

ಸಿದ್ಧಾಪುರ ತಾಲೂಕಿನ ಭುವನಗಿರಿಯ ಮೂಕಾಂಬಿಕಾ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ರಥೋತ್ಸವಗಳು ನಡೆದವು.
ನಗರದ ಬಸವೇಶ್ವರ ದೇವರ ಜಾತ್ರೆ ಇಂದು ನಾಳೆ ನಡೆಯಲಿದೆ. ಸೋಮವಾರ ಪುಷ್ಫರಥೋತ್ಸವ ನಡೆದರೆ,ಮಂಗಳವಾರ ಮಹಾರಥೋತ್ಸವ ನಡೆಯಲಿದೆ.
ಸಿದ್ಧಾಪುರ ಕೊಂಡ್ಲಿ ಹಾಳದಕಟ್ಟಾದಲ್ಲಿ ನಡೆದ ಗುರುಪ್ರತಿಪದಾ ಉತ್ಸವ ಸೋಮುವಾರ ನಡೆಯಿತು.ಕಾರವಾರ ಬಾಡದ ಗುರುಮಠದ ಶಿಷ್ಯ ವರ್ಗಸೇರಿದಂತೆ ಅನೇಕರು ಕಾರವಾರದಿಂದ ಸಿದ್ಧಾಪುರಕ್ಕೆ ಆಗಮಿಸಿ ಈ ಉತ್ಸವದಲ್ಲಿ ಪಾಲ್ಗೊಂಡರು.
ಭಜನೆ,ಅನ್ನಸಂತರ್ಪಣೆ ವೇಳೆ ಸ್ಥಳಿಯರಿಗಿಂತ ಕಾರವಾರದಿಂದ ಬಂದ ಭಜಕರು ಪಾಲ್ಗೊಂಡು ಗುರುಪ್ರತಿಪದಾ ಉತ್ಸವ ಸಂಪನ್ನಮಾಡಿದರು.
ಗ್ರೀನ್ ಲ್ಯಾಂಡ್ ಆರಂಭೋತ್ಸವ-
ನಗರದ ಮಾಂಸಾಹಾರಿ ಹೋಟೆಲ್ ಗ್ರೀನ್ಲ್ಯಾಂಡ್ನ ಪ್ರಾರಂಭೋತ್ಸವ ಜೋಗರಸ್ತೆಯ ಕೆ.ಡಿ.ಸಿ.ಸಿ. ಬ್ಯಾಂಕಿನ ಪಕ್ಕದ ಕಟ್ಟಡದಲ್ಲಿ ನಡೆಯಿತು.ಗ್ರೀನ್ ಲ್ಯಾಂಡ್ ಮಾಲಿಕ ಅಣ್ಣಪ್ಪ ದಾಸನಗದ್ದೆಯವರ ಸ್ನೇಹಿತರು, ಹಿತೈಶಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹರಸಿದರು.





_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






