ರಾಜ್ಯಸಭಾ ಸದಸ್ಯನಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಾತನಾಡುವೆ: ರಂಜನ್ ಗೊಗೊಯ್

ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ರಿಂದ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಪ್ರಮಾಣವಚನ ಸ್ವೀಕರಿಸಿದ ನಂತರ ನಾಮನಿರ್ದೇಶನದ ಬಗ್ಗೆ ಮಾತನಾಡಲಿದ್ದೇನೆ ಎಂದು ಹೇಳಿದ್ದಾರೆ.
ಗೋಗೊಯ್ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುತ್ತಿದ್ದಂತೆಯೇ ಎಲ್ಲಾ ಕಡೆ ಅವರು ನ್ಯಾಯಮೂರ್ತಿಗಳಾಗಿದ್ದಾಗ ಮೋದಿ ಸರ್ಕಾರಕ್ಕೆ ಮಾಡಿದ ಸಹಾಯಗಳಿಗೆ ಇದು ಪ್ರತಿಫಲ ಎಂಬರ್ಥದಲ್ಲಿ ಜನರು ಟೀಕೆಗಳನ್ನು ಮಾಡಿದ್ದರು.
“ಬಹುಶಃ ನಾಳೆ ದೆಹಲಿಗೆ ಹೋಗುತ್ತೇನೆ. ಮೊದಲು ಪ್ರಮಾಣವಚನ ಸ್ವೀಕರಿಸುತ್ತೇನೆ, ನಂತರ ನಾನು ಇದನ್ನು ಏಕೆ ಒಪ್ಪಿಕೊಂಡೆ ಎಂದು ಮಾಧ್ಯಮಗಳೊಂದಿಗೆ ವಿವರವಾಗಿ ಮಾತನಾಡುತ್ತೇನೆ …” ಎಂದು ರಂಜನ್ ಗೊಗೊಯ್ ಅಸ್ಸಾಂನ ಗುವಾಹಟಿಯಲ್ಲಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಸುಮಾರು ೧೩ ತಿಂಗಳುಗಳ ಕಾಲ ಸೇವೆ ಸಲ್ಲಿಸಿದ ಗೊಗೊಯ್ ಕಳೆದ ವರ್ಷ ನವೆಂಬರ್‌ನಲ್ಲಿ ನಿವೃತ್ತರಾಗಿದ್ದರು.೨೦೧೮ ರ ಜನವರಿಯಲ್ಲಿ ದೀಪಕ್ ಮಿಶ್ರಾ ಮುಖ್ಯ ನ್ಯಾಯಮೂರ್ತಿಯಾಗಿದ್ದಾಗ ಮೊದಲ ಬಾರಿ ಪತ್ರಿಕಾಗೋಷ್ಠಿ ನಡೆಸಿದ ನಾಲ್ವರು ಸುಪ್ರೀಂ ಕೋರ್ಟಿನ ನ್ಯಾಯಾಧೀಶರಲ್ಲಿ ಗೊಗೊಯ್ ಕೂಡಾ ಸೇರಿದ್ದರು. ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಆಯ್ದ ಆದ್ಯತೆಯ ನ್ಯಾಯಾಧೀಶರಿಗೆ ಪ್ರಕರಣಗಳ ನಿಯೋಜನೆ ಮತ್ತು ಸೂಕ್ಷ್ಮ ಪ್ರಕರಣಗಳನ್ನು ಕಿರಿಯ ನ್ಯಾಯಾಧೀಶರಿಗೆ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.
ಸಾಮಾನ್ಯವಾಗಿ ಸೆಲೆಬ್ರಿಟಿಗಳು ಮತ್ತು ಕಲಾವಿದರು ಪ್ರಾಬಲ್ಯ ಹೊಂದಿರುವ ರಾಜ್ಯಸಭೆಗೆ ಇದುವರೆಗೆ ಮುಖ್ಯ ನ್ಯಾಯಾಧೀಶರನ್ನು ರಾಷ್ಟçಪತಿಗಳು ನಾಮಕರಣ ಮಾಡಿದ ಉದಾಹರಣೆಯಿಲ್ಲ.

ಕರೋನಾ ಪರಿಣಾಮ:
ವಾರದ ಸಂತೆಯ ಜಾಗ ಬದಲು
ಸಿದ್ಧಾಪುರ,ಮಾ.೧೭- ಕರೋನಾ ಎಲ್ಲರನ್ನೂ ನಡುಗಿಸುತಿದ್ದು ಇಲ್ಲಿಯ ಮಾರುಕಟ್ಟೆ ಇಲ್ಲದ ರಸ್ತೆಯ ಮೇಲೆ ನಡೆಯುತಿದ್ದ ಬುಧವಾರದ ವಾರದ ಸಂತೆಯನ್ನು ತಾತ್ಕಾಲಿಕವಾಗಿ ನೆಹರೂ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ.
ಈ ಬಗ್ಗೆ ಇಂದು ನಡೆದ ತಾಲೂಕಾ ಆಡಳಿತದ ಸಭೆಯಲ್ಲಿ ನಿರ್ಣಯಿಸಿದ್ದು ರಸ್ತೆಮೇಲೆಯೇ ನಡೆಯುತಿದ್ದ ಸಂತೆ ಸ್ಥಳಿಯರು, ಜನಸಾಮಾನ್ಯರಿಗೆ ತೊಂದರೆ ಮಾಡುವುದಲ್ಲದೆ ರಸ್ತೆಯಲ್ಲಿ ನಡೆದು ಹೋಗುವ ಜನರಿಗೆ ಕೂಡಾ ಸಂತೆಯ ಬಿಸಿ ತಾಗಲಿರುವ ಹಿನ್ನೆಲೆಯಲ್ಲಿ ಕರೋನಾ ಮುನ್ನೆಚ್ಚರಿಕೆಯಾಗಿ ವಾರದ ಸಂತೆಯ ಸ್ಥಳವನ್ನು ಹಳೆ ಜಾಗದಿಂದ ನೆಹರೂ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. ಸಿದ್ಧಾಪುರದ ರಸ್ತೆ ಮೇಲಿನ ಸಂತೆಯ ಬಗ್ಗೆ ಬಹುಹಿಂದಿನಿAದಲೂ ವಿರೋಧವಿತ್ತು. ಈ ಬಗ್ಗೆ ಶಾಸಕರು, ಸಚಿವರು, ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರೂ ಕೆಲವರ ಹಿತಾಸಕ್ತಿಯಿಂದಾಗಿ ವಾರದ ಸಂತೆಯ ಜಾಗ ಬದಲಾಗಿರಲಿಲ್ಲ ಈಗ ಕರೋನಾ ಭೀತಿ ಈ ರಸ್ತೆ ಮೇಲಿನ ಅವ್ಯವಸ್ಥಿತ ಸಂತೆಯನ್ನು ಸ್ಥಳಾಂತಿಸುವAತೆ ಮಾಡಿದೆ. ಈ ಬಗ್ಗೆ ಸಾರ್ವಜನಿಕರು ಹ಼ರ್ಷಿತರಾಗಿದ್ದು ಜನರು, ಸ್ಥಳಿಯರು ಎಲ್ಲರಿಗೂ ಅನಾನುಕೂಲವಾದ ಬುಧವಾರದ ವಾರದ ಸಂತೆಯ ಸ್ಥಳ ಬದಲಾವಣೆ ಬಗ್ಗೆ ವ್ಯಾಪಕ ಸ್ವಾಗತ ವ್ಯಕ್ತವಾಗಿದೆ. ತಾಲೂಕಿನ ಮಂಗನಕಾಯಿಲೆ ಮತ್ತು ಕರೋನಾ ಮುನ್ನೆಚ್ಚರಿಕೆಗಳ ಬಗ್ಗೆ ಕೂಡಾ ಈ ತುರ್ತು ಸಭೆಯಲ್ಲಿ ಚರ್ಚೆಯಾಗಿದ್ದು ಮಂಗನಕಾಯಿಲೆ ಮತ್ತು ಕರೋನಾ ತಡೆ, ಮುನ್ನೆಚ್ಚರಿಕೆಗಾಗಿ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದ್ದು ಸಾರ್ವಜನಿಕರು ಭಯಮುಕ್ತರಾಗಿರಲು ವಿನಂತಿಸಿದ್ದಾರೆ.

ಮೊದಲು ಮಾನವನಾಗು ಸೂಲಿಬೆಲೆ
ಹೀಗೆಂದು ಟ್ವೀಟ್ ಮಾಡುವ ಮೂಲಕ ನಟ ಧನಂಜಯ್ ಚಕ್ರವರ್ತಿ ಸೂಲಿಬೆಲೆಯವರಿಗೆ ಟಕ್ಕರ್ ನೀಡಿದ್ದಾರೆ. ಇಂದು ಕರೋನಾ ಬಗ್ಗೆ ನಂಜಿನ ಹೇಳಿಕೆ ನೀಡಿದ ಚಕ್ರವರ್ತಿ ಸೂಲಿಬೆಲೆ ಇಟಲಿಯಲ್ಲಿ ಜನ ಸಾಯುತ್ತಿರುವ ಬಗ್ಗೆ ಏಸು ಕ್ರಿಸ್ತರನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *