ಡಿ.ಕೆ.ಶಿ.ಪರಿಣಾಮ:ಪಕ್ಷತ್ಯಜಿಸಲಿದ್ದಾರಾ ಜೆ.ಡಿ.ಎಸ್.ನಾಯಕರು?

ಹಲವು ಸುತ್ತಿನ ಕಸರತ್ತಿನ ನಂತರ ಮಾಜಿ ಸಚಿವ ಡಿ.ಕೆ.ಶಿವಕುಮಾರ ಅಂತೂ ಇಂತೂ ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿದ್ದಾರೆ.
ಡಿ.ಕೆ.ಶಿ ಕೆ.ಪಿ.ಸಿ.ಸಿ. ಅಧ್ಯಕ್ಷರಾಗಲು ವಿರೋಧಿಸಿದ್ದರು ಎನ್ನಲಾದ ಕೆಲವು ಮುಖಂಡರ ಒಪ್ಪಿಗೆ ಇಲ್ಲದೆ ಶಿವಕುಮಾರ ಮತ್ತು ಸಿದ್ಧರಾಮಯ್ಯ ತಮ್ಮ ಪ್ರಾಬಲ್ಯ ಮೆರೆದಿದ್ದಾರೆ.
ಡಿ.ಕೆ.ಶಿವಕುಮಾರ ಸಮರ್ಥ ಮತ್ತು ವಿರೋಧಿಗಳಿಂದ ಗಾಯಗೊಂಡಿರುವ ನಾಯಕ.
ಶಿವಕುಮಾರರ ವೈಯಕ್ತಿಕ, ಸಾಮೂದಾಯಿಕ, ಇತರ ಶಕ್ತಿಗಳೆದುರು ಉಳಿದವರು ಉಳಿಯುವುದು ಕಷ್ಟ. ಇಂಥ ಡಿ.ಕೆ.ಶಿ. ಕೆ.ಪಿ.ಸಿ.ಸಿ. ಪಟ್ಟ ಏರುತ್ತಲೇ ರಾಜ್ಯ ರಾಜಕೀಯದಲ್ಲಿ ಅನೇಕ ರಾಜಕೀಯ ಲೆಕ್ಕಾಚಾರಗಳು ಪ್ರಾರಂಭವಾಗಿವೆ. ಡಿ.ಕೆ.ಶಿವಕುಮಾರ ಬಿ.ಜೆ.ಪಿ., ಜೆ.ಡಿ.ಎಸ್. ನ ಕೆಲವು ಶಾಸಕರು, ಮಾಜಿಶಾಸಕರೊಂದಿಗೆ ನಿಕಟ ಸಂಪರ್ಕದಲ್ಲಿರುವುದು ಗುಟ್ಟಿನ ವಿಷಯವೇನಲ್ಲ.
ಈಗಿನ ಮಾಹಿತಿ ಪ್ರಕಾರ ಡಿ.ಕೆ.ಶಿ. ಬಿ.ಜೆ.ಪಿ., ಜೆ.ಡಿ.ಎಸ್. ನ ಒಂದು ಡಜನ್ ಮಾಜಿ ಮತ್ತು ಹಾಲಿ ಶಾಸಕರಿಗೆ ಗಾಳ ಹಾಕಿದ್ದು ಅವರಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ, ಸಿ.ಬಿ.ಸುರೇಶ್,ಬೆಮಲ್ ಕಾಂತರಾಜ್, ರಮೇಶ್‍ಬಾಬು, ಮಧುಬಂಗಾರಪ್ಪ ಸೇರಿದ್ದಾರೆ ಎನ್ನಲಾಗುತ್ತಿದೆ.
ಊಹೆಗಳ ಪ್ರಕಾರ ಸಿ.ಬಿ.ಐ. ನಿಂದ ಡಿ.ಕೆ.ಶಿ. ಕೆಣಕಿರುವ ಬಿ.ಜೆ.ಪಿ. ಮತ್ತು ರಾಜ್ಯದ ಪರ್ಯಾಯ ಪಕ್ಷವಾಗಿರುವ ಜೆ.ಡಿ.ಎಸ್. ನಾಯಕರ ಮೇಲೆ ಡಿಕೆಶಿ ದೃಷ್ಟಿ ನೆಟ್ಟಿದ್ದಾರೆ ಎನ್ನಲಾಗುತ್ತಿದೆ.
ಇದಕ್ಕೆ ಪುಷ್ಠಿಕೊಡುವಂತೆ ಇತ್ತ ಡಿ.ಕೆ.ಶಿ. ಕೆ.ಪಿ.ಸಿ.ಸಿ. ಅಧ್ಯಕ್ಷರಾಗುತ್ತಲೇ ಅತ್ತ ಮಧುಬಂಗಾರಪ್ಪ, ಎಸ್.ಆರ್. ಶ್ರೀನಿವಾಸ ರ ಜೊತೆಗೆ ಕೆಲವರು ಇದೇವಾರ ಬೆಂಗಳೂರಿನಲ್ಲಿ ಆಪ್ತರ ಸಭೆ ಆಯೋಜಿಸಿರುವ ಸುದ್ದಿ ಮಾರ್ದನಿಸಿದೆ. ಡಿ.ಕೆ.ಶಿ. ಮತ್ತು ಸಿದ್ಧರಾಮಯ್ಯ ಸೇರಿ ದಿ.ಎಸ್.ಬಂಗಾರಪ್ಪನವರ ಶಿಷ್ಯಂದಿರು ಮತ್ತು ಮೂಲ ಜನತಾದಳದ ಕೆಲವು ನಾಯಕರನ್ನು ಸಂಪರ್ಕಿಸಲು ಯೋಜಿಸಿದ್ದು ಈ ಯೋಚನೆ ಕಾರ್ಯಾರೂಪಕ್ಕೆ ಬಂದರೆ ಕೆಲವು ಬಿ.ಜೆ.ಪಿ.ನಾಯಕರು ಮತ್ತು ಜೆ.ಡಿ.ಎಸ್. ಪ್ರಮುಖರು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗುತ್ತಿದೆ.
ಡಿ.ಕೆ.ಶಿವಕುಮಾರ ಜೊತೆ ಉತ್ತಮ ಸಂಬಂಧ ಹೊಂದಿರುವ ಕೆಲವು ಕಾಂಗ್ರೆಸ್ ನಾಯಕರು, ಇತರ ಪಕ್ಷಗಳ ಮುಖಂಡರು ಡಿ.ಕೆ.ಶಿ. ಮತ್ತು ಸಿದ್ಧರಾಮಯ್ಯನವರ ಕೈ ಬಲಪಡಿಸಿ ಕಾಂಗ್ರೆಸ್ ಪುನಶ್ಚೇತನಕ್ಕೆ ಪ್ರಯತ್ನಿಸಲಿದ್ದಾರೆ ಎನ್ನಲಾಗುತ್ತಿದೆ.
ಬಿ.ಜೆ.ಪಿ.ಯ ಕೆಲವು ಅಸಂತುಷ್ಟರು ಕೂಡಾ ಕಾಂಗ್ರೆಸ್ ಬಲಪಡಿಸುವ ಹಿನ್ನೆಲೆಯಲ್ಲಿ ಸಹಕರಿಸಲು ಸಿದ್ಧರಿರುವುದಾಗಿ ತಿಳಿಸಿದ್ದು ಡಿ.ಕೆ.ಶಿ. ಕೆ.ಪಿ.ಸಿ.ಸಿ. ಅಧ್ಯಕ್ಷರಾದ ನಂತರ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಉಂಟಾಗಿದೆ ಎನ್ನಲಾಗುತ್ತಿದೆ. ಈ ಬೆಳವಣಿಗೆಗಳ ನಡುವೆ ಮಾಮು ಕುಮಾರಸ್ವಾಮಿ ಜಾದಳದ ಬಲವರ್ಧನೆಗೆ ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಮೊರೆಹೋಗಿದ್ದು ಒಕ್ಕಲಿಗರ ಮೇಲಾಟ, ಲಿಂಗಾಯತರ ಒಳಜಗಳದಲ್ಲಿ ಮಾಮು ಕುಮಾರಸ್ವಾಮಿ ಮತ್ತು ಮಾಮು ಸಿದ್ಧರಾಮಯ್ಯ ಸೈಲೆಂಟಾಗಿ ವ್ಯವಹರಿಸುತ್ತಿರುವುದರಿಂದ ಡಿ.ಕೆ.ಶಿ. ಕೂಡಾ ನಿಧಾನವಾಗಿ ಹೆಜ್ಜೆಹಾಕಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

ಕರಾವಳಿ ಸಂಚಲನ- ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾದರೆ ಮಲೆನಾಡು, ಕರಾವಳಿಯಲ್ಲಿ ಜೆ.ಡಿ.ಎಸ್.ಬರಿದಾಗುವ ಸಾಧ್ಯತೆ ಇದೆ. ಉತ್ತರಕನ್ನಡ,ದಕ್ಷಿಣಕನ್ನಡ ಸೇರಿದಂತೆ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಭಾಗದ ಕೆಲವು ಬಂಗಾರಪ್ಪ ಅಭಿಮಾನಿಗಳು ಮಧುಬಂಗಾರಪ್ಪ ಜೊತೆ ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಎನ್ನಲಾಗುತ್ತಿದೆ.

ಕಾರವಾರ ಮಾಜಾಳಿಯಲ್ಲಿ ನೀಲಿಸಮುದ್ರ!
ಪಾಚಿಗಳು ಸೃಷ್ಟಿಸುವ ನೀಲಿ
ಬೆಳಕಿನಿಂದ ನೀಲಿಯಾದ ಕಡಲು

ಕಾರವಾರ ಮಾಜಾಳಿ ಕಡಲ ತೀರದಲ್ಲಿ ರಾತ್ರಿ ವೇಳೆ ಸಮುದ್ರ ನೀಲಿಬಣ್ಣಕ್ಕೆ ತಿರುಗುತಿದ್ದು ಸ್ಥಳಿಯರ ಕುತೂಹಲಕ್ಕೆ ಕಾರಣವಾಗಿದೆ. ಸಮುದ್ರದ ನೀರು ಹಗಲು ಮತ್ತು ರಾತ್ರಿವೇಳೆ ತಿಳಿನೀಲಿಯಾಗಿ ಕಾಣುವುದು ಸಾಮಾನ್ಯ. ಆದರೆ ಮಿಂಚುಹುಳು ಸೃಷ್ಟಿಸುವ ನೀಲಿ ಬೆಳಕಿನಂಥ ಬಣ್ಣ ಸಮುದ್ರದಲ್ಲಿ ಕಾಣುವುದರಿಂದ ಸಹಜವಾಗಿ ಕುತೂಹಲ ಹೆಚ್ಚಿದೆ. ಹೀಗೆ ನೀಲಿಬಾನಿನ ರೀತಿ ರಾತ್ರಿಯಲ್ಲಿ ನೀಲಿಕಡಲಾಗಲು ಪಾಚಿಗಳು ಕಾರಣ ಎನ್ನಲಾಗುತ್ತಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *