ಕಾರ್ಯಕರ್ತರು ವಿಧಾನಸಭಾ ಅಧ್ಯಕ್ಷರನ್ನು ಮಾತಿಗೆ ಕರೆಯುವುದೇಕೆ?

ಕಾಗೇರಿಯವರ ಹೊಂದಾಣಿಕೆ ರಾಜಕೀಯದಲ್ಲಿ ಬಡವಾದರೆ ಬಿ.ಜೆ.ಪಿ.ಕಾರ್ಯಕರ್ತರು?
ಸಿದ್ಧಾಪುರ ಸಾಯಿನಗರದ ವಿಧಾನಸಭಾಧ್ಯಕ್ಷರ ಮಾಮೂಲಿ ಅಡಿಗಲ್ಲು ಸಮಾರಂಭದ ನಂತರ ಸಾಯಿನಗರದ ಮನೆ ಒಂದರಲ್ಲಿ ಕಾಗೇರಿ ಮಾತನಾಡುತ್ತಾ ಕುಳಿತಿದ್ದಾಗ ಅವರೊಂದಿಗಿದ್ದ ಕಾರ್ಯಕರ್ತರು ಮನೆಯ ಹೊರಗಿದ್ದರು. ಶಾಸಕರು,ವಿಧಾನಸಭಾ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆಯವರೊಂದಿಗಿದ್ದ ಬಿ.ಜೆ.ಪಿ. ಕಾರ್ಯಕರ್ತರಿಗೆ ಪರೋಕ್ಷವಾಗಿ ಒಳಗೆ ಬರಬೇಡಿ ಎನ್ನುವ ರೀತಿಯಲ್ಲಿ ಮನೆ ಮಾಲಿಕರು ಸಾಯಿನಗರದವರಷ್ಟೇ ಒಳಗೆ ಬನ್ನಿ ಎಂದು ಕರೆದರು.


ಸಾರ್ವಜನಿಕ ಕಾರ್ಯಕ್ರಮಕ್ಕೆ ತೆರಳಿದ್ದ ಶಾಸಕರೊಂದಿಗಿನ ಕಾರ್ಯಕರ್ತರಿಗೆ ಹೀಗೆ ಅವಮಾನವಾಗುತಿದ್ದರೆ ಕಾಗೇರಿಯವರು ಅದನ್ನು ಗಮನಿಸಿರಲಿಲ್ಲ. ವಿಶೇಶವೆಂದರೆ ಮೊನ್ನೆ ಸಿದ್ಧಾಪುರದಲ್ಲಿ ನಡೆದ ಇನ್ನೂ 2-3 ಕಾರ್ಯಕ್ರಮಗಳಲ್ಲಿ ಕಾಗೇರಿಯವರೊಂದಿಗೆ ಚುನಾವಣೆಯಲ್ಲಿ ಕೆಲಸಮಾಡಿದ್ದ ಕಾರ್ಯಕರ್ತರಿಗೆ ಅವಮಾನವಾಗಿತ್ತು.
ಹೀಗೆ ಅವಮಾನಮಾಡುವುದು, ಮಾಡಿಸುವುದು ಕಾಗೇರಿಯವರ ಉದ್ಧೇಶವಾಗಿರಲಿಕ್ಕಿಲ್ಲ ಆದರೆ ವಿಧಾನಸಭಾ ಅಧ್ಯಕ್ಷರೆದುರೇ ಅವರನ್ನು ಆ ಹುದ್ದೆಗೇರಿಸಿದ ಕಾರ್ಯಕರ್ತರಿಗೆ ನೋವು, ಅವಮಾನವಾಗುತ್ತಿರುವುದನ್ನು ಗೃಹಿಸದಷ್ಟು ಕಾಗೇರಿ ಅಸೂಕ್ಷ್ಮರಾದರೆ ಎನ್ನುವ ಪ್ರಶ್ನೆಯೊಂದಿಗೆ ಹಲವು ಅನುಮಾನ, ಅಸಮಾಧಾನಗಳ ಹಿನ್ನೆಲೆಯಲ್ಲಿ ಸೋಮವಾರ ವಿಶ್ವೇಶ್ವರ ಹೆಗಡೆ ಯವರ ವಿರುದ್ಧ ಕಾರ್ಯಕರ್ತರ ಅಸಮಾಧಾನ ಕೆಲಸಮಾಡಿದೆ. ಬಿ.ಜೆ.ಪಿ.ಕಾರ್ಯಕರ್ತರೇ ಹೇಳುವಂತೆ ಅನುದಾನ ಹಂಚಿಕೆ, ಅಭಿವೃದ್ಧಿ ಕೆಲಸ, ಪರಿಗಣನೆಗಳಲ್ಲಿ ಶಾಸಕರಿಗೆ ಪಕ್ಷನಿಷ್ಠರು, ಕಾರ್ಯಕರ್ತರಿಗಿಂತ ಹೊರಗಿನವರು ಆಪ್ತರಾಗುತಿದ್ದಾರೆ.

ಇಂಥ ಅನ್ಯಪಕ್ಷಗಳ ನಾಯಕರೊಂದಿಗಿನ ಸಲುಗೆ ಸ್ವಪಕ್ಷದ ಕಾರ್ಯಕರ್ತರ ಅವಗಣನೆ ಕಾರಣ ಬಿ.ಜೆ.ಪಿ.ಕಾರ್ಯಕರ್ತರು ವಿಧಾನಸಭಾಧ್ಯಕ್ಷರಿಗೆ ಈಗಾಗಲೇ ಹಲವುಬಾರಿ ಮಾತುಕತೆಗೆ ಕರೆದಿದ್ದರಂತೆ. ಕಾರ್ಯಕ್ರಮದಲ್ಲಿ ಸ್ವಲಾಭದ ಮಾತನಾಡುವುದು,ನಂತರ ಹೊರಗಿನ ವಲಸೆ ಮುಖಂಡರು,ಅನ್ಯಪಕ್ಷಗಳ, ಹೊರಗಿನ ವ್ಯಕ್ತಿಗಳೊಂದಿಗೆ ಮಾತನಾಡುವ ವಿ.ಹೆಗಡೆ ಸ್ವಪಕ್ಷದ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುತ್ತಾರೆ ಎನ್ನುವ ಆರೋಪಗಳಿವೆ.ಇಂಥ ಅಸಹನೆ,ಅಸಮಾಧಾನ, ಅವಗಣನೆಗಳಿಂದ ಬೇಸತ್ತ ಬಿ.ಜೆ.ಪಿ. ಕಾರ್ಯಕರ್ತರುಬಹಿರಂಗವಾಗಿ ಮಾತುಕತೆಗೆ ಬರುವಂತೆ ಶಾಸಕರನ್ನು ಒತ್ತಾಯಿಸುವ ಹಿಂದೆ ಅನೇಕ ಕಾರಣಗಳು, ಅಸಮಾಧಾನಗಳಿವೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *