ಶರಾವತಿ ಅಭಯಾರಣ್ಯ-ಅವೈಜ್ಞಾನಿಕ,ಕಾನೂನುವಿರೋಧಿ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಶರಾವತಿ ಅಭಯಾರಣ್ಯಕ್ಕೆ ಜನವಸತಿ ಪ್ರದೇಶ ಸೇರಿಸುವ ಅವೈಜ್ಞಾನಿಕ,ಕಾನೂನುವಿರೋಧಿ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಉತ್ತರಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯ ಜನವಸತಿ ಪ್ರದೇಶಗಳನ್ನು ಹೆಚ್ಚುವರಿಯಾಗಿ ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಸೇರಿಸುವ ಸರ್ಕಾರದ ಅವೈಜ್ಞಾನಿಕ ಮತ್ತು ಸಂವಿಧಾನವಿರೋಧಿ ಕ್ರಮವನ್ನು ಕೈಬಿಡಲು ಉತ್ತರಕನ್ನಡ ಜಿಲ್ಲಾ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ರಾಜ್ಯಪಾಲರಿಗೆ ಮನವಿ ಮಾಡಿದೆ.
ರಾಜ್ಯ ಸರ್ಕಾರವು ಶರಾವತಿ ವನ್ಯಜೀವಿ ಅಭಯಾರಣ್ಯಕ್ಕೆ ಉತ್ತರಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ 20ಸಾವಿರ ಹೆಕ್ಟೇರ್ ಪ್ರದೇಶವನ್ನು ಸೇರಿಸಿದೆ. ಹೀಗೆ ಜನವಸತಿ ಇರುವ ಪ್ರದೇಶವನ್ನು ನಿಷೇಧಿತ ವನ್ಯಜೀವಿ ಅಭಯಾರಣ್ಯಕ್ಕೆ ಸೇರಿಸಲು ಸಾರ್ವಜನಿಕ ಅಹವಾಲು ಕೇಳಬೇಕು. ಅಭಯಾರಣ್ಯ ವಿಸ್ತರಣೆ ಬಗ್ಗೆ ಜನಜಾಗೃತಿ ಮೂಡಿಸಬೇಕು.ಈ ನಿಯಮಗಳನ್ನು ಪಾಲಿಸದೆ. ಅರಣ್ಯ ಅತಿಕ್ರಮಣದಾರರ ಹಕ್ಕುಗಳನ್ನು ಮನ್ನಿಸದೆ. ಭಾರತೀಯ ನಾಗರಿಕರು ಸ್ವತಂತ್ರವಾಗಿ ಭಯಮುಕ್ತರಾಗಿ ಬದುಕುವ ಸ್ವಾತಂತ್ರ್ಯವನ್ನು ಹರಣ ಮಾಡಿ ಈ ಪ್ರಕ್ರಿಯೆ ನಡೆಸಲಾಗಿದೆ.
ಅಧಿಸೂಚನೆಯಂತೆ ಸಿದ್ಧಾಪುರ ತಾಲೂಕಿನ ನಿಲ್ಕುಂದ, ಮುಳಗುಂದ. ಹಳ್ಳಿಬೈಲ್ ಹುಕ್ಕಳಿ, ಶಿವಳಮನೆ, ಉಂಚಳ್ಳಿ, ನೇರಗೋಡ, ಗಿಜಗುಳಿ, ನೈಗಾರ ಕಡವಾಡ, ಹೊನ್ನೆಕೊಪ್ಪ, ಸೂರಗಾಲ, ಹೇಮಗಾರ್ ಹೆಜ್ಜನಿ, ಕುಡಗುಂದ, ಮಲೆಮನೆ ಸುತ್ತಲಮನೆ, ವಾಜಗೋಡ್, ದಾನಮಾಂವ್, ತೇಳಿಕೇರಿ, ಸೇರಿದ ಅನೇಕ ಗ್ರಾಮಗಳೊಂದಿಗೆ ಉತ್ತರಕನ್ನಡ ಜಿಲ್ಲೆಯ ಇತರ ತಾಲೂಕುಗಳು ಮತ್ತು ಶಿವಮೊಗ್ಗ ಜಿಲ್ಲೆಯ ಕೆಲವು ಪ್ರದೇಶಗಳನ್ನು ಸೇರಿಸಲಾಗಿದೆ.
ಈ ಅವೈಜ್ಞಾನಿಕ, ಕಾನೂನುಬಾಹೀರ ಯೋಜನೆಯಿಂದ ರಾಜ್ಯದ ಜನರು, ಜನಜೀವನಕ್ಕೆ ಅಪಾಯವಿದ್ದು, ಜನವಿರೋಧಿಯಾಗಿರುವ ಈ ಪ್ರಸ್ತಾಪ ಮತ್ತು ಆದೇಶದ ಒಟ್ಟಾರೆ ಪ್ರಕ್ರೀಯೆಯನ್ನು ರದ್ದು ಪಡಿಸಿ ಜನಸಾಮಾನ್ಯರಿಗೆ ನ್ಯಾಯ ದೊರಕಿಸುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ನಿರ್ಧೇಶನ ನೀಡಲು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇದೇ ಹಿನ್ನೆಲೆಯಲ್ಲಿ ಮಂಗಳವಾರ ತಂಡಾಗುಂಡಿ ಕುಳ್ಳೆಯಲ್ಲಿ ಪ್ರತಿಭಟನಾರ್ಯಾಲಿ ಮತ್ತು ಸಭೆಗಳು ನಡೆದಿವೆ.ಈ ಸಭೆಯಲ್ಲಿ ಶರಾವತಿ ವನ್ಯಜೀವಿ ಅಭಯಾರಣ್ಯದಿಂದ ಉತ್ತರಕನ್ನಡ ಜಿಲ್ಲೆಯ ಜನವಸತಿ ಪ್ರದೇಶಗಳನ್ನು ಹೊರಗಿಡಬೇಕೆಂದು ಒತ್ತಾಯಿಸಲಾಗಿದ್ದು ಇದಕ್ಕಾಗಿ ಜನಾಂದೋಲನ ಮತ್ತು ಕಾನೂನು ಹೋರಾಟಕ್ಕೆ ಅಣಿಯಾಗುವ ಮೊದಲು ಒಂದು ತಿಂಗಳ ಕಾಲಮಿತಿಯಲ್ಲಿ ಈ ಹೆಚ್ಚುವರಿ ಜನವಸತಿ ಪ್ರದೇಶ ಸೇರ್ಪಡೆಯ ಸರ್ಕಾರದ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *