ಹೋಲಿ ಹುಡುಗರು ಬಣ್ಣದಲ್ಲಿ ಮಿಂದೆದ್ದರು, ಕಣ್ಣುಕಟ್ಟಿ ಮೊಸರು ಮಡಿಕೆ ಒಡೆದರು

ಸಿದ್ಧಾಪುರ ನಗರದಲ್ಲಿ ಸೋಮವಾರ ರಾತ್ರಿ ಮತ್ತು ಮಂಗಳವಾರ ಹೋಳಿಹಬ್ಬದ ಆಚರಣೆ ಶಾಂತಿಯುತವಾಗಿ ನಡೆಯಿತು. ನಗರದ ಕೆಲವೆಡೆ ಕಾಮನ ದಹನ ಮಾಡಿದ ಜನರು ಮಂಗಳವಾರ ಬಣ್ಣ ಹಚ್ಚಿಕೊಂಡು ಸಂಬ್ರಮಿಸಿದರು. ಯುವಕರು ಹಾಡು-ಕುಣಿತದ ಮೆರವಣಿಗೆ ಮೂಲಕ ಹೋಳಿಯನ್ನು ಸಂಬ್ರಮಿಸಿದರು.
ರವೀಂದ್ರನಗರದ ಯುವಕರು ಪ್ರತಿವರ್ಷದಂತೆ ಈ ವರ್ಷವೂ ಬಣ್ಣಹಚ್ಚಿ ಮೊಸರುಮಡಿಕೆ ಒಡೆಯುವ ಸಾಹಸ ಪ್ರದರ್ಶಿಸಿದರು. ಸೋಮವಾರ, ಮಂಗಳವಾರಗಳ ಎರಡು ದಿವಸಗಳ ಹೋಳಿ ಶಾಂತಿಯುತವಾಗಿ ಇಂದು ಮುಕ್ತಾಯವಾಯಿತು.

ಭವ್ಯಭಾರತ ಸಾಗುತ್ತಿರುವ ದಾರಿ ಭಯಹುಟ್ಟಿಸುತ್ತಿದೆಯೇ?
ಅಮೇರಿಕಾದ ಅಧ್ಯಕ್ಷ ಟ್ರಂಪ್ ಭಾರತಕ್ಕೆ ಭೇಟಿ ನೀಡಿ ಮರಳಿದ್ದಾರೆ.
ಟ್ರಂಪ್ ಭಾರತ ಭೇಟಿ ಹಿನ್ನೆಲೆಯ ಉದ್ದೇಶಗಳಲ್ಲಿ ಅಮೇರಿಕಾದಲ್ಲಿರುವ ಭಾರತೀಯ ಮತದಾರರ ಓಲೈಕೆ ಹಾಗೂ ಯುದ್ಧಾಸ್ತ್ರಗಳು ಸೇರಿದಂತೆ ಅಮೇರಿಕಾಕ್ಕೆ ವ್ಯಾಪಾರಿ ಲಾಭ ಮಾಡುವ ಉದ್ಧೇಶ ಎನ್ನಲಾಗುತ್ತಿದೆ. ಭಾರತದಲ್ಲಿ ಮೋದಿ ನೇತೃತ್ವದಲ್ಲಿ ಎನ್.ಡಿ.ಎ. ಸರ್ಕಾರಗಳ ಆರಂಭಾ ಕಾಲದಿಂದಲೂ ಈ ಸರ್ಕಾರಗಳಿಗೆ ಬಂಡವಾಳಶಾಹಿ ಅಮೇರಿಕಾ ಮೇಲೆ ಪ್ರೀತಿ ಯಾಕೆಂದರೆ ಭಾರತದಲ್ಲಿ ಮೋದಿ ಮತ್ತವರ ಪರಿವಾರ ಮಾಡುತ್ತಿರುವ ಉಳ್ಳವರ ಓಲೈಕೆಯ ಬಂಡವಾಳಶಾಹಿ, ಧಾರ್ಮಿಕ ರಾಷ್ಟ್ರೀಯತೆಯ ಕೋಮುವಾದಿ ಕಾರ್ಯಾಚರಣೆಗಳಿಗೂ ಟ್ರಂಪ್ ನೀತಿಗಳಿಗೂ ಸಾಮ್ಯತೆಗಳಿವೆ. ಅಮೇರಿಕಾ ಬಹಿರಂಗವಾಗಿ ಭಾರತವನ್ನು ಓಲೈಸಿ, ಹಿಂದಿನಿಂದ ಪಾಕಿಸ್ತಾನಕ್ಕೆ ಬೆಂಬಲಿಸುತ್ತಿರುವ ಅಂಶ ಬಹಿರಂಗ ಗುಟ್ಟು ಆದರೆ ಜನಸಾಮಾನ್ಯರ ವಿರೋಧಿ ಕಾರ್ಯಾಚರಣೆಯ ಮೋದಿ ಮತ್ತು ಟ್ರಂಪ್ ಚಲನೆಗಳ ಹಿಂದೆ ಅಭಿವೃದ್ಧಿ-ಸಂಬಂಧಗಳ ಸುಧಾರಣೆಯ ನೆಪದ ಆಂತರಿಕ ಸಮಾನ ಹಿತಾಸಕ್ತಿಗಳ ಕಾರಣಎಂಬುದನ್ನು ಭಾರತೀಯರು ಮರೆಯಬಾರದು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *