ಬಿ.ಜೆ.ಪಿ. ಕಾರ್ಯಕರ್ತರ ಸಿಟ್ಟಿಗೆ ಗುರಿಯಾದ ಸ್ಪೀಕರ್ ಕಾಗೇರಿ

ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪಕ್ಷದ ಪ್ರಮುಖರಿಂದಲೇ ಬಹಿರಂಗ ತರಾಟೆಗೆ ಗುರಿಯಾದ ಪ್ರಕರಣ ಇಂದು ಸಿದ್ಧಾಪುರದಲ್ಲಿ ನಡೆದಿದೆ.ಕಾರ್ಯಕರ್ತರ ಅವಗಣನೆ, ಅಭಿವೃದ್ಧಿಕಾರ್ಯಗಳ ನಿರ್ಲಕ್ಷದ ಹಿನ್ನೆಲೆಯಲ್ಲಿ ಬಿ.ಜೆ.ಪಿ. ಸದಸ್ಯರು, ಜನಪ್ರತಿನಿಧಿಗಳೇ ಬಹಿರಂಗವಾಗಿ ವಿಧಾನಸಭಾ ಅಧ್ಯಕ್ಷರನ್ನುತರಾಟೆಗೆ ತೆಗೆದುಕೊಂಡ ಬಗ್ಗೆ ಮಾಹಿತಿ ನೀಡಿದ್ದಾರೆ.
ಸಿದ್ಧಾಪುರದ ಸಾಯಿನಗರದ ರಸ್ತೆ ಕಾಮಗಾರಿ ಶಂಕುಸ್ಥಾಪನೆಗೆ ಬಂದಿದ್ದ ವಿಧಾನಸಭಾಧ್ಯಕ್ಷ ಕಾಗೇರಿ ತಮ್ಮ ನಿಗದಿತ ಕೆಲಸ ಮುಗಿಸುತಿದ್ದಂತೇ ಸ್ಥಳಿಯ ಪಟ್ಟಣ ಪಂಚಾಯತ್ ಸದಸ್ಯರು, ಬಿ.ಜೆ.ಪಿ.ಪದಾಧಿಕಾರಿಗಳೂ ಆಗಿರುವ ಕೆಲವರು ಶಾಸಕರಿಗೆ ನಮ್ಮ ಬೇಡಿಕೆ,ಅಹವಾಲು ಕೇಳಲು ಸಮಯವಿಲ್ಲ,ಜನ ಅಭಿವೃದ್ಧಿಯೂ ಇಲ್ಲ, ನಮ್ಮ ಪರಿಗಣನೆಯೂ ಇಲ್ಲ ಎಂದು ನಮ್ಮನ್ನು ಪ್ರಶ್ನಿಸುತ್ತಾರೆ. ಹಿಂದೆ ನಮ್ಮ ಸರ್ಕಾರ ಬರಲಿ ಕೆಲಸ ಮಾಡೋಣ ಎನ್ನುತಿದ್ದವರು ಈಗ ಕಾರ್ಯಕರ್ತರಿಗೆ ಮಾತನಾಡಲೂ ಸಮಯ ನಿಡುತ್ತಿಲ್ಲ. ಯಾಕೆ ಹೀಗೆ? ಕಾರ್ಯಕರ್ತರು, ಪಕ್ಷದ ಪದಾಧಿಕಾರಿಗಳ ಅಹವಾಲು ಕೇಳಲು ಸಮಯವಿದೆಯೆ? ಎಂದೆಲ್ಲಾ ಪ್ರಶ್ನಿಸತೊಡಗಿದಂತೆ ಮಾತನಾಡೋಣ, ಸಮಯಕೊಡುತ್ತೇನೆ ಎಂದು ಟಾಟಾ ಕೂಡಾ ಮಾಡದೆ ಸಭಾಧ್ಯಕ್ಷರು ಕಾರ್ ಹತ್ತಿ ನಡೆದಿರುವ ಬಗ್ಗೆ ಬಿ.ಜೆ.ಪಿ. ಕಾರ್ಯಕರ್ತರೇ ಮಾಹಿತಿ ನೀಡಿದ್ದಾರೆ.
ಇಂದಿನ ಸಾಯಿನಗರದ ಕಾರ್ಯಕ್ರಮಕ್ಕೆ ಯಾರನ್ನೂ ಆಹ್ವಾನಿಸದಿರುವುದು, ಗ್ರಾಮೀಣಭಾಗದ ನಿಗದಿತ ಕಾರ್ಯಕ್ರಮಕ್ಕೆ ಬಂದಿದ್ದ ಕಾಗೇರಿ ಸಾಯಿನಗರದ ಸಣ್ಣ ಕಾಮಗಾರಿಯ ಶಂಕುಸ್ಥಾಪನೆ ಮಾಡಿರುವುದು. ಸಿದ್ಧಾಪುರ ತಾಲೂಕು ಮತ್ತು ಶಿರಸಿ ಕ್ಷೇತ್ರದಲ್ಲಿ ಸಭಾಧ್ಯಕ್ಷ ಕಾಗೇರಿ ಬಿ.ಜೆ.ಪಿ.ಜನಪ್ರತಿನಿಧಿಗಳನ್ನು ನಿರ್ಲಕ್ಷಿಸುತ್ತಿರುವುದು, ಸರ್ಕಾರದ ಕೆಲವು ಕೆಲಸಗಳನ್ನು ಜಾತಿ,ನಾಯಕರ ಮೇಲಿನ ಅಸಮಾಧಾನಕ್ಕೆ ತಡೆಹಿಡಿದಿರುವುದು ಸೇರಿದಂತೆ ಚುನಾವಣೆ,ಪಕ್ಷದ ಕೆಲಸಗಳನ್ನು ಮಾಡಿರುವ ಪ್ರಾಮಾಣಿಕರನ್ನು ಕಡೆಗಣಿಸಿ ಗುಟ್ಟಾಗಿ ಕೆಲವರಿಗೆ ಮಾತ್ರ ಸಕಲ ಅನುಕೂಲ ಮಾಡುತ್ತಿರುವ ಕಾಗೇರಿಯವರ ಇತ್ತೀಚಿನ ನಡವಳಿಕೆಯಿಂದ ಬೇಸತ್ತ ಪಕ್ಷದ ಕಾರ್ಯಕರ್ತರೇ ಈ ಘಟನೆಗೆ ಮುಂದಾಗಿ, ಮುಜುಗರ ಉಂಟುಮಾಡಿದ್ದು ಸತ್ಯ ಎಂದು ಸ್ಥಳಿಯರು ತಿಳಿಸಿದ್ದಾರೆ.

ಕಾರವಾರದಿಂದ ಬಂದಿದ್ದ ಗುರುಭಜಕರು- ರಥೋತ್ಸವ,ಜಾತ್ರೆ,ಉತ್ಸವ
ಗ್ರೀನ್‍ಲ್ಯಾಂಡ್‍ಶುಭಾರಂಭ-
ಸಿದ್ಧಾಪುರ ತಾಲೂಕಿನ ಭುವನಗಿರಿಯ ಮೂಕಾಂಬಿಕಾ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ರಥೋತ್ಸವಗಳು ನಡೆದವು.
ನಗರದ ಬಸವೇಶ್ವರ ದೇವರ ಜಾತ್ರೆ ಇಂದು ನಾಳೆ ನಡೆಯಲಿದೆ. ಸೋಮವಾರ ಪುಷ್ಫರಥೋತ್ಸವ ನಡೆದರೆ,ಮಂಗಳವಾರ ಮಹಾರಥೋತ್ಸವ ನಡೆಯಲಿದೆ.ಸಿದ್ಧಾಪುರ ಕೊಂಡ್ಲಿ ಹಾಳದಕಟ್ಟಾದಲ್ಲಿ ನಡೆದ ಗುರುಪ್ರತಿಪದಾ ಉತ್ಸವ ಸೋಮುವಾರ ನಡೆಯಿತು.ಕಾರವಾರ ಬಾಡದ ಗುರುಮಠದ ಶಿಷ್ಯ ವರ್ಗಸೇರಿದಂತೆ ಅನೇಕರು ಕಾರವಾರದಿಂದ ಸಿದ್ಧಾಪುರಕ್ಕೆ ಆಗಮಿಸಿ ಈ ಉತ್ಸವದಲ್ಲಿ ಪಾಲ್ಗೊಂಡರು.
ಭಜನೆ,ಅನ್ನಸಂತರ್ಪಣೆ ವೇಳೆ ಸ್ಥಳಿಯರಿಗಿಂತ ಕಾರವಾರದಿಂದ ಬಂದ ಭಜಕರು ಪಾಲ್ಗೊಂಡು ಗುರುಪ್ರತಿಪದಾ ಉತ್ಸವ ಸಂಪನ್ನಮಾಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *