ಸುವರ್ಣಮಹೋತ್ಸವ ಕಾರ್ಯಕ್ರಮ ಮುಂದೂಡಿಕೆ- ಸಹಕಾರಿ ಪಠ್ಯಕ್ರಮದ ಅಗತ್ಯ ಪ್ರತಿಪಾದನೆ

ಸಿದ್ದಾಪುರ ತಾಲೂಕಿನ ಬಿದ್ರಕಾನ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘದ ಸುವರ್ಣಮಹೋತ್ಸವದ ಅಂಗವಾಗಿ ವಿಚಾರ ಗೋಷ್ಠಿ ನಡೆಯಿತು.
ಸಹಕಾರಿ ಸಂಘಗಳಲ್ಲಿ ಸದಸ್ಯರ ಪಾಲ್ಗೊಳ್ಳುವಿಕೆ ಕುರಿತು ಕೆಡಿಸಿಸಿ ಬ್ಯಾಂಕ ಉಪಾಧ್ಯಕ್ಷ ಭಾಸ್ಕರ ಹೆಗಡೆ ಕಾಗೇರಿ ಮಾತನಾಡಿದರು.ಸಹಕಾರಿ ಸಂಘಗಳು ಬಂಡವಾಳಗಾರರ ಸಂಸ್ಥೆ ಅಲ್ಲ. ಬಳಕೆದಾರರ ಸಂಸ್ಥೆ. ಸಹಕಾರಿ ಸಂಘದಲ್ಲಿ ಸಹಕಾರಿ ತತ್ವವನ್ನು ಅರಿತವರು ಇದ್ದರೆ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ. ಸಂಘದಲ್ಲಿ ಸದಸ್ಯರು ಭಾಗವಹಿಸುವುದು ಮುಖ್ಯ. ಸದಸ್ಯತ್ವ ಪಡೆದವನು ಜವಾಬ್ದಾರಿಯಿಂದ ವ್ಯವಹಾರ ಮಾಡಬೇಕು. ಯಾವುದೇ ಸಹಕಾರಿ ಸಂಘ ವ್ಯಕ್ತಿ ಆಧಾರಿತವಾಗಿರಬಾರದು. ಕಾನೂನು ಚೌಕಟ್ಟಿನಲ್ಲಿ ಇರಬೇಕು. ಸಹಕಾರಿ ಸಂಘಗಳ ಕುರಿತು ಪಠ್ಯವಿಷಯದಲ್ಲಿ ಪಾಠಗಳು ಇದ್ದರೆ ಯುವಕರಿಗೆ ಹೆಚ್ಚಿನ ಜ್ಞಾನ ಪಡೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ ಎಂದರು.
ಸಹಕಾರಿ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಕೆ.ರಾಮಪ್ಪ ಸದಸ್ಯರ ಅರಿವು ಮತ್ತು ಸಹಕಾರಿ ಕಾನೂನು ಕುರಿತು ಮಾತನಾಡಿ ಸಹಕಾರಿ ಸಂಘಗಳು ಲಾಭಮಾಡುವ ಉದ್ದೇಶವನ್ನು ಮಾತ್ರ ಹೊಂದದೆ ಸಾಮಾಜಿಕ ಕಳಕಳಿಯನ್ನು ಹೊಂದಿರಬೇಕು. ಸಂಘದಲ್ಲಿ ನಾಮಕಾವಸ್ಥೆ ಸದಸ್ಯರಾಗಿದ್ದರೆ ಏನು ಪ್ರಯೋಜನ ಇಲ್ಲ. ಸಂಘದ ಕುರಿತು ಕಳಕಳಿ ಉಳ್ಳವರಾಗಿರಬೇಕು. ಸಂಸ್ಥೆ ಉತ್ತಮವಾಗಿ ಬೆಳೆಯಬೇಕಾದರೆ ದಕ್ಷ ಆಡಳಿತ ಮಂಡಳಿ, ನಿಷ್ಠಾವಂತ ಸಿಬ್ಬಂದಿ ಹಾಗೂ ಪ್ರಜ್ಞಾವಂತ ಸದಸ್ಯರು ಇರಬೇಕು ಎಂದು ಹೇಳಿ ಸಂಘದಲ್ಲಿ ಸದಸ್ಯರ ಪಾಲ್ಗೊಳ್ಳುವಿಕೆ, ಮತದಾನದ ಕುರಿತು ಮಾತನಾಡಿದರು.
