ಮಂಗನಕಾಯಿಲೆ: ಮತ್ತೊಂದು ಪ್ರಕರಣ ಪತ್ತೆ

ಸಿದ್ದಾಪುರ
ತಾಲೂಕಿನ ತ್ಯಾಗಲಿ ಗ್ರಾಪಂ ವ್ಯಾಪ್ತಿಯ ಕಲಗದ್ದೆ ಗ್ರಾಮದ ಹನುಮನಜಡ್ಡಿಯ ಮಹಿಳೆಯೊರ್ವರಿಗೆ ಮಂಗನ ಕಾಯಿಲೆ ಇರುವದು ವೈದ್ಯಕೀಯ ಪರೀಕ್ಷೆಯಲ್ಲಿ ಧೃಡಪಟ್ಟಿರುವುದಾಗಿ ತಿಳಿದುಬಂದಿದೆ. ಸುಮಾರು 60 ವರ್ಷ ಪ್ರಾಯದ ಆಕೆಗೆ ಅನಾರೋಗ್ಯ ಕಂಡುಬಂದ ಹಿನ್ನೆಲೆಯಲ್ಲಿ ಶಿರಸಿಯ ಟಿ.ಎಸ್.ಎಸ್.ಆಸ್ಪತ್ರೆಗೆ ದಾಖಲಿಸಿ, ನಂತರದಲ್ಲಿ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಕೆಯಲ್ಲಿ ಮಂಗನಕಾಯಿಲೆ ಲಕ್ಷಣಗಳು ಇರುವುದು ತಿಳಿದುಬಂದಿರುವುದಾಗಿ ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.
ಜಾಗೃತಿ ಸಭೆ: ಕಲ್ಗದ್ದೆ ಗ್ರಾಮದ ಮಹಿಳೆಯೊರ್ವರಿಗೆ ಮಂಗನಕಾಯಿಲೆ ಲಕ್ಷಣಗಳು ಧೃಡಪಟ್ಟಿರುವ ಹಿನ್ನೆಲೆಯಲ್ಲಿ ತ್ಯಾಗಲಿ ಗ್ರಾಪಂ ಸಭಾಭವನದಲ್ಲಿ ಸೋಮವಾರ ಸಭೆ ನಡೆಸಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಕಾಯಿಲೆಯ ನಿಯಂತ್ರಣದ ಕುರಿತು ಚರ್ಚೆ ನಡೆಸಲಾಯಿತು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಮಂಗಳವಾರದಿಂದಲೇ ಆ ಭಾಗದ ಜನರಿಗೆ ಕಾಯಿಲೆ ನಿರೋಧಕ ಲಸಿಕೆ ನೀಡಲು ತೀರ್ಮಾನಿಸಲಾಯಿತು. ಸಭೆಯಲ್ಲಿ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ, ಗ್ರಾಪಂ ಉಪಾಧ್ಯಕ್ಷ ವಸಂತ ಹೆಗಡೆ, ಗ್ರಾಪಂ ಸದಸ್ಯರಾದ ಜ್ಯೋತಿ ಶೆಟ್ಟಿ, ಆರ್.ಆರ್.ಹೆಗಡೆ, ತಾಲೂಕ ವೈದ್ಯಾಧಿಕಾರಿ ಡಾ|ಲಕ್ಷ್ಮಿಕಾಂತ, ಕೆ.ಎಫ್.ಡಿ. ವಿಶೇಷಾಧಿಕಾರಿ ಡಾ|ಸತೀಶ ಶೆಟ್ಟಿ,ಅಭಿವೃದ್ಧಿ ಅಧಿಕಾರಿ ಈರಣ್ಣ ಇಲ್ಲಾಳ, ಪಶುಸಂಗೋಪನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು,ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮುಖ್ಯಾಧ್ಯಾಪಕರು, ಸ್ಥಳೀಯ ಸೇವಾ ಸಹಕಾರಿ ಸಂಘದ ಪದಾಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಮಂಗಳೂರಿನಲ್ಲಿ ತಪ್ಪಿಸಿಕೊಂಡ ಕೋವಿಡ್19 ರೋಗಿಗಾಗಿ ಹುಡುಕಾಟ
ಕರೋನಾ ವೈರಸ್ ಇರುವ ರೋಗಿಯೊಬ್ಬ ಇಂದು ಮಂಗಳೂರಿನ ವೆನ್‍ಲಾಕ್ ಆಸ್ಫತ್ರೆಯಿಂದ ತಪ್ಪಿಸಿಕೊಂಡು ಜನರ ಕುತೂಹಲ ತಲೆಬಿಸಿ ಹೆಚ್ಚಿಸಿದ್ದಾನೆ.
ವಿದೇಶದಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ಧಾಣದಿಂದ ನೇರವಾಗಿ ನಿನ್ನೆ ಸಾಯಂಕಾಲ ವೆನ್‍ಲಾಕ್ ಆಸ್ಫತ್ರೆಗೆ ಕೊಂಡೊಯ್ದು ತಪಾಸಣೆ ನಡೆಸಲಾಯಿತು. ಈ ತಪಾಸಣೆಯಲ್ಲಿ ಈ ವ್ಯಕ್ತಿಗೆ ಕೋವಿಡ್19 ಸೋಂಕು ತಗುಲಿರುವ ಬಗ್ಗೆ ಖಾತ್ರಿಯಾಯಿತು. ರವಿವಾರ ರಾತ್ರಿಯಿಂದ ಚಿಕಿತ್ಸೆ ಪಡೆದ ಈ ವ್ಯಕ್ತಿ ಇಂದು ಬೆಳಿಗ್ಗೆ ನಾಪತ್ತೆಯಾಗಿದ್ದಾನೆ.ಹೀಗೆ ನಾಪತ್ತೆಯಾದ ಕರೋನಾ ರೋಗಿಯ ಪತ್ತೆಗಾಗಿ ಪೊಲೀಸ್ ನೆರವು ಪಡೆಯಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *