ಕೊನೆ ಇಳಿಸುವ ಗಡಗಡೆ ಅಡಿಕೆ ತೋಟದಲ್ಲಿ ಸದ್ದುಮಾಡದೆ ಸಹಕರಿಸುತ್ತಿರುವ ಸರಳ ಯಂತ್ರ

ಆಧುನಿಕ ಆವಿಷ್ಕಾರಗಳು,ಯಾಂತ್ರಿಕತೆ ಇಲ್ಲದೆ ವ್ಯವಸಾಯ ಸುಲಭವಲ್ಲ ಎನ್ನುವ ವೇದನೆ ನಡುವೆ ರೈತರೇ ತಮ್ಮ ಅಗತ್ಯದ ಸಲಕರಣೆಗಳನ್ನು ತಯಾರಿಸಿಕೊಳ್ಳುತಿದ್ದಾರೆ. ಅಡಿಕೆ ತೆಗೆಯುವ, ಸುಲಿಯುವ, ಒಣಗಿಸುವ ಉಪಕರಣಗಳೊಂದಿಗೆ ಅಡಿಕೆಗೊನೆ ಇಳಿಸುವ ಉಪಕರಣವೊಂದು ಈಗ ಮಲೆನಾಡಿನ ತೋಟಗಳಲ್ಲಿ ಸದ್ದಿಲ್ಲದೆ ಕೆಲಸ ಮಾಡುತ್ತಿದೆ.
ಹಿಂದೆ ಅಡಿಕೆ ತೆಗೆಯುವ ಕೊನೆಗೌಡ ಗೊನೆ ಕೊಯ್ದು ತನ್ನ ಬಾಲದಂಥ ಹಗ್ಗದ ಮೂಲಕ ನೇರ ಕೊನೆ ಇಳಿಸುತಿದ್ದ ಈಗ ಈ ಕಷ್ಟ ಕಡಿಮೆ ಮಾಡಲು ಮಲೆನಾಡಿನ ರೈತರು ಕೊನೆಗೌಡನ ಅಂಡಿನ ಕಟಕಮಣೆಗೆ ಗಡಗಡೆ ಅಳವಡಿಸಿ ಸುಲಭವಾಗಿ ಕೊನೆ ಇಳಿಸುವ ಸರಳ ತಂತ್ರಜ್ಞಾನಕ್ಕೆ ಮೊರೆಹೋಗಿದ್ದಾರೆ.
ವಾರದ ಓಡಾಟದಲ್ಲಿದ್ದ
ನಮಗೆ ಕಾನಗೋಡಿನ ಪ್ರಭಾಕರ ಡೋಂಗ್ರೆಯವರ ತೋಟದಲ್ಲಿ ಈ ಗಡಗಡಿಯ ಕೊನೆ ಇಳಿಸುವ ಸಾಧನ ಗಮನ ಸೆಳೆಯಿತು. ಅಡಿಕೆ ಕೊನೆ ಹಿಡಿಯುವ ಕಷ್ಟ ಕಡಿಮೆಮಾಡಲು ಮತ್ತು ತೆರೆ ಅಡಿಕೆ ಕಡಿಮೆ ಮಾಡಲು ಈ ಗಡಗಡೆಯ ಸಾಧನ ಬಳಸುತ್ತೇವೆ ಎಂದ ಅವರು.
ಈ ಯಂತ್ರವನ್ನು ಪರಿಚಯಿಸಿದವರು ಕುಶಾಲ್ ಹೆಗಡೆ ಎಂಬುದನ್ನು ಸೇರಿಸುವುದನ್ನು ಮರೆಯಲಿಲ್ಲ.
ಮಲೆನಾಡಿನಂತೆ ಬಯಲು ಸೀಮೆಯಲ್ಲೂ ಈಗ ಅಡಿಕೆ ಬೆಳೆಯುತ್ತಿದೆ. ಆದರೆ ಮಲೆನಾಡು-ಬಯಲುಸೀಮೆ ಸೇರಿ ಎಲ್ಲಾ ಕಡೆ ಅಡಿಕೆ ಸಂಸ್ಕರಿಸುವ ಕುಶಲಕರ್ಮಿಗಳ ಅಭಾವವಿದೆ. ಈ ಅಭಾವವನ್ನು ಎದುರಿಸುವ ಹಿನ್ನೆಲೆಯಲ್ಲಿ ತಯಾರಿಸಿಕೊಂಡ ಈ ಸುಲಭ ಸಾಧನದಿಂದ ಅಡಿಕೆ ಇಳಿಸಲು, ನೆಲದಲ್ಲಿ ಹಿಡಿಯಲು ಸುಲಭ ಎಂದು ಕೃಷಿ ಕಾರ್ಮಿಕರು ತಮ್ಮ ಅನುಭವ ಹಂಚಿಕೊಂಡರು.
ಅಡಿಕೆಮರ ಏರುವ ಗೊನೆ ತೆಗೆಯುವ, ತೆಗೆದ ಕೊನೆಯನ್ನು ನೆಲಕ್ಕಿಳಿಸುವ ಅನುಕೂಲಕ್ಕೆ ರೈತರು ಇಂಥ ಸರಳ, ಸುಲಭ ಸಾಧನಗಳ ಮೊರೆಹೋಗಿದ್ದಾರೆ. ಇಂಥ ಯಂತ್ರಗಳ ಬಳಕೆ ಕೃಷಿಕಾರ್ಮಿಕರ ಶ್ರಮ-ಕಷ್ಟವನ್ನು ಕಡಿಮೆ ಮಾಡಿರುವುದಂತೂ ಸತ್ಯ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *