ಶನಿವಾರ ರಾ.ಸ.ನೌ.ಸಂಘದ ಸರ್ಕಾರಿ ನೌಕರರ ಸಾಂಸ್ಕೃತಿಕ ಸಂಜೆ -2020

ಸಿದ್ಧಾಪುರ ತಾಲೂಕಿನ ಸರ್ಕಾರಿ ನೌಕರರನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಸರ್ಕಾರಿ ನೌಕರರ ಸಾಂಸ್ಕೃತಿಕ ಸಂಜೆ ಮೊಟ್ಟ ಮೊದಲ ಬಾರಿ ಇಲ್ಲಿ ನಡೆಯುತ್ತಿದೆ. ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ಸೇರುವ ಈ ಕಾರ್ಯಕ್ರಮ ಮಾ.14ರ ಶನಿವಾರ ಸಂಜೆ ನಡೆಯಲಿದೆ.
ಈ ಬಗ್ಗೆ ಸರ್ಕಾರಿ ನೌಕರರ ಭವನದಲ್ಲಿ ಮಾಹಿತಿ ನೀಡಿದ ತಾಲೂಕಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಸಾರ್ವಜನಿಕರನ್ನು ಮಾಧ್ಯಮಗಳ ಮೂಲಕ ಆಹ್ವಾನಿಸಿದರು.
ಅಂದು ನಡೆಯಲಿರುವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಉದ್ಘಾಟಿಸಲಿದ್ದಾರೆ. ಇವರ ಆಹ್ವಾನದ ಅಂಗವಾಗಿ ನಗರದಲ್ಲಿ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದ ಸ.ನೌ. ಸಂಘದ ತಾಲೂಕಾಧ್ಯಕ್ಷ ರಾಜೇಶ್ ನಾಯ್ಕ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನಡುವಿನ ವೇತನ ತಾರತಮ್ಯ ಮತ್ತು ಎನ್.ಪಿ.ಎಸ್. ಯೋಜನೆ ಕೈಬಿಟ್ಟು ಎಲ್ಲಾ ನೌಕರರಿಗೆ ಹಳೆ ಪಿಂಚಣಿ ಯೋಜನೆ ಅನ್ವಯಿಸುವಂತೆ ಕೋರಿ ರಾಜ್ಯಾಧ್ಯಕ್ಷರಿಗೆ ಈ ಕಾರ್ಯಕ್ರಮದಲ್ಲೇ ಮನವಿ ಮಾಡುತ್ತೇವೆ ಎಂದರು.
ಸಭಾ ಕಾರ್ಯಕ್ರಮದ ನಂತರ ಸರ್ಕಾರಿ ನೌಕರರು ಅವರ ಕುಟುಂಬದ ಸದಸ್ಯರಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದ್ದು ಇದರ ಮೊದಲು ನಡೆಯುವ ಸಭಾ ಕಾರ್ಯಕ್ರಮದಲ್ಲಿ ಎಸ್.ಎಸ್. ಎಲ್.ಸಿ. ಯಲ್ಲಿ 95% ಮತ್ತು ಪಿ.ಯು.ಸಿ.ಯಲ್ಲಿ 90% ಕ್ಕಿಂತ ಹೆಚ್ಚು ಅಂಕಗಳಿಸಿದ ಸರ್ಕಾರಿ ನೌಕರರ ಮಕ್ಕಳನ್ನು ಅಭಿನಂದಿಸಿ,ಗೌರವಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಾ.16 ರ ಸಂಜೆ ಹಕ್ಕಿಕತೆ
ಮೈಸೂರು ರಂಗಾಯಣದ ಹಕ್ಕಿಕತೆ ನಾಟಕ ಪ್ರದರ್ಶನ ಇಲ್ಲಿಯ ಶಂಕರಮಠದಲ್ಲಿ ಮಾ.16 ಸೋಮವಾರ ಸಂಜೆ 7 ಕ್ಕೆ ನಡೆಯಲಿದೆ.ಇಲ್ಲಿಯ ಸಂಸ್ಕøತಿ ಸಂಪದ ಮತ್ತು ಹಿತ್ಲಕೈ ಒಡ್ಡೋಲಗ ಸ್ಥಾನಿಕ ಸಹಕಾರದಲ್ಲಿ ನಡೆಯುವ ಈ ನಾಟಕ ನಾ.ಡಿಸೋಜಾ ರ ಹಕ್ಕಿಗೊಂದು ಗೂಡುಕೊಡಿ ಕತೆ ಆಧರಿಸಿದೆ. ಈ ನಾಟಕ ಪ್ರದರ್ಶನಕ್ಕೆ ನಿಗದಿತ ಸಮಯಕ್ಕಿಂತ 10 ನಿಮಿಷ ಮೊದಲು ಆಗಮಿಸಲು ಸಂಘಟಕರು ಪ್ರೇಕ್ಷಕರಿಗೆ ವಿನಂತಿಸಿದ್ದಾರೆ.

ಪ್ರದೇಶ ಕಾಂಗ್ರೆಸ್ ಸಮೀತಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ ನೇಮಕ
ಬೆಂಗಳೂರು,ಮಾ.11- ನಿರೀಕ್ಷೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೀತಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ ನೇಮಕವಾಗಿದ್ದಾರೆ. ಎ.ಆಯ್.ಸಿ.ಸಿ. ಪರವಾಗಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಈ ನೇಮಕದ ಆದೇಶ ಬಿಡುಗಡೆಮಾಡಿದ್ದು,ಕಾರ್ಯಾಧ್ಯಕ್ಷರನ್ನಾಗಿ ಈಶ್ವರ್ ಖಂಡ್ರೆ ಮತ್ತು ಸತೀಶ್ ಜಾರಕಿಹೊಳೆ ಹಾಗೂ ಸಲೀಂ ಅಹಮ್ಮದ್ ರನ್ನು ನೇಮಿಸಲಾಗಿದೆ.
ಶಾಸಕಾಂಗ ಪಕ್ಷದ ನಾಯಕ ಮತ್ತು ವಿರೋಧ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದುವರಿದಿದ್ದಾರೆ. ಎಂ ನಾರಾಯಣಸ್ವಾಮಿ ವಿಧಾನಪರಿಷತ್ ನಾಯಕರಾಗಿದ್ದು ಅಜಯ್‍ಸಿಂಗ್ ರನ್ನು ವಿಧಾನಸಭಾ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಆಯ್ಕೆಯ ಮೂಲಕ ರಾಜ್ಯದ ಕಾಂಗ್ರೆಸ್‍ನಲ್ಲಿ ನೆನಗುದಿಗೆ ಬಿದ್ದಿದ್ದ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ಮುಗಿದಂತಾಗಿದೆ.

ಕರ್ನಾಟಕ ರಾಷ್ಟ್ರ ಸಮೀತಿ ರವಿಕೃಷ್ಣ ರೆಡ್ಡಿಯವರೊಂದಿಗೆ
ಮೂಖಾಮುಖಿ- ಜನ ಇನ್ನೂ ಸಮಾಜಮುಖಿಯಾಗಿ ಯೋಚಿಸುತ್ತಿಲ್ಲ,
ಗೆಲ್ಲುತ್ತೇವೆ ಒಂದುದಿನ ಗೆಲ್ಲಲೇಬೇಕು ಒಳ್ಳೆತನ
ಕರ್ನಾಟಕ ರಾಷ್ಟ್ರ ಸಮೀತಿಯ(ಪಕ್ಷ) ರವಿಕೃಷ್ಣ ರೆಡ್ಡಿ ಕನಸುಗಾರ, 2008 ರಲ್ಲಿ ವಿದೇಶದಿಂದ ಭಾರತಕ್ಕೆ ಬಂದು ಸಮಾಜಮುಖಿಯಾದ ವಾತಾವರಣಕ್ಕೆ ಅಂಥ ಮನೋಭಾವದ ಮಾಧ್ಯಮ,ಪಕ್ಷ, ಆಡಳಿತ, ರಾಜ್ಯ ಬೇಕು ಎಂದು ಕನಸಿದವರು. ಅವರು ಹೊರತರುತ್ತಿದ್ದ ವಿಕ್ರಾಂತ ಕರ್ನಾಟಕ ಕನ್ನಡ ಸಾಪ್ತಾಹಿಕ ಲೋಕದ ವಿಶಿಷ್ಟ ಪ್ರಯೋಗ. ಈ ವಿಕ್ರಾಂತ ಕರ್ನಾಟಕ ಮುಂದುವರಿಸಲಾಗದ ಬಿಕ್ಕಟ್ಟಿಗೆ ಸಿಲುಕಿದ ರವಿಕೃಷ್ಣ ರೆಡ್ಡಿ ರಾಜಕೀಯದಿಂದ ಸಮಾಜಪರಿವರ್ತನೆಯ ಕನಸು ಕಂಡವರು.
ಸಮಾಜಪರಿವರ್ತನಾ ಸಂಸ್ಥೆಯ ಎಸ್.ಆರ್. ಹಿರೇಮಠರೊಂದಿಗೆ ಸಮಸಮಾಜ, ಸಮಾಜಮುಖಿ ಚಿಂತನೆಯ ಆಶಾವಾದದೊಂದಿಗೆ ಕರ್ನಾಟಕ ರಾಷ್ಟ್ರ ಸಮೀತಿ ಕಟ್ಟಿದ್ದಾರೆ. ಕರ್ನಾಟಕ ರಾಷ್ಟ್ರ ಸಮೀತಿ ಹಣ-ಹೆಂಡ,ಮನಿ.ಮಸಲ್‍ಪವರ್ ಗಳನ್ನು ಮೀರಿದ ಸುಧಾರಣಾವಾದಿ ರಾಜಕೀಯದ ಪ್ರಯೋಗ.
ಕರ್ನಾಟಕ ರಾಷ್ಟ್ರ ಸಮೀತಿ ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ ಕಳೆದ ವಾರ ಸಮಾಜಮುಖಿ ಗೆ ಮುಖಾಮುಖಿಯಾದರು ಅವರೊಂದಿಗಿನ ಚುಟುಕು ಸಂದರ್ಶನ ಹೀಗಿದೆ- ಸಮಾಜಮುಖಿ- ಈ ಪ್ರಯೋಗ ಸಾಧ್ಯವೆ?
ರವಿಕೃಷ್ಣರೆಡ್ಡಿ- ನಮ್ಮ ಗುಣ,ಆಶಾವಾದ, ಅಪೇಕ್ಷೆ ವರವೂ ಆಗಬಹುದು, ಶಾಪವೂ ಆಗಬಹುದು. ರಾಜಕೀಯ, ರಾಜಕೀಯ ಬದುಕು ತೀರಾ ಕೆಟ್ಟ ಸಂದರ್ಭದಲ್ಲಿ ನಾವು ಮಾಡುತ್ತಿರುವ ಪ್ರಯೋಗ ಅಪ್ರಾಯೋಗಿಕ ಎನಿಸಬಹುದು. ನಿರಾಶಾವಾದಿಗಳು, ಸಿನಿಕರಿಗೆ ಇದು ಕೆಟ್ಟ ಕಾಲ ಇದನ್ನು ಯಾರೂ ಸರಿಪಡಿಸಲು ಸಾಧ್ಯವಿಲ್ಲ ಎನ್ನುವ ಹತಾಸೆ ಇರಬಹುದು. ಆದರೆ ಸಮಾಜಮುಖಿಯಾದ ಸಮಾಜ,ರಾಜಕೀಯ, ಆಡಳಿತದ ಹಿನ್ನೆಲೆಯಲ್ಲಿ ನಮ್ಮ ಪ್ರಯತ್ನಸಾಗಿದೆ. ಕುರುಡರ ರಾಜ್ಯದಲ್ಲಿ ಕಣ್ಣಿದ್ದವನೇ ಪಾಪಿ,ನಮ್ಮ ಸಂಕಲ್ಫ, ಬದ್ಧತೆ ಒಳ್ಳೆಯದರತ್ತ, ಗೆಲ್ಲುತ್ತೇವೆ ಒಂದು ದಿನ ಗೆಲ್ಲಲೇಬೇಕು ಒಳ್ಳೆತನ.
ಸಮಾಜಮುಖಿ-ದೇಶದಲ್ಲಿ ಆದಾಯ, ತೆರಿಗೆ ಸಂಗ್ರಹ ವೃದ್ಧಿಯಾಗುತ್ತಿದೆ. ಆದರೆ ಸಾಮಾಜಿಕ ವ್ಯವಸ್ಥೆ,ಜಿ.ಡಿ.ಪಿ. ಮೇಲೇಳುತ್ತಿಲ್ಲ ಯಾಕೆ?

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *