ಬೇಸಾಯ, ವ್ಯಾಪಾರದ ಕೃಷಿ-ಋಷಿ ತಿಮ್ಮಜ್ಜ

ಕೃಷಿ-ಋಷಿ ತಿಮ್ಮಜ್ಜರ ಯಶಸ್ಸಿನಿಂದ ಪ್ರೇರಿತರಾಗಿ ತರಕಾರಿ ಬೆಳೆದು ಮಾರಿದವರೆಲ್ಲಾ ಯಶ ಕಂಡರು!


ಸಿದ್ಧಾಪುರ ತಾಲೂಕಿನಲ್ಲಿ ಕೃಷಿಯಲ್ಲಿ ಖುಷಿಕಂಡ ಅಸಂಖ್ಯ ಕೃಷಿಕರಿದ್ದಾರೆ.ಅವರಲ್ಲಿ ಕೃಷಿಯೊಂದಿಗೆ ಸಂತೆಯ ವ್ಯಾಪಾರದ ಮೂಲಕ ಸಾಧಕ ಎನಿಸಿಕೊಂಡವರು ಗೋಳಗೋಡಿನ ತಿಮ್ಮಜ್ಜ.
ತಿಮ್ಮಪ್ಪ ನಾಯ್ಕ ಯುವಕರಾಗಿದ್ದಾಗ ಊರಿನಲ್ಲಿ ನೀರಿನ ವ್ಯವಸ್ಥೆಯೂ ಇರಲಿಲ್ಲ. ಕೃಷಿಯೆಂದರೆ ಭತ್ತ, ಅಡಿಕೆ, ಬಾಳೆ, ಏಲಕ್ಕಿ ಬಿಟ್ಟರೆ ಉಳಿದ ಬೆಳೆಗಳೇ ತಿಳಿದಿರಲಿಲ್ಲ. ಆದರೆ 80 ರ ದಶಕದಲ್ಲಿ ಹುಸೂರಿನ ಜಲಾಗಾರ ನಿರ್ಮಿಸಿ ಅಲ್ಲಿಂದ ಸಿದ್ದಾಪುರಕ್ಕೆ ಕುಡಿಯುವ ನೀರು ಪೂರೈಸತೊಡಗಿದರು ನೋಡಿ ತಿಮ್ಮಪ್ಪರಂಥ ಕೆಲವರು ಈ ನೀರು ಬಳಸಿ ತರಕಾರಿ ಬೆಳೆಯತೊಡಗಿದ್ದೇ ಪ್ರಾರಂಭ ನಂತರ ಸುತ್ತಮುತ್ತಲಿನ ಊರಿನ ನೂರಾರು ಜನರು
ತರಕಾರಿ ಬೆಳೆಯತೊಡಗಿದರು.


ತಿಮ್ಮಪ್ಪ ಸಹೋದರರನ್ನೂ ಬಳಸಿಕೊಂಡು ವ್ಯವಸಾಯ ಮಾಡುತ್ತಾ ಸುತ್ತಮುತ್ತಲಿನ ವಾರದ ಸಂತೆಗಳಲ್ಲಿ ತಾವು ಬೆಳೆದ ತರಕಾರಿ ವ್ಯಾಪಾರ ಮಾಡತೊಡಗಿದರು. ತರಕಾರಿ ತಿಮ್ಮಪ್ಪರಿಂದ ಬೆಳೆದಂತೆ ಅವರನ್ನೂ ಬೆಳೆಸತೊಡಗಿತು. ಇದರ ಅನುಕೂಲದಿಂದ ತಿಮ್ಮಪ್ಪ ತರಕಾರಿ ತಿಮ್ಮ ಎಂದೇ ಖ್ಯಾತರಾದರು.
70 ರ ಹರೆಯದ ತಿಮ್ಮಪ್ಪ ಈಗಲೂ ತಾಳಗುಪ್ಪ, ಸಾಗರ, ಸಿದ್ಧಾಪುರ, ಸೊರಬ ಸಂತೆಗಳಲ್ಲಿ ತರಕಾರಿ ಮಾರುತ್ತಾರೆ. ಕಳೆದ 40 ವರ್ಷಗಳಿಂದ ತರಕಾರಿ ಬೆಳೆಯುತ್ತಾ, ತರಕಾರಿ ವ್ಯಾಪಾರಿಯಾಗಿಯೂ ಗುರುತಿಸಿಕೊಂಡವರು ಮಕ್ಕಳು-ಮೊಮ್ಮಕ್ಕಳನ್ನು ಓದಿಸಿ ಸರಕಾರಿ ನೌಕರರನ್ನಾಗಿಸಿದ್ದಾರೆ.
ವಾರಕ್ಕೆ ಸಾವಿರ ಲೆಕ್ಕದಲ್ಲಿ ತಿಂಗಳಿಗೆ ಲಕ್ಷಾಂತರ ದುಡಿಯುವ ಇವರಿಗೆ ಉಳಿದ ಸಾಂಪ್ರದಾಯಿಕ ಕೃಷಿ ಆದಾಯಕ್ಕಿಂತ ಹೆಚ್ಚು ಆದಾಯ ತರಕಾರಿಯಿಂದ ಸಿಗುತ್ತದೆ. ಕೃಷಿಮೂಲದ ಕುಟುಂಬ,ಗ್ರಾಮದ ಹಿನ್ನೆಲೆಯ ತಿಮ್ಮಜ್ಜ ತರಕಾರಿ ಬೆಳೆ,ವ್ಯಾಪಾರದಿಂದ ಶ್ರೀಮಂತರಾದರೂ ಈಗಲೂ ಅವರ ಸರಳ ಬದುಕು ಬಿಟ್ಟಿಲ್ಲ. ಕೃಷಿಯಲ್ಲಿ ಖುಷಿ ಕಾಣುತ್ತಾ ಕ್ರóಷಿ ಉತ್ಫನ್ನಗಳ ವ್ಯಾಪಾರದಿಂದ ತರಕಾರಿ ತಿಮ್ಮಜ್ಜನಾಗಿ ಹೆಸರು ಮಾಡಿರುವ ಇವರ ಏಕಲವ್ಯ ಸಾಧನೆಗೆ ಸ್ಥಳಿಯ ತರಳಿ ಮಠ, ಕೃಷಿ ಇಲಾಖೆಗಳು ಸನ್ಮಾನಿಸಿ ಗೌರವಿಸಿವೆ.


ಅವಿಭಕ್ತ ಕುಟುಂಬದ ಹಿರಿಯನಾಗಿ ಕೃಷಿ,ವ್ಯಾಪಾರ, ಶಿಕ್ಷಣ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿರುವ ಇವರ ಕುಟುಂಬದ ಪ್ರೇರಣಾಶಕ್ತಿ ಮತ್ತು ಸರಳ ವ್ಯಕ್ತಿತ್ವ ಇವರ ಯಶಸ್ಸಿನ ಗುಟ್ಟು. ಪ್ರತಿ ಬುಧವಾರ ಸಿದ್ಧಾಪುರದಲ್ಲಿ ತಾನು ಬೆಳೆದ ತರಕಾರಿಗಳೊಂದಿಗೆ ಅನ್ಯರಿಂದ ತರಕಾರಿ ಖರೀದಿಸಿ ಮಾರುತ್ತಲೇ ಸಂಬಂಧ,ಸಹಬಾಳ್ವೆ, ಸಹಕಾರದ ಬಗ್ಗೆ ಮಾತನಾಡುತ್ತಾರೆ. ಶ್ರಮ, ಕೃಷಿ, ಖುಷಿಯ ಗುಟ್ಟುಬಲ್ಲ ತಿಮ್ಮಜ್ಜ ಕಾಯಕವೇ ಕೈಲಾಸ ಎಂದು ಯಶಸ್ಸಿನ ಮೆಟ್ಟಿಲೇರಿದ ಸಾಧಕ ಅವರ ಸರಳತೆ, ಸಾಧನೆ, ವಿನಯವಂತಿಕೆ ಹೊಸಪೀಳಿಗೆಗೆ ಮಾದರಿ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *