ಗೊಂದಲದಿಂದಾದ ಎರಡು ಸುದ್ದಿಗಳು ಹೀಗೂ ಉಂಟೆ?

ಸಿದ್ಧಾಪುರದ ಬುಧವಾರದ ವಾರದ ಸಂತೆಯ ದಿವಸ ನಗರದಲ್ಲಿ ಎರಡು ಸುದ್ದಿಗಳು ಗೊಂದಲಕ್ಕೆ ಕಾರಣವಾದವು. ಮೊದಲನೆ ಸುದ್ದಿಯೆಂದರೆ ಕಾವಂಚೂರು ಗ್ರಾ.ಪಂ. ನ ಕಲ್ಲೂರಿನಲ್ಲಿ ರಸ್ತೆಯ ನಿರ್ಮಾಣಕ್ಕೆ ಅಡ್ಡಿಯುಂಟುಮಾಡಿದ ಕೆಲವರು ಈ ವಿಚಾರದಲ್ಲಿ ವಸಂತನಾಯ್ಕ ಮತ್ತವರ ಆಪ್ತರ ಮೇಲೆ ಪೊಲೀಸ್ ದೂರು ನೀಡಿ ಠಾಣೆಯಲ್ಲಿ ಹೊಂದಾಣಿಕೆಯಿಂದ ಬಗೆಹರಿಸಿಕೊಂಡರು.
ಈ ವಿಚಾರ ಚರ್ಚೆ, ವಿವಾದವಾಗಿ ಪೊಲೀಸ್ ಠಾಣೆ ಎದುರು ಜನ ಜಮಾಯಿಸಿದ್ದರಿಂದ ಕೆಲಕಾಲ ಗೊಂದಲವಾದಂತೆ ಕಂಡುಬಂತು ಆದರೆ ಈ ಪ್ರಕರಣ ಸುಖಾಂತವಾಗಿದೆ ಎಂದು ಮಾಹಿತಿ ದೊರೆತಿದೆ.
ಇನ್ನೊಂದು ಪ್ರಕರಣ ಬಲು ರೋಚಕ ಪ್ರಕರಣ ಸಿದ್ಧಾಪುರದ ಬುಧವಾರದ ಸಂತೆ ದಿವಸ ಮೊಬೈಲ್ ಪರ್ಸ್ ಕದಿಯುವ ಕಳ್ಳರ ವ್ಯವಸ್ಥಿತ ತಂಡವೊಂದು ಕಾರ್ಯನಿರ್ವಹಿಸುತ್ತಿದೆ. ಈ ತಂಡ ವಾರಬಿಟ್ಟು ವಾರ ಅಥವಾ 2-3 ವಾರಗಳಿಗೊಮ್ಮೆ ಸಿದ್ಧಾಪುರಕ್ಕೆ ಬರುತ್ತಿದೆ. ಈ ತಂಡದ ಕೈಚಳಕದಿಂದ ಗ್ರಾಮೀಣ ಪ್ರದೇಶದ ಜನರು ಸೇರಿದಂತೆ ಅನೇಕರು ತಮ್ಮ ಪರ್ಸ್, ಮೊಬೈಲ್
ಕಳೆದುಕೊಂಡಿದ್ದಾರೆ.
ಇಂಥ ಕೆಲವರು ಪೊಲೀಸ್ ಠಾಣೆಗೆ ದೂರು ನೀಡಿದರೆ ಕೆಲವರು ಸುಮ್ಮನಾಗಿದ್ದಾರೆ. ಈ ಪ್ರಕರಣ ಬೇಧಿಸಲು ಪೊಲೀಸರು ಮುಫ್ತಿಯಲ್ಲಿ ಕಾರ್ಯನಿರ್ವಹಿಸುತಿದ್ದು ಈ ಬುಧವಾರದ ವರೆಗೆ ಕಳ್ಳರನ್ನು ಹಿಡಿಯಲು ಸಾಧ್ಯವಾಗಿಲ್ಲ. ಆದರೆ ಈ ವಿಚಾರ ಚರ್ಚೆಯಾಗಿ ಪೊಲೀಸ್ ಠಾಣೆ ಎದುರು ಜನರು ಜಮಾವಣೆಯಾದ್ದರಿಂದ ಮೊಬೈಲ್ ಕಳೆದುಕೊಂಡವರು ಮೊಬೈಲ್ ಕಳ್ಳರೇ ಸಿಕ್ಕಿದ್ದಾರೆಂದು ಬ್ರಮಿಸಿ ಠಾಣೆ ಕಡೆಗೆ ಬೈಕ್ ತಿರುಗಿಸಿ ಬೇಸರದಿಂದ ವಾಪಾಸಾದವರು ಇದ್ದಾರೆ. ಇಂದಿನ ಈ ಎರಡು ಘಟನೆಗಳು ಪರಸ್ಫರ ಜನರ ಗೊಂದಲಕ್ಕೆ ಕಾರಣವಾಗಿರುವ ಬಗ್ಗೆ ಬಲ್ಲ ಮೂಲಗಳು ಸಮಾಜಮುಖಿಗೆ ಮಾಹಿತಿ ನೀಡಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *