ರಾಜ್ಯಸಭಾ ಸದಸ್ಯನಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಾತನಾಡುವೆ: ರಂಜನ್ ಗೊಗೊಯ್

ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ರಿಂದ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಪ್ರಮಾಣವಚನ ಸ್ವೀಕರಿಸಿದ ನಂತರ ನಾಮನಿರ್ದೇಶನದ ಬಗ್ಗೆ ಮಾತನಾಡಲಿದ್ದೇನೆ ಎಂದು ಹೇಳಿದ್ದಾರೆ.
ಗೋಗೊಯ್ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುತ್ತಿದ್ದಂತೆಯೇ ಎಲ್ಲಾ ಕಡೆ ಅವರು ನ್ಯಾಯಮೂರ್ತಿಗಳಾಗಿದ್ದಾಗ ಮೋದಿ ಸರ್ಕಾರಕ್ಕೆ ಮಾಡಿದ ಸಹಾಯಗಳಿಗೆ ಇದು ಪ್ರತಿಫಲ ಎಂಬರ್ಥದಲ್ಲಿ ಜನರು ಟೀಕೆಗಳನ್ನು ಮಾಡಿದ್ದರು.
“ಬಹುಶಃ ನಾಳೆ ದೆಹಲಿಗೆ ಹೋಗುತ್ತೇನೆ. ಮೊದಲು ಪ್ರಮಾಣವಚನ ಸ್ವೀಕರಿಸುತ್ತೇನೆ, ನಂತರ ನಾನು ಇದನ್ನು ಏಕೆ ಒಪ್ಪಿಕೊಂಡೆ ಎಂದು ಮಾಧ್ಯಮಗಳೊಂದಿಗೆ ವಿವರವಾಗಿ ಮಾತನಾಡುತ್ತೇನೆ …” ಎಂದು ರಂಜನ್ ಗೊಗೊಯ್ ಅಸ್ಸಾಂನ ಗುವಾಹಟಿಯಲ್ಲಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಸುಮಾರು ೧೩ ತಿಂಗಳುಗಳ ಕಾಲ ಸೇವೆ ಸಲ್ಲಿಸಿದ ಗೊಗೊಯ್ ಕಳೆದ ವರ್ಷ ನವೆಂಬರ್‌ನಲ್ಲಿ ನಿವೃತ್ತರಾಗಿದ್ದರು.೨೦೧೮ ರ ಜನವರಿಯಲ್ಲಿ ದೀಪಕ್ ಮಿಶ್ರಾ ಮುಖ್ಯ ನ್ಯಾಯಮೂರ್ತಿಯಾಗಿದ್ದಾಗ ಮೊದಲ ಬಾರಿ ಪತ್ರಿಕಾಗೋಷ್ಠಿ ನಡೆಸಿದ ನಾಲ್ವರು ಸುಪ್ರೀಂ ಕೋರ್ಟಿನ ನ್ಯಾಯಾಧೀಶರಲ್ಲಿ ಗೊಗೊಯ್ ಕೂಡಾ ಸೇರಿದ್ದರು. ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಆಯ್ದ ಆದ್ಯತೆಯ ನ್ಯಾಯಾಧೀಶರಿಗೆ ಪ್ರಕರಣಗಳ ನಿಯೋಜನೆ ಮತ್ತು ಸೂಕ್ಷ್ಮ ಪ್ರಕರಣಗಳನ್ನು ಕಿರಿಯ ನ್ಯಾಯಾಧೀಶರಿಗೆ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.
ಸಾಮಾನ್ಯವಾಗಿ ಸೆಲೆಬ್ರಿಟಿಗಳು ಮತ್ತು ಕಲಾವಿದರು ಪ್ರಾಬಲ್ಯ ಹೊಂದಿರುವ ರಾಜ್ಯಸಭೆಗೆ ಇದುವರೆಗೆ ಮುಖ್ಯ ನ್ಯಾಯಾಧೀಶರನ್ನು ರಾಷ್ಟçಪತಿಗಳು ನಾಮಕರಣ ಮಾಡಿದ ಉದಾಹರಣೆಯಿಲ್ಲ.

ಕರೋನಾ ಪರಿಣಾಮ:
ವಾರದ ಸಂತೆಯ ಜಾಗ ಬದಲು
ಸಿದ್ಧಾಪುರ,ಮಾ.೧೭- ಕರೋನಾ ಎಲ್ಲರನ್ನೂ ನಡುಗಿಸುತಿದ್ದು ಇಲ್ಲಿಯ ಮಾರುಕಟ್ಟೆ ಇಲ್ಲದ ರಸ್ತೆಯ ಮೇಲೆ ನಡೆಯುತಿದ್ದ ಬುಧವಾರದ ವಾರದ ಸಂತೆಯನ್ನು ತಾತ್ಕಾಲಿಕವಾಗಿ ನೆಹರೂ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ.
ಈ ಬಗ್ಗೆ ಇಂದು ನಡೆದ ತಾಲೂಕಾ ಆಡಳಿತದ ಸಭೆಯಲ್ಲಿ ನಿರ್ಣಯಿಸಿದ್ದು ರಸ್ತೆಮೇಲೆಯೇ ನಡೆಯುತಿದ್ದ ಸಂತೆ ಸ್ಥಳಿಯರು, ಜನಸಾಮಾನ್ಯರಿಗೆ ತೊಂದರೆ ಮಾಡುವುದಲ್ಲದೆ ರಸ್ತೆಯಲ್ಲಿ ನಡೆದು ಹೋಗುವ ಜನರಿಗೆ ಕೂಡಾ ಸಂತೆಯ ಬಿಸಿ ತಾಗಲಿರುವ ಹಿನ್ನೆಲೆಯಲ್ಲಿ ಕರೋನಾ ಮುನ್ನೆಚ್ಚರಿಕೆಯಾಗಿ ವಾರದ ಸಂತೆಯ ಸ್ಥಳವನ್ನು ಹಳೆ ಜಾಗದಿಂದ ನೆಹರೂ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. ಸಿದ್ಧಾಪುರದ ರಸ್ತೆ ಮೇಲಿನ ಸಂತೆಯ ಬಗ್ಗೆ ಬಹುಹಿಂದಿನಿAದಲೂ ವಿರೋಧವಿತ್ತು. ಈ ಬಗ್ಗೆ ಶಾಸಕರು, ಸಚಿವರು, ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರೂ ಕೆಲವರ ಹಿತಾಸಕ್ತಿಯಿಂದಾಗಿ ವಾರದ ಸಂತೆಯ ಜಾಗ ಬದಲಾಗಿರಲಿಲ್ಲ ಈಗ ಕರೋನಾ ಭೀತಿ ಈ ರಸ್ತೆ ಮೇಲಿನ ಅವ್ಯವಸ್ಥಿತ ಸಂತೆಯನ್ನು ಸ್ಥಳಾಂತಿಸುವAತೆ ಮಾಡಿದೆ. ಈ ಬಗ್ಗೆ ಸಾರ್ವಜನಿಕರು ಹ಼ರ್ಷಿತರಾಗಿದ್ದು ಜನರು, ಸ್ಥಳಿಯರು ಎಲ್ಲರಿಗೂ ಅನಾನುಕೂಲವಾದ ಬುಧವಾರದ ವಾರದ ಸಂತೆಯ ಸ್ಥಳ ಬದಲಾವಣೆ ಬಗ್ಗೆ ವ್ಯಾಪಕ ಸ್ವಾಗತ ವ್ಯಕ್ತವಾಗಿದೆ. ತಾಲೂಕಿನ ಮಂಗನಕಾಯಿಲೆ ಮತ್ತು ಕರೋನಾ ಮುನ್ನೆಚ್ಚರಿಕೆಗಳ ಬಗ್ಗೆ ಕೂಡಾ ಈ ತುರ್ತು ಸಭೆಯಲ್ಲಿ ಚರ್ಚೆಯಾಗಿದ್ದು ಮಂಗನಕಾಯಿಲೆ ಮತ್ತು ಕರೋನಾ ತಡೆ, ಮುನ್ನೆಚ್ಚರಿಕೆಗಾಗಿ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದ್ದು ಸಾರ್ವಜನಿಕರು ಭಯಮುಕ್ತರಾಗಿರಲು ವಿನಂತಿಸಿದ್ದಾರೆ.

ಮೊದಲು ಮಾನವನಾಗು ಸೂಲಿಬೆಲೆ
ಹೀಗೆಂದು ಟ್ವೀಟ್ ಮಾಡುವ ಮೂಲಕ ನಟ ಧನಂಜಯ್ ಚಕ್ರವರ್ತಿ ಸೂಲಿಬೆಲೆಯವರಿಗೆ ಟಕ್ಕರ್ ನೀಡಿದ್ದಾರೆ. ಇಂದು ಕರೋನಾ ಬಗ್ಗೆ ನಂಜಿನ ಹೇಳಿಕೆ ನೀಡಿದ ಚಕ್ರವರ್ತಿ ಸೂಲಿಬೆಲೆ ಇಟಲಿಯಲ್ಲಿ ಜನ ಸಾಯುತ್ತಿರುವ ಬಗ್ಗೆ ಏಸು ಕ್ರಿಸ್ತರನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *