a model school of sirsi dist- ಆಧುನಿಕ ಶಿಕ್ಷಣದ ಜೊತೆಗೆ ಕೃಷಿ ಶಿಕ್ಷಣ ನೀಡುವ ಬೇಡ್ಕಣಿ ಶಾಲೆ

ಸಿದ್ದಾಪುರ ತಾಲೂಕಿನ ಸರಕಾರಿ ಮಾದರಿ ಬೇಡ್ಕಣಿ ಶಾಲೆಗೆ 117 ವರ್ಷಗಳ ಇತಿಹಾಸವಿದೆ.
ಇಂದು ತಾಲೂಕಿನ ಉತ್ತಮ ಶಾಲೆಗಳಲ್ಲಿ ಇದು ಒಂದು ಎಂದು ಗುರುತಿಸಿಕೊಂಡಿದೆ. 150 ವಿದ್ಯಾರ್ಥಿಗಳು ಇಲ್ಲಿ ಕಲಿಯುತಿದ್ದು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ಎಲ್ಲ ವ್ಯವಸ್ಥೆ ಇಲ್ಲಿದೆ.
ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕ್ಲಾಸ್ ಕಲಿಕೆಗೆ ಐದರಿಂದ ಏಳನೇ ತರಗತಿವರೆಗೆ ಪ್ರತಿ ತರಗತಿಗೆ ಸ್ಮಾರ್ಟ್ ಟಿ.ವಿ. ಇದ್ದು ಆಧುನಿಕ ಶಿಕ್ಷಣಕ್ಕೆ ಇದು ಸಹಕಾರಿಯಾಗಿದೆ.
ಈ ವರ್ಷ ಶಾಲೆಯ ಅಂಗಳದಲ್ಲಿ ಮಕ್ಕಳಿಗೆ ಕೃಷಿ ಪಾಠದೊಂದಿಗೆ ತರಕಾರಿ ಬೆಳೆಸಿದ್ದು ಹರಿವೆ , ಪಾಲಕ್ , ಟೊಮೆಟೊ ಮತ್ತು ಬದನೆಕಾಯಿ ಬೆಳೆಯಲಾಗಿದೆ. ಇದರಿಂದಾಗಿ ಮಕ್ಕಳಿಗೆ ಕೃಷಿಯನೈಜ ಅನುಭವ ನೀಡಲಾಗಿದೆ.
ಪ್ರತಿ ವರ್ಷ ಮಕ್ಕಳು ಜನವರಿ ತಿಂಗಳಲ್ಲಿ ಮಕ್ಕಳೇ ಸಂತೆ ನಡೆಸುವುದು ಇಲ್ಲಿಯ ವಿಶೇಷವಾಗಿದೆ. ಶಾಲೆಯಲ್ಲಿ ರಾಷ್ಟ್ರೀಯ ಹಬ್ಬಗಳನ್ನು ಮಕ್ಕಳಲ್ಲಿ ದೇಶಭಕ್ತಿ ಮೂಡುವಂತೆ ಯಾವುದೇ ತಾಲೂಕಾ ಮಟ್ಟದ ಕಾರ್ಯಕ್ರಮಕ್ಕೆ ಕಡಿಮೆ ಇಲ್ಲದಂತೆ ಅದ್ಧೂರಿಯಾಗಿಆಚರಿಸಲಾಗುತ್ತಿದೆ.
ಶಾಲೆಯ ಅಭಿವೃದ್ಧಿಯಲ್ಲಿ ದಾನಿಗಳಾದ ಜಿ.ಕೆ. ಹರ್ಗಿಯವರ ಪಾತ್ರ : ನಿವೃತ್ತ ಸೈನಿಕರೂ ಮತ್ತು ಶಿಕ್ಷಕರೂ ಆಗಿರುವ ಜಿ.ಕೆ ಹರ್ಗಿ ತಮ್ಮ ವೃದ್ಯಾಪ್ಯ ವೇತನದ ಹಣದಿಂದ ಶಾಲೆಗೆ ಎರಡು ಸ್ಮಾರ್ಟ್ ಟಿ.ವಿ. ಮಕ್ಕಳಿಗೆ ಸಿಹಿ ಊಟ , ಶಾಲೆಯ ಅಂಗಳಕ್ಕೆ ಪಾಟೀಕಲ್ಲು , ವಿದ್ಯಾರ್ಥಿಗಳಿಗೆ ಬಹುಮಾನ ನೀಡಿದ್ದು ತಮ್ಮ ಪಿತ್ರಾರ್ಜಿತ ತೋಟದ ಆದಾಯದ 15,000 ರೂ. ಗಳನ್ನು ತಮ್ಮ ಜೀವಿತಾವಧಿನಂತರವೂ ಶಾಲೆಗೆ ನಿರಂತರವಾಗಿ ಸಿಗುವಂತೆ ಪತ್ರ ಬರೆದಿರುವುದು ವಿಶೇಷ.
ಇವರ ಜೊತೆ ಎಂ.ಆರ್. ನಾಯ್ಕ , ಅಣ್ಣಪ್ಪ ನಾಯ್ಕ ಹಾಗೂ ಇನ್ನೂ ಅನೇಕರು ಶಾಲೆಗೆ ದೇಣಿಗೆ ನೀಡಿರುತ್ತಾರೆ.
ಶಾಲೆಯ ಪ್ರಭಾರೆ ಮುಖ್ಯಾಧ್ಯಾಪಕ ಕೆ.ಪಿ.ರವಿ ಯವರ ದೂರದೃಷ್ಠಿ ಇಂದು ಈ ಶಾಲೆ ಇಷ್ಟು ಪ್ರಗತಿ ಹೊಂದಲು ಕಾರಣವೆಂದರೆ ತಪ್ಪೇನಿಲ್ಲ. ಮಕ್ಕಳನ್ನು ಕ್ರೀಡಾ ಚಟುವಟಿಕೆ , ಸಹಪಠ್ಯ ಚಟುವಟಿಕೆ , ಇನ್‍ಸ್ಪೈರ್ ಅವಾರ್ಡ್ ಚಟುವಟಿಕೆಗಳಲ್ಲಿ ಶಾಲೆಯ ಎಲ್ಲ ಶಿಕ್ಷಕರ ಸಹಕಾರದೊಂದಿಗೆ ಇಂದು ಜಿಲ್ಲಾ ಮಟ್ಟ , ರಾಜ್ಯ ಮಟ್ಟದವರೆಗೆ ಪ್ರತಿನಿಧಿಸುವಂತೆ ಪ್ರೋತ್ಸಾಹಿಸುತ್ತಿರುವುದು ಸಮಾಜ ಇವರನ್ನು ಗೌರವಿಸುವಂತೆ ಮಾಡಿದೆ. ಶಾಲೆಯ ಮೇಲ್‍ಉಸ್ತುವಾರಿ ಸಮೀತಿ ಯುವ ಉತ್ಸಾಹಿ ಪಾಲಕರಿಂದ ಕೂಡಿದೆ. ಗ್ರಾಮಸ್ಥರು ಎಸ್.ಡಿ.ಎಂ.ಸಿ. ಅಧ್ಯಕ್ಷ ಜಯಪ್ರಕಾಶ ನಾಯ್ಕರೊಂದಿಗಿನ ಸಮೀತಿ ಈ ಶಾಲೆಯ ಪ್ರಗತಿಯ ಹಿನ್ನೆಲೆಯಲ್ಲಿ ಅಹರ್ನಿಸಿ ದುಡಿಯುತ್ತಿರುವ ಎಲ್ಲರೂ ಮೆಚ್ಚುಗೆವ್ಯಕ್ತಪಡಿಸುತ್ತಾರೆ.

ಮಂಡ್ಲಿಕೊಪ್ಪ ಬಳಿ ಬಂದ ಬಂಧೀಸರ ವನೌಷಧದ ಜನಪ್ರೀಯ ನಡೆ
ಸಿದ್ಧಾಪುರ ಬಂಧೀಸರದ ಅರುಣ ಗೌಡರ್ ನಾಟಿವೈದ್ಯರಾಗಿ ಹೆಸರುಮಾಡುತಿದ್ದಾರೆ.
ಅರುಣ್ ಗೌಡರ್ ಕುಟುಂಬದ ನಾಟಿ ಔಷಧಕ್ಕೂ ಬಿಳಗಿ ಅರಸರ ಕಾಲದ ವನೌಷಧಕ್ಕೂ ಬಾದರಾಯಣ ಸಂಬಂಧವಿದೆ.
300 ವರ್ಷಗಳ ಹಿಂದೆ ಈ ಭಾಗದ ಸಾಮಂತ ಅರಸರಾಗಿದ್ದ ಬಿಳಗಿ ಅರಸರ ಕೊನೆಯ ರಾಜರ ಹೆಂಡತಿ(ರಾಣಿ) ಈ ಮನೆತನದವರು ಎಂಬುದು ಚಾರಿತ್ರಿಕ ದಾಖಲೆ.
ಇಂಥ ಹಿನ್ನೆಲೆಯ ಇವರ ಕುಟುಂಬದ ವನೌóಷಧಕ್ಕೆ ಸುಮಾರು ನೂರಾರು ವರ್ಷಗಳ ಇತಿಹಾಸವಿದೆ. ಈ ಪರಂಪರೆಯನ್ನು ಮುಂದುವರಿಸಿಕೊಂಡು ಬಂದವರು ಅರುಣ್ ಗೌಡ.
ಬಂಧೀಸರ ಔಷಧ,ಗೌಡರ ನಾಟಿಔಷಧ ಎಂದು ಪ್ರಖ್ಯಾತವಾಗಿರುವ ಬಂಧೀಸರ ಗೌಡರ ಕುಟುಂಬದ ಔಷಧಿಗೆ ವಾಸಿಯಾಗದ ಕಾಯಿಲೆಗಳೇ ಇಲ್ಲ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *