
2019 ನೇ ಸಾಲಿನ ‘ಮೋಹನ ಕುರುಡಗಿ ಕಾವ್ಯ ಪ್ರಶಸ್ತಿ’ಗೆ ಮಹಾಂತಪ್ಪ ನಂದೂರ ಅವರ ‘ಅರಿವೇ ಪ್ರಮಾಣು’ ಕಾವ್ಯ ಕೃತಿ ಆಯ್ಕೆಯಾಗಿದೆ ಎಂದು ನವಚೇತನ ಸಾಂಸ್ಕೃತಿಕ ಕಲಾ ಸಾಹಿತ್ಯ ವೇದಿಕೆಯ ಅಧ್ಯಕ್ಷ ಮಂಜುನಾಥ ಪಟಗಾರ ತಿಳಿಸಿದ್ದಾರೆ.
ಕವಿ ಮೋಹನ ಕುರುಡಗಿಯವರ ನೆನಪಿನಲ್ಲಿ ಕೊಡಮಾಡುವ ಈ ಪ್ರಶಸ್ತಿಯು ರೂ. 10,000 ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನಗಳನ್ನೊಳಗೊಂಡಿದ್ದು, ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ಗದಗಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದೂ ಅವರು ತಿಳಿಸಿದ್ದಾರೆ.
ಪ್ರಸ್ತುತ ಸಾಲಿನಲ್ಲಿ ಪ್ರಶಸ್ತಿಗೆ ರಾಜ್ಯದ ವಿವಿಧ ಕಡೆಗಳಿಂದ 60 ಕೃತಿಗಳು ಬಂದಿದ್ದು, ಕೊನೆಗೆ ‘ಅರಿವೇ ಪ್ರಮಾಣು’ ಕೃತಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪಟಗಾರ ಮಾಹಿತಿ ನೀಡಿದ್ದಾರೆ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