ಕೃಷಿ ತಜ್ಞ ವಿ.ಎಂ.ಹೆಗಡೆ ಕೃಷಿಯಲ್ಲಿ ಆಧುನಿಕತೆಯ ಅಳವಡಿಕೆ ಕುರಿತು ಮಾತನಾಡಿದರು. ಸಂಘದ ಅಧ್ಯಕ್ಷ ಪರಮೇಶ್ವರ ಹೆಗಡೆ ಹುಲಿಮಕ್ಕಿ ಅಧ್ಯಕ್ಷತೆವಹಿಸಿದ್ದರು. ಆರ್.ಎಸ್.ಹೆಗಡೆ ತುಪ್ಪದ, ವೆಂಕಟ್ರಮಣ ಎಂ.ಹೆಗಡೆ ಉಳ್ಳಾನೆ,ಎಲ್.ಕೆ.ಹೆಗಡೆ ಉಳ್ಳಾನೆ,ಶ್ರೀಕಾಂತ ಭಟ್ಟ ಚಟ್ನಳ್ಳಿ, ಪ್ರಕಾಶ ಹೆಗಡೆ ಮುತ್ತಿಗೆ ಉಪಸ್ಥಿತರಿದ್ದರು.ಭಾಸ್ಕರ ಹೆಗಡೆ ಕೊಡ್ಗಿಬೈಲ್ ಸ್ವಾಗತಿಸಿದರು. ಡಿ.ಜಿ.ಭಟ್ಟ ಮುತ್ತಿಗೆ ನಿರ್ವಹಿಸಿದರು. ಮಂಜುನಾಥ ಗೌಡ ವಂದಿಸಿದರು.

ಸುವರ್ಣಮಹೋತ್ಸವ ಕಾರ್ಯಕ್ರಮ ಮುಂದೂಡಿಕೆ
ಸಿದ್ದಾಪುರತಾಲೂಕಿನ ಬಿದ್ರಕಾನ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘದ ಮಾ.15ರಂದು ನಡೆಯಬೇಕಾಗಿದ್ದ ಸುವರ್ಣ ಮಹೋತ್ಸವ ಹಾಗೂ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಕರೊನಾ ಸಾಂಕ್ರಾಮಿಕ ರೋಗದ ಹರಡುವಿಕೆಯ ಹಿನ್ನೆಲೆಯಲ್ಲಿ ಸಭೆ, ಸಮಾರಂಭಗಳನ್ನು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಂತೆ ಮುಂದೂಡಲಾಗಿದೆ ಎಂದು ಸಂಘದ ಅಧ್ಯಕ್ಷ ಪರಮೇಶ್ವರ ಸುಬ್ರಾಯ ಹೆಗಡೆ ಹುಲಿಮಕ್ಕಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೋಗರಸ್ತೆಯಲ್ಲಿ ರಿಕ್ಷಾ ಪಲ್ಟಿ ಒಂದು ಸಾವು, 7 ಜನರಿಗೆ ಗಾಯ
ಸಿದ್ದಾಪುರ,ಮಾ.13- ಜನರು ಪ್ರಯಾಣಿಸುತಿದ್ದ ರಿಕ್ಷಾ ಒಂದಕ್ಕೆ ಎದುರಿನಿಂದ ಬಂದ ದನ ತಪ್ಪಿಸಲು ಪ್ರಯತ್ನಿಸಿದ ರಿಕ್ಷಾ ಪಲ್ಟಿಯಾಗಿ ಇದರಲ್ಲಿ ಪ್ರಯಾಣಿಸುತಿದ್ದ 8ಜನರಲ್ಲಿ ಒಬ್ಬರು ಮೃತರಾಗಿ 7 ಜನರಿಗೆ ಗಾಯಗಳಾದ ದುರ್ಘಟನೆ ಇಂದು ಇಲ್ಲಿಯ ಜೋಗರಸ್ತೆಯ ಕುಂಬಾರಕುಳಿ ಬಳಿ ನಡೆದಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *