ಅಪೂರ್ಣ & ವಿಳಂಬ ಕಾಮಗಾರಿಗಳು ಸಾರ್ವಜನಿಕರ ದೂರು

ಸಿದ್ಧಾಪುರ ಪ.ಪಂ. ವ್ಯಾಪ್ತಿ ಮತ್ತು ತಾಲೂಕಿನ ಕೆಲವೆಡೆ ಅಪೂರ್ಣ ಮತ್ತು ವಿಳಂಬ ಕಾಮಗಾರಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರು ಕೇಳಿ ಬಂದಿದೆ. ಪಟ್ಟಣ ಪಂಚಾಯತ್ ಕೆಲವೆಡೆ ಹಳೆ ರಸ್ತೆ ಕಿತ್ತು ಸಾರ್ವಜನಿಕರು ಓಡಾಡುವ ರಸ್ತೆಗಳಲ್ಲಿ ಜಲ್ಲಿ ತುಂಬಿ ಡಾಂಬರು ಹಾಕದಿರದಿರುವುದರಿಂದ ಸಂಚಾರಕ್ಕೆ ತೊಂದರೆಯಾಗಿದೆ.
ನಗರ ಹಾಗೂ ಗ್ರಾಮೀಣ ಪ್ರದೇಶಗಳ ಕೆಲವೆಡೆ ಹೀಗೆ ಜಲ್ಲಿ ಹಾಕಿದ ಕಡೆ ಡಾಂಬರು ಹಾಕಿಲ್ಲ,ರಸ್ತೆ ಕಿತ್ತಕಡೆ ರಸ್ತೆ ಪೂರ್ಣ ಮಾಡಿಲ್ಲ ಇಂಥ ಅಪೂರ್ಣಕೆಲಸ, ಕಾಮಗಾರಿ ವಿಳಂಬ ಯಾಕೆ ಎಂದು ಅಧಿಕಾರಿಗಳನ್ನು ಕೇಳಿದರೆ ಕಚ್ಚಾ ಸಾಮಗ್ರಿ ಬಂದಿಲ್ಲ, ಡಾಂಬರು ಸಿಕ್ಕಿಲ್ಲ ಎನ್ನುತ್ತಾರೆ. ಕೊರತೆ,ತೊಂದರೆ,
ಪೂರೈಕೆ ಇಲ್ಲ ಎನ್ನುವ ಅಧಿಕಾರಿಗಳು ಗುತ್ತಿಗೆದಾರರು ಪೂರ್ವ ತಯಾರಿ ಮಾಡಿಕೊಳ್ಳದೆ ಸಾರ್ವಜನಿಕರಿಗೆ ತೊಂದರೆ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸುತಿದ್ದಾರೆ.
ಇಂಥ ವಿಳಂಬ, ಅಪೂರ್ಣ ಕಾಮಗಾರಿಗಳಿಂದಾಗಿ ದ್ವಿಚಕ್ರವಾಹನ ಚಾಲಕರು ಮೈ ಕೈ ಪೆಟ್ಟುಮಾಡಿಕೊಂಡಿದ್ದರೆ ಲಘುವಾಹನಗಳು ಈ ವಿಳಂಬದ ಕಾಮಗಾರಿಗಳಿಂದ ತೊಂದರೆ ಅನುಭವಿಸುತ್ತಿರುವ ಬಗ್ಗೆ ಸ್ಥಳಿಯರು ಆಕ್ಷೇಪಿಸಿದ್ದಾರೆ. ಇಂಥ ವಿಳಂಬ ಮತ್ತು ಅಪೂರ್ಣ ಕಾಮಗಾರಿಗಳನ್ನು ಪೂರೈಸಿ ಇವುಗಳಿಂದ ಸಾರ್ವಜನಿಕರಿಗಾಗುವ ತೊಂದರೆ ತಪ್ಪಿಸಬೇಕು ಎನ್ನುವ ಆಗ್ರಹ ವ್ಯಕ್ತವಾಗಿದೆ.

ಸ್ವಚ್ಛಭಾರತಕ್ಕೆ ಕೈ ಜೋಡಿಸಿದ ಭಟ್ಟರ ಖುಷಿಯ ಕೃಷಿ ಬದುಕು
ಕೆರೆ ಹೊಂಡದ ಜಿ.ಎಂ.ಭಟ್ ಕಾಯಿ ವ್ಯಾಪಾರ ಮಾಡುತ್ತಾ ನಗರದ ತರಕಾರಿ ಕಸವನ್ನು ರಸವನ್ನಾಗಿಸುತ್ತಾರೆ!
ಈ ಭಟ್ ಹಸು,ನಾಯಿ ಸಾಕುವುದರಲ್ಲಿ ಎತ್ತಿದ ಕೈ ಎಂದರೆ ಇವರ ಪರಿಚಯ sಸ್ಥಳಿಯರಿಗೆ ಸುಮಾರಾಗಿ ಆದಂತೆ ಆದರೆ, ಈ ಭಟ್ ರ ಆಸಕ್ತಿ, ಅಭಿರುಚಿಗಳಿವೆಯಲ್ಲಾ ಅವೆಲ್ಲಾ ಸಮಾಜಮುಖಿಯಾಗಿವೆ.
ಜಿ.ಎಂ.ಭಟ್ ಅವರ ಹವ್ಯಾಸ, ಉದ್ಯಮವಾಗಿ ಜಾನುವಾರುಗಳನ್ನು ಸಾಕುತ್ತಾರೆ. ಅವುಗಳಿಗೆ ಮೇವಾಗಿ ನಗರದ ತರಕಾರಿ ಕಸವನ್ನು ಬಳಸುತ್ತಾರೆ. ಈ ನಗರದ ಕಾಯಿಪಲ್ಲೆ ಕಸವಿದೆಯಲ್ಲ ಇದು ದನಗಳಿಗೆ ಉತ್ತಮ ಆಹಾರ ಜೊತೆಗೆ ಸಾವಯವ ಗೊಬ್ಬರಕ್ಕೂ ಇದು ಅನುಕೂಲಕರ ಎನ್ನುವ ಭಟ್ ನಗರದ ಎರಡು ಕಡೆ ತಮ್ಮ ವಾಹನಗಳನ್ನು ಇಡುತ್ತಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *