿಪ್ಲೊಮಾ ಓದಿ ವಿಜ್ಞಾನ, ತಂತ್ರಜ್ಞಾನ ಎಂದು ನಗರ ಸೇರದೆ, ಹುಟ್ಟೂರಲ್ಲೇ ಕೃಷಿಯಲ್ಲಿ ಖುಷಿ ಕಂಡಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *