ಧರೆಗುರುಳಿದ ನೆಹರೂನೆನಪಿನ ಕ್ರೀಡಾಂಗಣದನಾಮಫಲಕ, ಸಾರ್ವಜನಿಕರ ವಿರೋಧ

ಪಕ್ಷ, ವ್ಯವಸ್ಥೆ ಬೇರೆ ನಾವೆಲ್ಲಾ ಚಿಕ್ಕವರಾಗಿದ್ದಾಗಿನಿಂದ ನೋಡುತಿದ್ದ ಈ ನಾಮಫಲಕ ನೆಲಕ್ಕುರುಳಿದ ಬಗ್ಗೆ ನಮಗೆ ವಿಶಾದವಿದೆ. ರಾಜಕೀಯ ಪಕ್ಷ, ವ್ಯಕ್ತಿಗಳು ಬಂದು ಹೋಗುತ್ತಾರೆ. ಆದರೆ ಇಂಥ ಐತಿಹಾಸಿಕ ಮಹತ್ವದ ಪಳಯುಳಿಕೆಗಳನ್ನು ಸಂರಕ್ಷಿಸಿ, ಸುಸ್ಥಿತಿಯಲ್ಲಿಡುವ ಸ್ಥಳಿಯ ಆಡಳಿತದ ಜವಾಬ್ಧಾರಿ ಇಂಥ ಸಮಯದಲ್ಲಿ ಪರಿಶೀಲನಾರ್ಹ.ಸ್ಥಳಿಯ ಸದಸ್ಯರು,ಆಡಳಿತಕ್ಕೆ ಉತ್ತರದಾಯಿತ್ವಇರದಿದ್ದರೆ ಐತಿಹಾಸಿಕ ಅಪಚಾರ ಮಾಡಿದಂತಾಗುತ್ತದೆ.
-ಪ್ರಕಾಶ ಹೆಗಡೆ, ಅಡಿಕೆ ವರ್ತಕರ ಸಂಘದ ಅಧ್ಯಕ್ಷ
ಸಿದ್ಧಾಪುರ ತಾಲೂಕಿನ ಐತಿಹಾಸಿಕ ನೆಹರೂ ಕ್ರೀಡಾಂಗಣದ ನಾಮಫಲಕ ಉರುಳಿಬಿದ್ದಿದ್ದು ಯಾರೂ ಕೇಳದ ಸ್ಥಿತಿಯಲ್ಲಿ ಜೀರ್ಣವಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ.
ಪಟ್ಟಣ ಪಂಚಾಯತ್ ನಿರ್ವಹಣೆಯ ನೆಹರೂ ಕ್ರೀಡಾಂಗಣ ನಗರದ ಏಕೈಕ ಆಟದ ಮೈದಾನವಾಗಿದ್ದು ಅದರ ಅಭಿವೃದ್ಧಿ ಆಗಿಲ್ಲ. ನೆಹರೂ ಈ ಮೈದಾನದಲ್ಲಿ ಸಾರ್ವಜನಿಕ ಭಾಷಣ ಮಾಡಿದ ಹಿನ್ನೆಲೆಯಲ್ಲಿ ನೆಹರೂ ಕ್ರೀಡಾಂಗಣ ಎಂದು ಪ್ರಸಿದ್ಧವಾದ ಈ ಆಟದ ಬಯಲು ನಿರ್ವಹಣೆ ಇಲ್ಲದೆ ಬಿಕೋ ಎನ್ನುತ್ತಿದೆ. ಇಲ್ಲಿಯ ನೆಹರೂ ಭೇಟಿಯ ಸವಿನೆನಪಿನ ನಾಮಫಲಕ ಅನೇಕ ಹಿರಿಯರು, ಹೋರಾಟಗಾರರು,ಕಾಂಗ್ರೆಸ್ಸಿಗರ ಭಾವನಾತ್ಮಕ ಫಲಕವಾಗಿತ್ತು. ಶಾಶ್ವತವಾಗಿರುವ ಕಲ್ಲಿನ ನಾಮಫಲಕ ಧರೆಗುರುಳುವ ಹಿಂದೆ ಸ್ಥಳಿಯ ಕಾಂಗ್ರೆಸ್ ಮತ್ತು ನೆಹರೂ ವಿರೋಧಿಗಳ ಕೈವಾಡವಿದೆಯಾ ಎನ್ನುವ ಸಂಶಯವೂ ವ್ಯಕ್ತವಾಗಿದೆ.ಇದಕ್ಕೆ ಪೂರಕವಾಗಿ ಸ್ಥಳಿಯ ಪ.ಪಂ. ಆಡಳಿತ ನೆಹರೂ ವಿರೋಧಿ ಬಿ.ಜೆ.ಪಿ.ಸದಸ್ಯರ ಬಹುಮತದಲ್ಲಿದೆ. ರಾಜಕೀಯ, ರಾಜಕೀಯ ಲಾಭದ ವ್ಯಕ್ತಿ-ಪಕ್ಷ ದೂಷಣೆ ಪ್ಯಾಶನ್ ಆಗಿರುವ ಅಧಿಕಾರಸ್ಥರ ಈ ಐತಿಹಾಸಿಕ ಉಪೇಕ್ಷೆ,ನಿರ್ಲಕ್ಷದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುವ ಸಾರ್ವಜನಿಕರು ಈ ಫಲಕದ ಮರುಸ್ಥಾಪನೆ,ಸಂರಕ್ಷಣೆಗೆ ಆಗ್ರಹಿಸಿದ್ದಾರೆ.

ನಾಳೆ ಕೆರೆಕೋಣದಲ್ಲಿ ಸಿನೆಮಾ ಹೊಸತಲೆಮಾರು
ಸಿದ್ಧಾಪುರ,ಫೆ.07- ಹೊನ್ನಾವರದ ಕೆರೆಕೋಣನಲ್ಲಿ ಪ್ರತಿವರ್ಷ ನಡೆಯುವ ಸಹಯಾನ ಸಾಹಿತ್ಯೋತ್ಸವ ನಾಳೆ ರವಿವಾರ ನಡೆಯಲಿದೆ.ಪ್ರತಿವರ್ಷ ಗಣ್ಯರು ಆಗಮಿಸಿ, ವಿಚಾರ ವಿನಿಮಯ ನಡೆಸುವ ಕೆರೆಕೋಣದ ಸಾಹಿತ್ಯೋತ್ಸವ ಕಳೆದ 9 ವರ್ಷಗಳನ್ನು ಪೂರೈಸಿ ಹತ್ತನೇ ವರ್ಷಕ್ಕೆ ಕಾಲಿಟ್ಟಿದೆ. ದಿ. ಆರ್.ವಿ.ಭಂಡಾರಿಯವರ ನೆನಪಿನಲ್ಲಿ ಅವರ ಹಿತೈಶಿಗಳು ಕಟ್ಟಿಕೊಂಡ ಸಹಯಾನ ಒಂದುದಶಕದಿಂದೀಚೆಗೆ ಉಪಯುಕ್ತ ಚಟುವಟಿಕೆಗಳು, ಸಾಹಿತ್ಯಕ,ಸಾಂಸ್ಕøತಿಕ ಚಟುವಟಿಕೆಗಳೊಂದಿಗೆ ಹೆಸರುಮಾಡಿದೆ. ಈ ವರ್ಷ ಸಿನೆಮಾಹೊಸತಲೆಮಾರು ಶೀರ್ಷಿಕೆಯಡಿ ನಡೆಯಲಿರುವ ಒಂದು ದಿನದ ಸಾಹಿತ್ಯೋತ್ಸವದಲ್ಲಿ ನಾಡಿನ ಗಣ್ಯ ಸಾಹಿತಿಗಳು,ಸಿನೆಮಾ ನಿರ್ಧೇಶಕರು ಪಾಲ್ಗೊಳ್ಳಲಿದ್ದಾರೆ. ಈ ಸಮಾರಂಭಕ್ಕೆ ಸರ್ವರನ್ನೂ ಸಂಘಟಕರು ಆಮಂತ್ರಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *