ಕೊನೆ ಇಳಿಸುವ ಗಡಗಡೆ ಅಡಿಕೆ ತೋಟದಲ್ಲಿ ಸದ್ದುಮಾಡದೆ ಸಹಕರಿಸುತ್ತಿರುವ ಸರಳ ಯಂತ್ರ

ಆಧುನಿಕ ಆವಿಷ್ಕಾರಗಳು,ಯಾಂತ್ರಿಕತೆ ಇಲ್ಲದೆ ವ್ಯವಸಾಯ ಸುಲಭವಲ್ಲ ಎನ್ನುವ ವೇದನೆ ನಡುವೆ ರೈತರೇ ತಮ್ಮ ಅಗತ್ಯದ ಸಲಕರಣೆಗಳನ್ನು ತಯಾರಿಸಿಕೊಳ್ಳುತಿದ್ದಾರೆ. ಅಡಿಕೆ ತೆಗೆಯುವ, ಸುಲಿಯುವ, ಒಣಗಿಸುವ ಉಪಕರಣಗಳೊಂದಿಗೆ ಅಡಿಕೆಗೊನೆ ಇಳಿಸುವ ಉಪಕರಣವೊಂದು ಈಗ ಮಲೆನಾಡಿನ ತೋಟಗಳಲ್ಲಿ ಸದ್ದಿಲ್ಲದೆ ಕೆಲಸ ಮಾಡುತ್ತಿದೆ.
ಹಿಂದೆ ಅಡಿಕೆ ತೆಗೆಯುವ ಕೊನೆಗೌಡ ಗೊನೆ ಕೊಯ್ದು ತನ್ನ ಬಾಲದಂಥ ಹಗ್ಗದ ಮೂಲಕ ನೇರ ಕೊನೆ ಇಳಿಸುತಿದ್ದ ಈಗ ಈ ಕಷ್ಟ ಕಡಿಮೆ ಮಾಡಲು ಮಲೆನಾಡಿನ ರೈತರು ಕೊನೆಗೌಡನ ಅಂಡಿನ ಕಟಕಮಣೆಗೆ ಗಡಗಡೆ ಅಳವಡಿಸಿ ಸುಲಭವಾಗಿ ಕೊನೆ ಇಳಿಸುವ ಸರಳ ತಂತ್ರಜ್ಞಾನಕ್ಕೆ ಮೊರೆಹೋಗಿದ್ದಾರೆ.
ವಾರದ ಓಡಾಟದಲ್ಲಿದ್ದ
ನಮಗೆ ಕಾನಗೋಡಿನ ಪ್ರಭಾಕರ ಡೋಂಗ್ರೆಯವರ ತೋಟದಲ್ಲಿ ಈ ಗಡಗಡಿಯ ಕೊನೆ ಇಳಿಸುವ ಸಾಧನ ಗಮನ ಸೆಳೆಯಿತು. ಅಡಿಕೆ ಕೊನೆ ಹಿಡಿಯುವ ಕಷ್ಟ ಕಡಿಮೆಮಾಡಲು ಮತ್ತು ತೆರೆ ಅಡಿಕೆ ಕಡಿಮೆ ಮಾಡಲು ಈ ಗಡಗಡೆಯ ಸಾಧನ ಬಳಸುತ್ತೇವೆ ಎಂದ ಅವರು.
ಈ ಯಂತ್ರವನ್ನು ಪರಿಚಯಿಸಿದವರು ಕುಶಾಲ್ ಹೆಗಡೆ ಎಂಬುದನ್ನು ಸೇರಿಸುವುದನ್ನು ಮರೆಯಲಿಲ್ಲ.
ಮಲೆನಾಡಿನಂತೆ ಬಯಲು ಸೀಮೆಯಲ್ಲೂ ಈಗ ಅಡಿಕೆ ಬೆಳೆಯುತ್ತಿದೆ. ಆದರೆ ಮಲೆನಾಡು-ಬಯಲುಸೀಮೆ ಸೇರಿ ಎಲ್ಲಾ ಕಡೆ ಅಡಿಕೆ ಸಂಸ್ಕರಿಸುವ ಕುಶಲಕರ್ಮಿಗಳ ಅಭಾವವಿದೆ. ಈ ಅಭಾವವನ್ನು ಎದುರಿಸುವ ಹಿನ್ನೆಲೆಯಲ್ಲಿ ತಯಾರಿಸಿಕೊಂಡ ಈ ಸುಲಭ ಸಾಧನದಿಂದ ಅಡಿಕೆ ಇಳಿಸಲು, ನೆಲದಲ್ಲಿ ಹಿಡಿಯಲು ಸುಲಭ ಎಂದು ಕೃಷಿ ಕಾರ್ಮಿಕರು ತಮ್ಮ ಅನುಭವ ಹಂಚಿಕೊಂಡರು.
ಅಡಿಕೆಮರ ಏರುವ ಗೊನೆ ತೆಗೆಯುವ, ತೆಗೆದ ಕೊನೆಯನ್ನು ನೆಲಕ್ಕಿಳಿಸುವ ಅನುಕೂಲಕ್ಕೆ ರೈತರು ಇಂಥ ಸರಳ, ಸುಲಭ ಸಾಧನಗಳ ಮೊರೆಹೋಗಿದ್ದಾರೆ. ಇಂಥ ಯಂತ್ರಗಳ ಬಳಕೆ ಕೃಷಿಕಾರ್ಮಿಕರ ಶ್ರಮ-ಕಷ್ಟವನ್ನು ಕಡಿಮೆ ಮಾಡಿರುವುದಂತೂ ಸತ್ಯ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *